Home namma chikmagalur chikamagalur ದೈಹಿಕ-ಮಾನಸಿಕ ಸದೃಢವಾಗಿದ್ದಾಗ ಪರಿಪೂರ್ಣ ಆರೋಗ್ಯ
chikamagalurLatest Newsnamma chikmagalur

ದೈಹಿಕ-ಮಾನಸಿಕ ಸದೃಢವಾಗಿದ್ದಾಗ ಪರಿಪೂರ್ಣ ಆರೋಗ್ಯ

Share
Share

ಚಿಕ್ಕಮಗಳೂರು:  ಸಮಾಜದಲ್ಲಿ ಮನುಷ್ಯ ದೈಹಿಕ ಮತ್ತು ಮಾನಸಿಕವಾಗಿ ಸದೃಢ ಆರೋಗ್ಯವಾಗಿದ್ದಾಗ ಮಾತ್ರ ಪರಿಪೂರ್ಣ ಆರೋಗ್ಯವಂತರಾಗಿರಲು ಸಾಧ್ಯ ಎಂದು ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಕರೆನೀಡಿದರು.

ಅವರು ಇಂದು ಐಡಿಎಸ್‌ಜಿ ಸರ್ಕಾರಿ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರಕ್ಷಕ ಇಲಾಖೆ, ವಾರ್ತಾ ಇಲಾಖೆ, ಯುವ ರೆಡ್‌ಕ್ರಾಸ್ ಘಟಕ, ಐಡಿಎಸ್‌ಜಿ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇಹಕ್ಕೆ ಕಾಯಿಲೆ ಅಥವಾ ತೊಂದರೆಯಾದಾಗ ಚಿಕಿತ್ಸೆಗೆ ಮುಂದಾಗುತ್ತೇವೆ, ಬಿಪಿ, ಶುಗರ್, ಥೈರಾಯ್ಡ್ ಮುಂತಾದ ಕಾಯಿಲೆಗಳ ಬಗ್ಗೆ ಬೇರೆಯವರೊಂದಿಗೆ ಹಂಚಿಕೊಳ್ಳುತ್ತೇವೆ, ಈ ನಿಟ್ಟಿನಲ್ಲಿ ಸಮುದಾಯದ ಆರೋಗ್ಯ ಸಹ ಅವಶ್ಯಕವಾಗಿದೆ ಎಂದರು.

ತುರ್ತುಪರಿಸ್ಥಿತಿ, ಯುದ್ಧಗಳಲ್ಲಿ ಭಾಗವಹಿಸುವ ವ್ಯಕ್ತಿಗಳಿಗೆ ಬರುವ ನೋವು, ಮಾನಸಿಕ ಕಾಯಿಲೆಗಳ ಬಗ್ಗೆ ಜಾಗೃತಿ ವಹಿಸಲು ಘೋಷವಾಕ್ಯವನ್ನು ನೀಡಲಾಗಿದ್ದು, ದೈಹಿಕ, ಮಾನಸಿಕವಾಗಿ ಸದೃಢರಾಗಿದ್ದಾಗ ಮಾತ್ರ ಆರೋಗ್ಯವಂತರಾಗಿದ್ದಾರೆಂಬುದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಉದ್ದೇಶ ಎಂದು ಹೇಳಿದರು.

ಶೇ.೮ ಕ್ಕಿಂತ ಹೆಚ್ಚು ಪ್ರಪಂಚದಲ್ಲಿ ವಿವಿಧ ರೀತಿಯ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ, ಮೊಬೈಲ್ ಗೀಳು ಹೆಚ್ಚಿಸಿಕೊಂಡವರು ಕೂಡ ಮಾನಸಿಕ ಕಾಯಿಲೆಗೆ ಒಳಗಾಗಿದ್ದಾರೆ ಎಂದು ಅರ್ಥೈಸಲಾಗುತ್ತಿದೆ ಎಂದು ತಿಳಿಸಿದರು.

ಕಾನೂನಿನಲ್ಲಿ ಕರುಣೆ ಇಲ್ಲ, ಸರ್ಕಾರ ನಿಗದಿಪಡಿಸಿರುವ ಅವದಿಗಿಂತ ಮೊದಲು ಮದುವೆಯಾಗಿದ್ದರೆ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗುತ್ತದೆ. ಎಫ್‌ಎಸ್‌ಎಲ್ ವರದಿಯಲ್ಲಿ ಗರ್ಭಿಣಿಯಾಗಿರುವುದು ದೃಢಪಟ್ಟರೆ ಕನಿಷ್ಟ ೨೦ ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಡಿಎಸ್‌ಜಿ ಕಾಲೇಜಿನ ಪ್ರಾಂಶುಪಾಲರಾದ ತಸ್ನಿಮ್ ಕೌಸರ್ ಮನಿಯಾರ್ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಮಾನಸಿಕ ಕಾರ್ಯಕ್ರಮಾಧಿಕಾರಿ ಡಾ. ಬಾಲಕೃಷ್ಣ, ಮಾನಸಿಕ ತಜ್ಞ ಡಾ. ವಿನಯ್ ಕುಮಾರ್, ಆರ್.ಸಿ.ಹೆಚ್ ಅಧಿಕಾರಿ ಡಾ. ಮಂಜುನಾಥ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸೀಮಾ, ಡಾ. ಅನಿಕೇತ್, ಹರ್ಷ, ವೈ.ಎಂ ಲಲಿತ, ಗಣೇಶ್, ಜಯಣ್ಣ ಮತ್ತಿತರರು ಉಪಸ್ಥಿತರಿದ್ದರು. ಮೊದಲಿಗೆ ಆರೋಗ್ಯ ಇಲಾಖೆಯ ಬೇಬಿ ಸ್ವಾಗತಿಸಿದರು.

Perfect health is when you are physically and mentally fit.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...