Home Latest News ಪೆಟ್ರೋಲ್ ಕಳ್ಳತನ ಆರೋಪಿಗಳು ಪರಾರಿ
Latest NewschikamagalurHomenamma chikmagalur

ಪೆಟ್ರೋಲ್ ಕಳ್ಳತನ ಆರೋಪಿಗಳು ಪರಾರಿ

Share
Share

ಮೂಡಿಗೆರೆ: ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣ ವ್ಯಾಪ್ತಿಯ ಹಿರೇಗೆಶಿ ಎಂಬ ಗ್ರಾಮದ ಬಳಿ ಪೆಟ್ರೋಲ್ ಕಳ್ಳತನ ಮಾಡಿರುವ ಲಾರಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.

ಮೂಡಿಗೆರೆ ತಾಲೂಕಿನಲ್ಲಿ ಎಲ್ಲೂ ಪೈಪ್ ಕೊರೆದಿಲ್ಲ ಎಂದು ತಿಳಿದುಬಂದಿದೆ.ಆದರೆ ಲಾರಿಯಲ್ಲಿ 2 000 ಕ್ಕೂ ಹೆಚ್ಚಿನ ಪೆಟ್ರೋಲ್ ಇರುವ ಶಂಕೆ ಇದ್ದು ಲಾರಿಗೆ ಪ್ಲೇಟ್ ನಂಬರ್ ಕೂಡ ಇಲ್ಲದಿರುವುದು ಈ ಹಿಂದೆ ಸಕ್ರಿಯವಾಗಿದ್ದ ಗ್ಯಾಂಗ್ ಇರಬಹುದು ಎಂಬ ಅನುಮಾನವಿದೆ.

20 ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ ಪೈಪ್ ಕೊರೆದು ಪೆಟ್ರೋಲ್ ಸಾಗಿಸುತ್ತಿದ್ದ ಬೇಲೂರಿನ ರಾಜಶೆಟ್ಟಿ ಎಂಬುವನ ಬಂಧನವಾಗಿತ್ತು. ಪೊಲೀಸ್ ಇಲಾಖೆಯ ಹಲವರು ಈ ಗ್ಯಾಂಗ್ ಜೊತೆಗೆ ಕೈ ಜೋಡಿಸಿದ್ದರಿಂದ ಇಲಾಖಾ ತನಿಖೆ ನಡೆದಿತ್ತು.

ಠಾಣಧಿಕಾರಿಯಾಗಿದ್ದ ಸುನೀಲ್ ಕುಮಾರ್ ಮತ್ತು ಮೂಡಿಗೆರೆ ವೃತ್ತ ನಿರೀಕ್ಷಕ ಸ್ವಾಮಿ ಎಂಬುವರ ಅಮಾನತ್ತು ಕೂಡ ಆಗಿತ್ತು ಇದರ ಜೊತೆಗೆ ಚಿಕ್ಕಮಗಳೂರು ವೃತ್ತ ನಿರೀಕ್ಷಕ ಸಿದ್ದಯ್ಯ ಎಂಬುವರ ವಿಚಾರಣೆ ಕೂಡ ನಡೆದಿತ್ತು.

ಲಾರಿ ಬಿಟ್ಟು ಪರಾರಿಯಾಗಿರುವುದನ್ನು ನೋಡಿದರೆ ಹಳೆ ಗ್ಯಾಂಗ್ ಮತ್ತೆ ಸಕ್ರಿಯವಾಗಿರಬಹುದು ಎಂಬ ಅನುಮಾನವಿದೆ ಎಂದು ಜನ ಹೇಳುತ್ತಾರೆ.

Petrol theft suspects flee

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...