Home namma chikmagalur ಜಾನುವಾರು ಕಳ್ಳರಿಂದ 4 ಹಸುಗಳನ್ನು ವಶಕ್ಕೆ ಪಡೆದ ಪೋಲಿಸರರು
namma chikmagalurchikamagalurHomeLatest News

ಜಾನುವಾರು ಕಳ್ಳರಿಂದ 4 ಹಸುಗಳನ್ನು ವಶಕ್ಕೆ ಪಡೆದ ಪೋಲಿಸರರು

Share
Share

ಕಳಸ: ಜಾನುವಾರು ಕಳ್ಳರನ್ನು ಶುಕ್ರವಾರ ನಸುಕಿನಲ್ಲಿ ಬೆನ್ನಟ್ಟಿದ ಕಳಸ ಪೊಲೀಸರು ವಾಹನ, 4 ಹಸುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಲಿಗೆ- ಹೊರನಾಡು ಕಡೆಯಿಂದ ಬಂದ ವಾಹನದ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ಕಳಸ ಪೊಲೀಸರು ಪಿಎಸ್‌ಐ ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ವಾಹನ ದಾರಿಮನೆ- ಹಳುವಳ್ಳಿ ರಸ್ತೆಯಲ್ಲಿ ಸಾಗಿದ್ದನ್ನು ಖಚಿತಪಡಿಸಿಕೊಂಡ ಪೊಲೀಸರು ಅದೇ ಮಾರ್ಗದಲ್ಲಿ ಬೆಳಗಿನ ಜಾವ 1.30ರ ಸುಮಾರಿಗೆ ಹೊರಟಿದ್ದರು.

ಸ್ವಲ್ಪ ದೂರ ಸಾಗಿದಾಗ ದನ ಕಳ್ಳರು ವಾಹನಕ್ಕೆ ಜಾನುವಾರು ತುಂಬಿಸುತ್ತಿದ್ದು ಕಂಡು ಬಂದಿದೆ. ಪೊಲೀಸ್ ವಾಹನ ಕಳ್ಳರ ವಾಹನಕ್ಕಿಂತ ಮುಂದೆ ಹೋಗಿ ಅವರ ವಾಹನ ಅಡ್ಡಗಟ್ಟಿತು. ಅಷ್ಟರಲ್ಲಿ ಕಳ್ಳರು ವಾಹನವನ್ನು ಹಿಂದಕ್ಕೆ ತಿರುಗಿಸಿ ಪರಾರಿಯಾಗಲು ಯತ್ನಿಸಿದರು. ಪೊಲೀಸರು ಬೆನ್ನಟ್ಟಿದಾಗ ವಾಹನವನ್ನು ಅಲ್ಲೇ ಬಿಟ್ಟು ರಸ್ತೆ ಪಕ್ಕದ ಕಾಫಿ ತೋಟದ ಒಳಗೆ ಕಳ್ಳರು ಓಡಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದನಕಳ್ಳರ ವಾಹನದಲ್ಲಿ 4 ಹಸುಗಳು, 3 ಫೋನ್ ಮತ್ತು ಒಂದು ಕಬ್ಬಿಣದ ರಾಡ್ ಪತ್ತೆ ಆಗಿದೆ. ವಾಹನದ ನಂಬರ್ ಪ್ಲೇಟ್ ನಕಲಿ ಎಂದು ತಿಳಿದುಬಂದಿದೆ. ಲಭ್ಯವಿರುವ ಮಾಹಿತಿ ಅನುಸರಿಸಿ ಕಳ್ಳರನ್ನು ಸದ್ಯದಲ್ಲೇ ಬಂಧಿಸಲಾಗುವುದು ಎಂದು ಕಳಸ ಠಾಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.

Police seize 4 cows from cattle thief

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...