Home ಕಳೆದುಹೋಗಿದ್ದ ಮೊಬೈಲ್ ಪತ್ತೆಹಚ್ಚಿದ ಪೊಲೀಸರು
HomeKadurLatest Newsnamma chikmagalur

ಕಳೆದುಹೋಗಿದ್ದ ಮೊಬೈಲ್ ಪತ್ತೆಹಚ್ಚಿದ ಪೊಲೀಸರು

Share
Share

ಕಡೂರು : ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಸಂದರ್ಭಗಳಲ್ಲಿ ಕಳೆದುಹೋಗಿದ್ದ ಮೊಬೈಲ್ ಫೋನ್ಗಳನ್ನು ಸಿಇಐಆರ್ (CEIR) ಪೋರ್ಟಲ್. ತಂತ್ರಜ್ಞಾನದ ನೆರವಿನಿಂದ ಯಶಸ್ವಿಯಾಗಿ ಪತ್ತೆಹಚ್ಚಿದ ಪೊಲೀಸರು, ಅವುಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ತಮ್ಮ ನೆಚ್ಚಿನ ಮೊಬೈಲ್‌ಗಳನ್ನು ಕಳೆದುಕೊಂಡು ಕಂಗಾಲಾಗಿದ್ದ ಸಾರ್ವಜನಿಕರಿಗೆ ಕಡೂರು ಪೊಲೀಸರ ಈ ಕಾರ್ಯ ದೊಡ್ಡ ಸಮಾಧಾನ ತಂದಿದೆ. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಮೊಬೈಲ್ ಪತ್ತೆಹಚ್ಚುವಲ್ಲಿ ಶ್ರಮಿಸಿದ ಪೊಲೀಸ್ ತಂಡಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿರುವ ಪೊಲೀಸರು, ಮೊಬೈಲ್ ಕಳೆದುಹೋದರೆ ಗಾಬರಿಯಾಗುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ತಕ್ಷಣವೇ ‘ಕೆಎಸ್ಪಿ’ (KSP) ಆ್ಯಪ್ ಮೂಲಕ ದೂರು ದಾಖಲಿಸಿ, ನಂತರ ಕೇಂದ್ರ ಸರ್ಕಾರದ ಅಧಿಕೃತ http://ceir.gov.in ಪೋರ್ಟಲ್‌ನಲ್ಲಿ ಮೊಬೈಲ್ ವಿವರಗಳನ್ನು ಅಪ್‌ಲೋಡ್ ಮಾಡುವುದರಿಂದ ಫೋನ್ ಪತ್ತೆ ಹಚ್ಚುವುದು ಸುಲಭವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Police find lost mobile phone

Share

Leave a comment

Leave a Reply

Your email address will not be published. Required fields are marked *

Don't Miss

ಸಂಗೊಳ್ಳಿ ರಾಯಣ್ಣ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ

ಚಿಕ್ಕಮಗಳೂರು:  ಸಂಗೊಳ್ಳಿ ರಾಯಣ್ಣ ನಾಡು ಅಪ್ರತಿಮೆ ಸ್ವಾತಂತ್ರ್ಯ ಹೋರಾಟಗಾರ. ಬ್ರಿಟಿಷರ ಕಪಿಮುಷ್ಠಿಯಿಂದ ನಲುಗುತ್ತಿದ್ಧ ಭಾರತೀಯರಿಗೆ ನ್ಯಾಯ ಒದಗಿಸಲು ಪ್ರಾಣವನ್ನೆ ಅರ್ಪಿಸಿದ ಧೀ ಮಂತ ಮಹಾಪುರುಷ ಎಂದು ಶಾಸಕಿ ನಯನ ಮೋಟಮ್ಮ ಹೇಳಿದರು....

ವಿಬಿ-ಜಿ ರಾಮ್‌ಜೀ ಹೊಸ ಕಾಯ್ದೆ ನೆಲಕಚ್ಚಿಸಲು ಕಾಂಗ್ರೆಸ್ ಕುತಂತ್ರ

ಚಿಕ್ಕಮಗಳೂರು:  ಕೇಂದ್ರ ಸರ್ಕಾರದ ಹೊಸ ಕಾಯ್ದೆ ನೆಲಕಚ್ಚಿಸಲು ಕಾಂಗ್ರೆಸ್ ಪಕ್ಷ ಹ ಲವಾರು ಕುತಂತ್ರ ನಡೆಸಿ ಅಪಪ್ರಚಾರ ಮಾಡುತ್ತಿದೆ. ಕೇಂದ್ರ ಸರ್ಕಾರದ ಸತ್ಯ ದರ್ಶನ ಮಾಡಿಸಲು ರಾಜ್ಯಾ ದ್ಯಂತ ಜನಜಾಗೃತಿ ನಡೆಸಿ...

Related Articles

ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ಕಾಂಗ್ರೆಸ್ ನಲ್ಲಿ ಸಿ.ಡಿ.ಎ. ಫೈಟ್ – ರಾಮಚಂದ್ರ ಬಿಗಿ ಪಟ್ಟು

ಚಿಕ್ಕಮಗಳೂರು: ಹಿರೇಮಗಳೂರು ರಾಮಚಂದ್ರ ಸಿ.ಡಿ.ಎ.ಅಧ್ಯಕ್ಷ ಸ್ಥಾನ ಪಡೆಯಲು ಬಿಗಿ ಪಟ್ಟು ಹಿಡಿದು ಒತ್ತಾಯ ಮಾಡುತ್ತಿದ್ದಾರೆ. ಕಳೆದ...

ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವು

ಚಿಕ್ಕಮಗಳೂರು :ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವಪ್ಪಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್...

ಸಾಮಾಜಿಕ ಪರಿವರ್ತನೆಗೆ ಮಾಚಿದೇವರ ಕೊಡುಗೆ ಅಪಾರ

ಚಿಕ್ಕಮಗಳೂರು: ಸಾಮಾಜಿಕ ಪರಿವರ್ತನೆ ಮತ್ತು ಸಾಹಿತ್ಯ ಪರಿವರ್ತನೆಗೆ ಮಡಿವಾಳ ಮಾಚಿದೇವರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ...

ಇತಿಹಾಸ ಸೃಷ್ಠಿಸಿದ ವ್ಯಕ್ತಿಗಳ ಜೀವನ ಚರಿತ್ರೆ ಓದಬೇಕು

ಚಿಕ್ಕಮಗಳೂರು: ನಾಡಪ್ರಭು ಕೆಂಪೇಗೌಡರು ತಮ್ಮ ಬದುಕನ್ನು ಓದಿಸಿಕೊಳ್ಳಲು ಯೋಗ್ಯವಾದ ರೀತಿಯಲ್ಲಿ ಬದುಕಿ ಹೋದವರು ಎಂದು ಆದಿಚುಂಚನಗಿರಿ...