Home namma chikmagalur chikamagalur ಖಾಸಗಿ ಪೆಟ್ರೋಲ್ ಬಂಕ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಹೆಚ್ಚಳ
chikamagalurHomeLatest Newsnamma chikmagalur

ಖಾಸಗಿ ಪೆಟ್ರೋಲ್ ಬಂಕ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಹೆಚ್ಚಳ

Share
Share

ಚಿಕ್ಕಮಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಇಂಧನ ಮಾರುಕಟ್ಟೆಯಲ್ಲಿ ಭಾರೀ ಏರುಪೇರು ಉಂಟಾಗಿದ್ದು, ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ವಿಶೇಷವಾಗಿ ಜಿಲ್ಲೆಯ ಖಾಸಗಿ ಪೆಟ್ರೋಲ್ ಬಂಕ್‌ಗಳಲ್ಲಿ ಪ್ರತಿ ಲೀಟರ್‌ಗೆ 3 ರಿಂದ 5 ರೂಪಾಯಿಗಳಷ್ಟು ದರ ಹೆಚ್ಚಳವಾಗಿದೆ.

ಪ್ರಮುಖವಾಗಿ ನಯಾರಾ ಬಂಕ್‌ಗಳಲ್ಲಿ ಪೆಟ್ರೋಲ್ ದರ 5 ರೂಪಾಯಿ ಹಾಗೂ ಡೀಸೆಲ್ ದರ 3 ರೂಪಾಯಿಯಷ್ಟು ಏರಿಕೆಯಾಗಿರುವುದು ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿದೆ. ಪ್ರಸ್ತುತ ಇಂಧನ ಪೂರೈಕೆಯ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳಾಗಿದ್ದು, ‘ದುಡ್ಡಿದ್ದವರಿಗೆ ಮಾತ್ರ ದುನಿಯಾ’ ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ.

ಖಾಸಗಿ ಬಂಕ್ ಮಾಲೀಕರು ಪ್ರತಿದಿನ ಬೆಳಗ್ಗೆ 11 ಗಂಟೆಯೊಳಗೆ ಹಣ ಪಾವತಿಸಿ ಇಂಡೆಂಟ್ ಸಲ್ಲಿಸಿದರೆ ಮಾತ್ರ ಇಂಧನ ಪೂರೈಕೆಯಾಗುತ್ತಿದೆ. ನಗದು ಪಾವತಿಸಿದರೆ ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ಲಭ್ಯವಾಗುವಂತಹ ಕಟ್ಟುನಿಟ್ಟಿನ ನಿಯಮ ಜಾರಿಗೆ ಬಂದಿದೆ.

ದರ ಏರಿಕೆಯ ಬಿಸಿ ತಟ್ಟಿದ್ದರೂ ಸಹ, ಚಿಕ್ಕಮಗಳೂರು ನಗರದಲ್ಲಿ ಸದ್ಯಕ್ಕೆ ಪೆಟ್ರೋಲ್ ಅಥವಾ ಡೀಸೆಲ್ ಅಭಾವ ಸೃಷ್ಟಿಯಾಗಿಲ್ಲ. ಸಾರ್ವಜನಿಕರು ಬಾಟಲಿ, ಡ್ರಮ್ ಗಳಲ್ಲಿ ಇಂಧನ ಸಂಗ್ರಹಿಸುವಂತಹ ಪರಿಸ್ಥಿತಿ ಕಂಡುಬಂದಿಲ್ಲ ಮತ್ತು ಬಂಕ್‌ಗಳ ಮುಂದೆ ವಾಹನಗಳ ದೀರ್ಘ ಸಾಲುಗಳೂ ಇಲ್ಲ.

ನಗರದ ಜನತೆಗೆ ಅವರ ಅಗತ್ಯಕ್ಕೆ ಅನುಗುಣವಾಗಿ ಇಂಧನ ಸುಗಮವಾಗಿ ಪೂರೈಕೆಯಾಗುತ್ತಿದ್ದು, ದರ ಏರಿಕೆಯ ನಡುವೆಯೂ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ.

Petrol and diesel prices increase at private petrol stations

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....