Home namma chikmagalur chikamagalur ಎ.ಆರ್. ಫರ್ನಿಚರ್ ಅಂಗಡಿ ಅಗ್ನಿ ಅವಘಡ : ತನಿಖೆಯಲ್ಲಿ ವ್ಯವಸ್ಥಿತ ಕೃತ್ಯ ಸಾಬೀತು
chikamagalurCrime NewsLatest Newsnamma chikmagalur

ಎ.ಆರ್. ಫರ್ನಿಚರ್ ಅಂಗಡಿ ಅಗ್ನಿ ಅವಘಡ : ತನಿಖೆಯಲ್ಲಿ ವ್ಯವಸ್ಥಿತ ಕೃತ್ಯ ಸಾಬೀತು

Share
Share

ಚಿಕ್ಕಮಗಳೂರು: ನಗರದ ಐ.ಜಿ. ರಸ್ತೆಯಲ್ಲಿ ನಡೆದ ಎ.ಆರ್. ಫರ್ನಿಚರ್ ಅಂಗಡಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅನಿರೀಕ್ಷಿತ ಸತ್ಯವನ್ನ ಹೊರಹಾಕಿದ್ದಾರೆ.

ಈ ಬೆಂಕಿ ಆಕಸ್ಮಿಕವಾಗಿ ಸಂಭವಿಸಿದ್ದಲ್ಲ, ಬದಲಿಗೆ ವ್ಯಾಪಾರ ದ್ವೇಷದ ಹಿನ್ನೆಲೆಯಲ್ಲಿ ನಡೆದ ವ್ಯವಸ್ಥಿತ ಕೃತ್ಯ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಕಳೆದ ಭಾನುವಾರ ನಡೆದ ಈ ದುರ್ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿಯಾಗಿದ್ದವು.

ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಎ.ಆರ್. ಫರ್ನಿಚರ್ ಪಕ್ಕದಲ್ಲೇ ಇರುವ ಮತ್ತೊಂದು ಫರ್ನಿಚರ್ ಅಂಗಡಿ ಮಾಲೀಕ ಸಂಚು ರೂಪಿಸಿರುವುದು ಕಂಡುಬಂದಿದೆ. ತನ್ನ ಅಂಗಡಿಗಿಂತ ಪಕ್ಕದ ಅಂಗಡಿಯಲ್ಲಿ ವ್ಯಾಪಾರ ಚೆನ್ನಾಗಿ ನಡೆಯುತ್ತಿದೆ ಎಂಬ ಅಸೂಯೆಯಿಂದ ಈ ಕೃತ್ಯ ಎಸಗಿದ್ದಾನೆ.

ಇದಕ್ಕಾಗಿ ಇಬ್ಬರಿಗೆ 20 ಸಾವಿರ ರೂಪಾಯಿ ಸುಪಾರಿ ನೀಡಿ ಬೆಂಕಿ ಹಚ್ಚಿಸಿದ್ದಾನೆ. ಪ್ರಸ್ತುತ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಕೃತ್ಯದಲ್ಲಿ ಭಾಗಿಯಾದ ಮೂವರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

Police investigation proves systematic crime

Share

Leave a comment

Leave a Reply

Your email address will not be published. Required fields are marked *

Don't Miss

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರು ಪ್ರವೇಶ ಮಾಡಿ ಹೊಸ ಇತಿಹಾಸ ನಿರ್ಮಾಣಕ್ಕೆ ನಾಂದಿ ಹಾಡಿದ್ದಕ್ಕೆ ತಾಲೂಕು ಆಡಳಿತ ಸಾಕ್ಷಿಯಾಯಿತು....

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ ವಿದ್ಯಾರ್ಥಿ ಆಂದೋಲನವನ್ನು ನೆಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ತಿಳಿಸಿದರು....

Related Articles

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....

ಪೋಕ್ಸೋ ಪ್ರಕರಣ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಚಿಕ್ಕಮಗಳೂರು: ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ...

ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಿ.ಕೆ. ಹರಿಪ್ರಸಾದ್ ದೂರು

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಸೃಷ್ಟಿಯಾಗಿದ್ದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್...

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...