Home Latest News ಪೆಟ್ರೋಲ್ ಕಳ್ಳತನ ಆರೋಪಿಗಳು ಪರಾರಿ
Latest NewschikamagalurHomenamma chikmagalur

ಪೆಟ್ರೋಲ್ ಕಳ್ಳತನ ಆರೋಪಿಗಳು ಪರಾರಿ

Share
Share

ಮೂಡಿಗೆರೆ: ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣ ವ್ಯಾಪ್ತಿಯ ಹಿರೇಗೆಶಿ ಎಂಬ ಗ್ರಾಮದ ಬಳಿ ಪೆಟ್ರೋಲ್ ಕಳ್ಳತನ ಮಾಡಿರುವ ಲಾರಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.

ಮೂಡಿಗೆರೆ ತಾಲೂಕಿನಲ್ಲಿ ಎಲ್ಲೂ ಪೈಪ್ ಕೊರೆದಿಲ್ಲ ಎಂದು ತಿಳಿದುಬಂದಿದೆ.ಆದರೆ ಲಾರಿಯಲ್ಲಿ 2 000 ಕ್ಕೂ ಹೆಚ್ಚಿನ ಪೆಟ್ರೋಲ್ ಇರುವ ಶಂಕೆ ಇದ್ದು ಲಾರಿಗೆ ಪ್ಲೇಟ್ ನಂಬರ್ ಕೂಡ ಇಲ್ಲದಿರುವುದು ಈ ಹಿಂದೆ ಸಕ್ರಿಯವಾಗಿದ್ದ ಗ್ಯಾಂಗ್ ಇರಬಹುದು ಎಂಬ ಅನುಮಾನವಿದೆ.

20 ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ ಪೈಪ್ ಕೊರೆದು ಪೆಟ್ರೋಲ್ ಸಾಗಿಸುತ್ತಿದ್ದ ಬೇಲೂರಿನ ರಾಜಶೆಟ್ಟಿ ಎಂಬುವನ ಬಂಧನವಾಗಿತ್ತು. ಪೊಲೀಸ್ ಇಲಾಖೆಯ ಹಲವರು ಈ ಗ್ಯಾಂಗ್ ಜೊತೆಗೆ ಕೈ ಜೋಡಿಸಿದ್ದರಿಂದ ಇಲಾಖಾ ತನಿಖೆ ನಡೆದಿತ್ತು.

ಠಾಣಧಿಕಾರಿಯಾಗಿದ್ದ ಸುನೀಲ್ ಕುಮಾರ್ ಮತ್ತು ಮೂಡಿಗೆರೆ ವೃತ್ತ ನಿರೀಕ್ಷಕ ಸ್ವಾಮಿ ಎಂಬುವರ ಅಮಾನತ್ತು ಕೂಡ ಆಗಿತ್ತು ಇದರ ಜೊತೆಗೆ ಚಿಕ್ಕಮಗಳೂರು ವೃತ್ತ ನಿರೀಕ್ಷಕ ಸಿದ್ದಯ್ಯ ಎಂಬುವರ ವಿಚಾರಣೆ ಕೂಡ ನಡೆದಿತ್ತು.

ಲಾರಿ ಬಿಟ್ಟು ಪರಾರಿಯಾಗಿರುವುದನ್ನು ನೋಡಿದರೆ ಹಳೆ ಗ್ಯಾಂಗ್ ಮತ್ತೆ ಸಕ್ರಿಯವಾಗಿರಬಹುದು ಎಂಬ ಅನುಮಾನವಿದೆ ಎಂದು ಜನ ಹೇಳುತ್ತಾರೆ.

Petrol theft suspects flee

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...