Home namma chikmagalur ಜಿಲ್ಲೆಯ 91 ಬಾಲಕಿಯರ ಹಾಸ್ಟೆಲ್‌ಗಳಿಗೆ ‘ಆರಕ್ಷಕ ಗೆಳತಿ’ ಭೇಟಿ
namma chikmagalurchikamagalurHomeLatest News

ಜಿಲ್ಲೆಯ 91 ಬಾಲಕಿಯರ ಹಾಸ್ಟೆಲ್‌ಗಳಿಗೆ ‘ಆರಕ್ಷಕ ಗೆಳತಿ’ ಭೇಟಿ

Share
Share

ಚಿಕ್ಕಮಗಳೂರು:  ಜಿಲ್ಲೆಯಲ್ಲಿರುವ 91 ಬಾಲಕಿಯರ ಹಾಸ್ಟೆಲ್‌ಗಳಿಗೆ ಮಹಿಳಾ ಪಿಎಸ್‌ಐಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿದ್ದು ತಿಂಗಳಲ್ಲಿ ಒಂದು ಬಾರಿ ಹಾಸ್ಟೆಲ್ ಗಳಿಗೆ ಭೇಟಿ ನೀಡು ‘ಆರಕ್ಷಕ ಗೆಳತಿ’ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿರುವ ಬಾಲಿಕಿಯರ ಹಾಸ್ಟೆಲ್‌ಗಳಿಗೆ ಮಹಿಳಾ ಪಿಎಸ್‌ಐ ದರ್ಜೆಯ ನೋಡೆಲ್ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ ಅಲ್ಲಿರುವ ಬಾಲಕಿಯರ ,ಅವರ ಪೋಷಕರು , ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರೊಡನೆ ಸಂವಾದ ನಡೆಸುವರು.
ಸಮಸ್ಯೆಗಳನ್ನು ಆಲಿಸಿ ಅವರಲ್ಲಿ ಪೋಕ್ಸೋ, ಚೈಲ್ಡ್ ರೈಟ್ಸ್, ಚೈಲ್ಡ್ ಮ್ಯಾರೇಜ್, ಸೈಬರ್ ಕ್ರೈಮ್ಸ್, ಟ್ರಾಫಿಕ್ ರೂಲ್ಸ್, ಡ್ರಗ್ಸ್ ಇತ್ಯಾದಿ ವಿಷಯಗಳಲ್ಲಿ ಕಾನೂನು ಅರಿವು ಮೂಡಿಸಿ ಮನೋಸ್ಥೆರ್ಯ ಹೆಚ್ಚಿಸಿದ್ದಾರೆ.

ಹಾಸ್ಟೆಲ್‌ಗಳ ಮೆಸ್, ಟೀಚಿಂಗ್ ರೂಂಗಳು, ಆವರಣ, ಕಟ್ಟಡಗಳ ಸ್ಥಿತಿಗತಿ, ಸಿಸಿ ಕ್ಯಾಮರಾಗಳು ಕಾರ್ಯನಿರ್ವಹಣೆ ಬಗ್ಗೆ, ಕಾಂಪೌಂಡ್, ಸೆಕ್ಯೂರಿಟಿ ಗಾರ್ಡ್ಸ್ ಎಲ್ಲರನ್ನೂಳಗೊಂಡು ಭದ್ರತಾ ಹಿತ ದೃಷ್ಟಿಯಿಂದ ಪರಿಶೀಲಿಸಿದ್ದಾರೆ. ಊಟ ತಿಂಡಿ ವಿತರಣೆ, ವಸತಿ ಸೌಕರ್ಯ, ಶೌಚಾಲಯಗಳಲ್ಲಿ ಸ್ವಚ್ಛತೆ, ಪೋಲಿ ಹುಡುಗರಿಂದ ಏನಾದರೂ ಕಿರಿಕಿರಿ, ತೊಂದರೆ, ಹಾಸ್ಟೆಲ್ ಅಕ್ಕ ಪಕ್ಕದ ವಾತಾವರಣ, ಮಕ್ಕಳಿಗೆ ಅನಾರೋಗ್ಯದ ಸಂದರ್ಭದಲ್ಲಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಸೌಲಭ್ಯ, ಬಾಲಕಿಯರ ಜೊತೆ ಹಾಸ್ಟೆಲ್ ಸಿಬ್ಬಂದಿಯವರ ವರ್ತನೆ -ನಡತೆ ಕುರಿತು ವಿಚಾರಿಸಿದ್ದಾರೆ.

ಹಾಸ್ಟೆಲ್ ಮೇಲ್ವಿಚಾರಕರೊಂದಿಗೆ ಬಾಲಕಿಯರ ರೂಂಗಳನ್ನು ತಪಾಸಣೆ ಮಾಡಿ ಚಾಕುಗಳು, ಕತ್ತರಿಗಳು ಇತರೆ ಕಬ್ಬಿಣದ ವಸ್ತುಗಳು, ಎಲೆಕ್ಟ್ರಾನಿಕ್ಸ್ ವಸ್ತುಗಳು. ವೈದ್ಯರ ಸಲಹೆ ಹೊರತುಪಡಿಸಿ ಬೇರೆ ಯಾವುದಾದರೂ ಔಷದಿ ಮಾತ್ರೆಗಳು. ಸ್ವಂತವಾಗಿ ಕುಕ್ಕಿಂಗ್ ಮಾಡುತ್ತಿದ್ದರೆ. ಹೊರಗಡೆಯಿಂದ ಪಾರ್ಸಲ್‌ಗಳನ್ನು ತರಿಸುತ್ತಿದ್ದರೆ ಪರಿಶೀಲಿಸಿ ಪ್ರಿನ್ಸಿಪಾಲ್ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ

ಇಆರ್ ಎಸ್ಎಸ್- 112. ಸ್ಥಳೀಯ ಪೊಲೀಸ್ ಠಾಣೆ. ಪಿಎಸ್‌ಐ (ಕಾ&ಸು) ಮತ್ತು ಕಂಟ್ರೋಲ್ ರೂಂ- 9480805100 ಸಂಖ್ಯೆಗಳನ್ನು ಸೂಚನಾ ಫಲಕಗಳಲ್ಲಿ ಪ್ರದರ್ಶಿಸಲು ಸಂಬಂಧಪಟ್ಟ ಪ್ರಿನ್ಸಿಪಾಲ್ ರವರಿಗೆ ಪತ್ರ ವ್ಯವಹಾರ ನಡೆಸಿದ್ದಾರೆ.

‘Police girlfriend’ visits 91 girls’ hostels in the district

Share

Leave a comment

Leave a Reply

Your email address will not be published. Required fields are marked *

Don't Miss

ಗಿರಿ ಪ್ರದೇಶದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ನೂತನ ಸಂಚಾರ ವ್ಯವಸ್ಥೆ

ಚಿಕ್ಕಮಗಳೂರು: : ಮುಳ್ಳಯ್ಯನಗಿರಿ ಭಾಗದಲ್ಲಿ ಇತ್ತೀಚೆಗೆ ವಾರಾಂತ್ಯದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಎರಡು ಸ್ಲಾಟ್‌ಗಳಲ್ಲಿ ಪ್ರತೀದಿನ ವಾಹನಗಳನ್ನು ಗಿರಿಭಾಗಕ್ಕೆ ಬಿಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು....

ಕಾವೇರುತ್ತಿದೆ ಅಜ್ಜಂಪುರ ಪಟ್ಟಣ ಪಂಚಾಯತಿ ಚುನಾವಣೆ

ಅಜ್ಜಂಪುರ: ಕಳೆದ ಏಳು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಬಣಗುಡುತ್ತಿದ್ದ ಪಟ್ಟಣ ಪಂಚಾಯತಿಗೆ ಆಗಷ್ಟ್ 17 ರಂದು ಚುನಾವಣೆ ದಿನಾಂಕ ನಿಗದಿಯಾಗಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜನತಾದಳದ ಮಧ್ಯೆ ಬಿರುಸಿನ...

Related Articles

ಮಕ್ಕಳ ಬಾಲ್ಯ ಸುರಕ್ಷತೆಗಾಗಿ ಭದ್ರ ಬಾಲ್ಯ ಯೋಜನೆ ಅನುಷ್ಠಾನ

ಚಿಕ್ಕಮಗಳೂರು: ಮಕ್ಕಳ ಬಾಲ್ಯವನ್ನು ಸುರಕ್ಷಿತಗೊಳಿಸುವ ಗುರಿ ಇರಿಸಿಕೊಂಡು ಜಿಲ್ಲೆಯಲ್ಲಿ ಭದ್ರ ಬಾಲ್ಯ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಎಲ್ಲಾ...

ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ವಿರುದ್ಧ ಸಮಾಜದಿಂದ ಪ್ರತಿಭಟನೆ

ಚಿಕ್ಕಮಗಳೂರು:  ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ನಿಗಧಿತ ದರಕ್ಕಿಂತ ಕಡಿಮೆ...

ಮಾದಕ ವಸ್ತು ವಿರೋಧಿ ಜಾಗೃತಿ ಸಮಿತಿ ರಚನೆ ಕಡ್ಡಾಯ 

ಚಿಕ್ಕಮಗಳೂರು:  ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವ ಮೂಲಕ ಮಾದಕ ವಸ್ತು...

ವೇದಾನದಿ ನೀರಿನ ಹಂಚಿಕೆಯಲ್ಲಿ ರೈತರು ಸಂಯಮ ಕಾಪಾಡಬೇಕು

ಚಿಕ್ಕಮಗಳೂರು: ವೇದಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರೈತರು ಸಂಯಮ ಕಾಪಾಡಬೇಕು. ಜೊತೆಗೆ ಕೆರೆ ತುಂಬಿಸುವ...