Home Crime News ಕಾಳು ಮೆಣಸು ಕಳ್ಳತನ ಪ್ರಕರಣ-ಇಬ್ಬರು ಆರೋಪಿಗಳ ಬಂಧನ
Crime NewschikamagalurHomeLatest Newsnamma chikmagalur

ಕಾಳು ಮೆಣಸು ಕಳ್ಳತನ ಪ್ರಕರಣ-ಇಬ್ಬರು ಆರೋಪಿಗಳ ಬಂಧನ

Share
Share

ಚಿಕ್ಕಮಗಳೂರು: ಕಾಳು ಮೆಣಸು ಕಳ್ಳತನ ಪ್ರಕರಣದಲ್ಲಿ ಇಬ್ಬರು ಆರೋಪಿತರನ್ನು ಬಂಧಿಸಿ ೧.೨ ಲಕ್ಷ ರೂ ಮೌಲ್ಯದ ೧೯೫ ಕೆಜಿ ಕಾಳುಮೆಣಸು, ಕೃತ್ಯಕ್ಕೆ ಬಳಸಿದ ೩ ಲಕ್ಷ ರೂ ಮೌಲ್ಯದ ಹುಂಡೈ ಕಾರು ಹಾಗೂ ೧೦ಸಾವಿರ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗ್ರಾಮಾಂತರ ಪೊಲೀಸರಿಗೆ ಅಕ್ಟೋಬರ್ ೫ ರಂದು ಎನ್.ಸಿ. ನಾಗರಾಜು ಎಂಬುವರು ದಾಸರಹಳ್ಳಿ ತೋಟದ ಮನೆಯಲ್ಲಿಟ್ಟಿದ್ದ ೧.೨೦ ಲಕ್ಷ ರೂ. ಬೆಲೆ ಬಾಳುವ ೧೯೫ ಕೆಜಿ ಕಾಳುಮೆಣಸನ್ನು ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವುದಾಗಿ ದೂರು ನೀಡಿದ್ದರು.

ಆರೋಪಿಗಳನ್ನು ಶೀಘ್ರವಾಗಿ ಪತ್ತೆ ಹಚ್ಚಿ ಕದ್ದಮಾಲನ್ನು ವಶಕ್ಕೆ ಪಡೆಯುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ,ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಸಿ.ಟಿ.ಜಯಕುಮಾರ್, ಡಿವೈಎಸ್‌ಪಿ ಶೈಲೆಂದ್ರ ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಠಾಣೆಯ ಪೊಲೀಸ್ ನಿರೀಕ್ಷಕ ಸಚಿನ್ ಕುಮಾರ ನೇತೃತ್ವದಲ್ಲಿ ಪೊಲೀಸ್ ಉಪನಿರೀಕ್ಷಕ ಎಸ್.ವಿ. ರಘುನಾಥ, ಸಿಬ್ಬಂದಿಗಳಾದ ಲೋಹಿತ್, ರಮೇಶ, ಲಕ್ಷ್ಮಣ, ಕಿರಣ, ಶಿವರಾಜ, ಶಶಿಧರ ಮತ್ತು ವಿನಾಯಕ ರನ್ನೊಳಗೊಂಡ ಅಪರಾಧ ಪತ್ತೆ ಕಾರ್ಯದ ತನಿಖಾ ತಂಡವನ್ನು ರಚಿಸಲಾಗಿತ್ತು.

ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಗಳಾದ ಪ್ರಜ್ವಲ್, ಸುನಿಲ್ ಎಂಬುವರನ್ನು ವಶಕ್ಕೆ ಪಡೆದು ಕಳ್ಳತನವಾಗಿದ್ದ ೧.೨೦ ಲಕ್ಷ ರೂ ಬೆಲೆ ಬಾಳುವ ೧೯೫ ಕೆ.ಜಿ.ಕಾಳು ಮೆಣಸು, ಹಾಗೂ ಕಳ್ಳತನ ಮಾಡಲು ಉಪಯೋಗಿಸಿದ ೩ ಲಕ್ಷ ಬೆಲೆ ಬಾಳುವ ಹ್ಯೂಂಡಾಯ್ ಕಾರು ಹಾಗೂ ಆರೋಪಿಗಳಿಂದ ೧೦ಸಾವಿರ ರೂ ನಗದು ಹಣವನ್ನು ವಶಕ್ಕೆ ತೆಗೆದುಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂದನಕ್ಕೆ ಒಪ್ಪಿಸಿದ್ದಾರೆ.

ಮೆಣಸು ಕಳವು ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ ಆರೋಪಿತರನ್ನು, ಕದ್ದಮಾಲನ್ನು ವಶಕ್ಕೆ ಪಡೆದು ಸೂಕ್ತ ಕಾನೂನು ಕ್ರಮ ಜರುಗಿಸುವಲ್ಲಿ ಶ್ರಮಿಸಿದ ಅಪರಾಧ ಪತ್ತೆ ಕಾರ್ಯದ ತನಿಖಾ ತಂಡದಲ್ಲಿದ್ದ ಅಧಿಕಾರಿ ಸಿಬ್ಬಂದಿಯವರ ಕರ್ತವ್ಯವನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

Pepper theft case – two accused arrested

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...