Home namma chikmagalur ಕೊಳಮಗೆ ಬಳಿಯ ಭದ್ರಾ ನದಿಗೆ ಬಿದ್ದ ಪಿಕ್‌ಅಪ್: ಯುವಕ ಸಾವಿನ ಶಂಕೆ
namma chikmagalurchikamagalurCrime NewsHomeLatest News

ಕೊಳಮಗೆ ಬಳಿಯ ಭದ್ರಾ ನದಿಗೆ ಬಿದ್ದ ಪಿಕ್‌ಅಪ್: ಯುವಕ ಸಾವಿನ ಶಂಕೆ

Share
Share

ಕಳಸ: ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್‌ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ.

ಗಣಪತಿಕಟ್ಟೆಯ ರಮೇಶ ಮತ್ತು ರವಿಕಲಾ ದಂಪತಿಯ ಮಗ ಶಮಂತ (22) ಗುರುವಾರ ಮಧ್ಯಾಹ್ನ 3ರ ವೇಳೆಗೆ ಕಳಕೋಡಿನಿಂದ ತೋಟದ ಕಾರ್ಮಿಕರನ್ನು ಕಳಸಕ್ಕೆ ಕರೆತರಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಅತಿವೇಗದಲ್ಲಿ ಹೋದ ಪಿಕ್‌ಅಪ್ ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಂಬ ಮೂರು ತುಂಡುಗಳಾಗಿ ಬಿದ್ದಿದ್ದು, ವಾಹನ ಭದ್ರಾನದಿಗೆ ಉರುಳಿರುವ ಶಂಕೆ ಇದೆ.

ನದಿಯಲ್ಲಿ 20 ಅಡಿಗೂ ಹೆಚ್ಚು ನೀರು ಹರಿಯುತ್ತಿದ್ದು, ವಾಹನ ಕಾಣುತ್ತಿಲ್ಲ. ವಾಹನ ಚಲಾಯಿಸುತ್ತಿದ್ದ ಶಮಂತ ವಾಹನದಲ್ಲೇ ಸಿಲುಕಿರಬೇಕು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಜನರು ಧಾವಿಸಿದ್ದು, ಕಳಸ ಪೊಲೀಸರು ಅಗತ್ಯ ಕ್ರಮ ವಹಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬಂದ ನಂತರ ಶವ ಪತ್ತೆಗೆ ಪ್ರಯತ್ನ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Pickup falls into Bhadra River near Kolamage: Youth feared dead

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...