Home namma chikmagalur ದಾರ್ಶನಿಕರು ಬಡವರ್ಗದ ಜನರನ್ನು ಸಮಾಜದ ಮುನ್ನಲೆಗೆ ತರಲು ಶ್ರಮಿಸಿದ್ದಾರೆ
namma chikmagalurchikamagalurHomeLatest News

ದಾರ್ಶನಿಕರು ಬಡವರ್ಗದ ಜನರನ್ನು ಸಮಾಜದ ಮುನ್ನಲೆಗೆ ತರಲು ಶ್ರಮಿಸಿದ್ದಾರೆ

Share
Share

ಚಿಕ್ಕಮಗಳೂರು: ಹಲವಾರು ಮಹಾನ್ ದಾರ್ಶನಿಕರು ಸಮ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಫಲವಾಗಿ ಇಂದು ಎಲ್ಲಾ ಬಡವರ್ಗದ ಜನರನ್ನು ಸಮಾಜದ ಮುನ್ನಲೆಗೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಹೇಳಿದರು.

ಅವರು ಇಲ್ಲಿನ ಲಯನ್ಸ್ ಸೇವಾ ಭವನದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಹಾಗೂ ಲಯನ್ಸ್ ಸೇವಾ ಸಂಸ್ಥೆ ಇವರುಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ನ್ಯಾಯದ ಹರಿಕಾರ ಪ್ರವಾದಿ ಮಹಮದ್ ಕುರಿತ ವಿಚಾರಗೋಷ್ಠಿಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಬುದ್ಧ, ಬಸವ, ಅಬೇಡ್ಕರ್, ಕನಕದಾಸರು, ಪ್ರವಾದಿ ಮಹಮದ್ ಪೈಗಂಬರ್, ಕುವೆಂಪು, ಸ್ವಾಮಿ ವಿವೇಕಾನಂದ, ವಾಲ್ಮೀಕಿ ಮುಂತಾದ ಹಲವಾರು ದಾರ್ಶನಿಕರು ಎಲ್ಲಾ ಧರ್ಮದ ಶೋಷಿತರನ್ನು ಸಮಾಜದ ಮುನ್ನಲೆಗೆ ತರುವ ಪ್ರಯತ್ನ ಮಾಡಿ ಮೂಢನಂಬಿಕೆ, ಮೌಢ್ಯ, ಕಂದಾಚಾರಗಳಿಂದ ಹೊರತರುವ ಕೆಲಸ ಮಾಡಿದ್ದಾರೆಂದು ಶ್ಲಾಘಿಸಿದರು.

ಮಹಾನ್ ದಾರ್ಶನಿಕರ ವಿಚಾರಧಾರೆ, ತತ್ವಾದರ್ಶಗಳಿಗೆ ಇಂದೂ ಸಹ ಬೆಂಬಲ ವ್ಯಕ್ತವಾಗುತ್ತಿರುವುದು ಅಭಿನಂದನೀಯ. ಸರ್ವಧರ್ಮಗಳ ದೇಶ ಭಾರತ. ಏಕತೆ, ಐಕ್ಯತೆ, ಭಾವೈಕ್ಯತೆಯನ್ನು ಹೊಂದಿದೆ. ಈ ನಿಟ್ಟಿನಲ್ಲಿ ನಾವೆಲ್ಲಾ ಭಾರತೀಯರು ಎಂಬ ಮನೋಭಾವವನ್ನು ಮಕ್ಕಳಲ್ಲಿ ತಿಳಿವಳಿಕೆ ಮೂಡಿಸಬೇಕೆಂದು ಕರೆನೀಡಿದರು.

ದೇಶವಾಸಿಗಳ ನೆಮ್ಮದಿ ಬದುಕಿಗೆ ನಾಂದಿಯಾಗಿರುವ ಸೈನಿಕರನ್ನು ಗೌರವಿಸಬೇಕಾಗಿದೆ. ಯಾವುದೇ ವ್ಯಕ್ತಿ ಯಾವುದೇ ಧರ್ಮದಲ್ಲಿ ಜನಿಸಿದ್ದರೂ ನಾವು ದೇಶವನ್ನು ಗೌರವಿಸಬೇಕು. ಇನ್ನೊಂದು ಧರ್ಮವನ್ನು ಪ್ರೀತಿಸಬೇಕು ಎಂಬುದನ್ನು ದಾರ್ಶನಿಕರು ಹೇಳಿರುವುದು ಆಚರಣೆಗೆ ಬಂದಾಗ ದೇಶದಲ್ಲಿ ಶಾಂತಿ ಮೂಡುತ್ತದೆ ಎಂದರು.

ನಿವೃತ್ತ ಉಪನ್ಯಾಸಕ ಹಾಗೂ ಸಾಹಿತಿ ಬಿ.ತಿಪ್ಪೇರುದ್ರಪ್ಪ ಮಾತನಾಡಿ, ಕೆಟ್ಟ ಪ್ರಚೋದನೆಗಳಿಗೆ ಅವಕಾಶ ನೀಡದೆ ಹಿಂದೂ, ಮುಸ್ಲಿಂ ಸಮುದಾಯ ಒಟ್ಟಿಗೆ ಸೇರಿದಾಗ ಭಾವೈಕ್ಯತೆ ಬೆಳೆಯುತ್ತದೆ. ಜಗತ್ತಿನಲ್ಲಿ, ನಾಡಿನಲ್ಲಿ ಅನ್ಯಾಯ, ಅಶಾಂತಿ, ಮೌಢ್ಯತೆ ನಡೆಯುತ್ತಿದ್ದಾಗ ಏಸುಕ್ರಿಸ್ತ, ಪ್ರವಾದಿ ಮಹಮದ್ ಪೈಗಂಬರ್, ಬಸವಣ್ಣ ಮುಂತಾದವರು ಆಯಾ ಕಾಲಘಟ್ಟದಲ್ಲಿ ಈ ಸಮುದಾಯಗಳ ಮಧ್ಯೆ ಇದ್ದ ಅಡ್ಡಗೋಡೆಯನ್ನು ಕೆಡವಿ ನಾವೆಲ್ಲಾ ಒಂದು ಎಂಬ ಭಾವನೆ ಮೂಡಿಸಿದ್ದರು ಎಂದು ವಿಶ್ಲೇಷಿಸಿದರು,
ಜಾತಿ, ಮತ, ಕುಲ, ಗೋತ್ರ, ಧರ್ಮ ಇವೆಲ್ಲವನ್ನು ಮೀರಿ ಒಂದು ಮಾನವೀಯ ಮೌಲ್ಯದ ಮನುಷ್ಯತ್ವದ ಧರ್ಮ ಪಾಲಿಸಿಕೊಂಡು ಹೋಗಬೇಕೆಂಬುದು ದೇವರ ರೂಪದಲ್ಲಿ ಇವರು ಅವತರಿಸಿ ಸಂದೇಶ ನೀಡಿದ್ದಾರೆಂದು ಹೇಳಿದರು.

ಈ ಅವತಾರ ಪುರುಷರು ಆಗಾಗ್ಗೆ ಈ ಭೂಮಿ ಮೇಲೆ ಜನಿಸಿ ಎಲ್ಲರೂ ಒಂದೇ ಎಂಬ ಸಮ ಸಮಾಜ ನಿರ್ಮಾಣ ಮಾಡಲು ಕಾರಣೀಭೂತರಾಗಿದ್ದಾರೆ. ಧರ್ಮದ ಹೆಸರಿನಲ್ಲಿ ತಿದ್ದಿ ತೀಡಿ ಜಾಗೃತಿ ಮೂಡಿಸಿದ ಪರಿಣಾಮ ದೇಶದಲ್ಲಿಂದು ಧಾರ್ಮಿಕತೆ ಕಾಣಲು ಸಾಧ್ಯವಾಗಿದೆ ಎಂದರು.

ಸಮಾಜದ ಕಟ್ಟುಪಾಡುಗಳು ಇಂದು ಮಕ್ಕಳನ್ನು ಬಂದಿಸುತ್ತಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು ಪುನಹಾ ವಿಶ್ವಮಾನವರಾಗಲು ಕಾರಣವಾಗಿದೆ ಎಂದು ಶ್ಲಾಘಿಸಿದರು.

ನಿವೃತ್ತ ಪ್ರಾಂಶುಪಾಲ ಗಫಾರ್ ಬೇಗ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಲಯನ್ಸ್ ಅಧ್ಯಕ್ಷ ಕುಮಾರ್, ಸಿಡಿಎ ಅಧ್ಯಕ್ಷ ನಯಾಜ್ ಅಹಮದ್, ಡಾ. ಮಹಮದ್ ಸಾಲಿ ಉಪಸ್ಥಿತರಿದ್ದರು. ಜಿಲ್ಲಾ ಸಂಘದ ರಿಜ್ವಾನ್ ಅಹಮದ್ ಸ್ವಾಗತಿಸಿದರು.

Philosophers have strived to bring the poor to the forefront of society.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...