Home namma chikmagalur ಜಾನುವಾರು ಕಳ್ಳರಿಂದ 4 ಹಸುಗಳನ್ನು ವಶಕ್ಕೆ ಪಡೆದ ಪೋಲಿಸರರು
namma chikmagalurchikamagalurHomeLatest News

ಜಾನುವಾರು ಕಳ್ಳರಿಂದ 4 ಹಸುಗಳನ್ನು ವಶಕ್ಕೆ ಪಡೆದ ಪೋಲಿಸರರು

Share
Share

ಕಳಸ: ಜಾನುವಾರು ಕಳ್ಳರನ್ನು ಶುಕ್ರವಾರ ನಸುಕಿನಲ್ಲಿ ಬೆನ್ನಟ್ಟಿದ ಕಳಸ ಪೊಲೀಸರು ವಾಹನ, 4 ಹಸುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಲಿಗೆ- ಹೊರನಾಡು ಕಡೆಯಿಂದ ಬಂದ ವಾಹನದ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ಕಳಸ ಪೊಲೀಸರು ಪಿಎಸ್‌ಐ ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ವಾಹನ ದಾರಿಮನೆ- ಹಳುವಳ್ಳಿ ರಸ್ತೆಯಲ್ಲಿ ಸಾಗಿದ್ದನ್ನು ಖಚಿತಪಡಿಸಿಕೊಂಡ ಪೊಲೀಸರು ಅದೇ ಮಾರ್ಗದಲ್ಲಿ ಬೆಳಗಿನ ಜಾವ 1.30ರ ಸುಮಾರಿಗೆ ಹೊರಟಿದ್ದರು.

ಸ್ವಲ್ಪ ದೂರ ಸಾಗಿದಾಗ ದನ ಕಳ್ಳರು ವಾಹನಕ್ಕೆ ಜಾನುವಾರು ತುಂಬಿಸುತ್ತಿದ್ದು ಕಂಡು ಬಂದಿದೆ. ಪೊಲೀಸ್ ವಾಹನ ಕಳ್ಳರ ವಾಹನಕ್ಕಿಂತ ಮುಂದೆ ಹೋಗಿ ಅವರ ವಾಹನ ಅಡ್ಡಗಟ್ಟಿತು. ಅಷ್ಟರಲ್ಲಿ ಕಳ್ಳರು ವಾಹನವನ್ನು ಹಿಂದಕ್ಕೆ ತಿರುಗಿಸಿ ಪರಾರಿಯಾಗಲು ಯತ್ನಿಸಿದರು. ಪೊಲೀಸರು ಬೆನ್ನಟ್ಟಿದಾಗ ವಾಹನವನ್ನು ಅಲ್ಲೇ ಬಿಟ್ಟು ರಸ್ತೆ ಪಕ್ಕದ ಕಾಫಿ ತೋಟದ ಒಳಗೆ ಕಳ್ಳರು ಓಡಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದನಕಳ್ಳರ ವಾಹನದಲ್ಲಿ 4 ಹಸುಗಳು, 3 ಫೋನ್ ಮತ್ತು ಒಂದು ಕಬ್ಬಿಣದ ರಾಡ್ ಪತ್ತೆ ಆಗಿದೆ. ವಾಹನದ ನಂಬರ್ ಪ್ಲೇಟ್ ನಕಲಿ ಎಂದು ತಿಳಿದುಬಂದಿದೆ. ಲಭ್ಯವಿರುವ ಮಾಹಿತಿ ಅನುಸರಿಸಿ ಕಳ್ಳರನ್ನು ಸದ್ಯದಲ್ಲೇ ಬಂಧಿಸಲಾಗುವುದು ಎಂದು ಕಳಸ ಠಾಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.

Police seize 4 cows from cattle thief

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...