Home namma chikmagalur chikamagalur ರಾಜೇಗೌಡರಿಗೆ ರಾಜಕೀಯ ಮೈಲೇಜ್ – ಜೀವರಾಜ್ ಗೆ ಕೊನೆ ಮೊಳೆ ?
chikamagalurHomeLatest Newsnamma chikmagalur

ರಾಜೇಗೌಡರಿಗೆ ರಾಜಕೀಯ ಮೈಲೇಜ್ – ಜೀವರಾಜ್ ಗೆ ಕೊನೆ ಮೊಳೆ ?

Share
Share

ಶೃಂಗೇರಿ: ಕಳೆದ ಹತ್ತು ದಿನಗಳಿಂದ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ” ಶಾಸಕತ್ವ” ದ ಬಗ್ಗೆ ಎರಡು ಪಕ್ಷದವರಿಂದ ಪಟಾಕಿ,ಮೆರವಣಿಗೆ, ವಿಜಯೋತ್ಸವ ಸಾಲು ಸಾಲಾಗಿ ನಡೆಸಿ ರಾಜಕೀಯ ಜಿದ್ದಾ ಜಿದ್ದಿಗೆ ಈಗ ಸುಪ್ರೀಂ ಕೋರ್ಟ್ ಬ್ರೇಕ್ ಹಾಕುವ ಸಂಭವ ಹೆಚ್ಚಿದೆ.

2023 ರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ರಾಜೇಗೌಡ 205 ಮತಗಳಿಂದ ಜಯಗಳಿಸಿ ಕಳೆದ ಮೂರು ವರ್ಷಗಳಿಂದ ರಾಜೇಗೌಡರು ಆಡಳಿತ ಪಕ್ಷದಲ್ಲಿ ಇದ್ದರು.205 ಮತಗಳಿಂದ ಜಯಗಳಿಸಿದ್ದನ್ನು ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಪ್ರಶ್ನೆ ಮಾಡಿ ಹೈಕೋರ್ಟ್ ನಲ್ಲಿ ದಾವೆ ಸಲ್ಲಿಸಿದ್ದರು.

ಕಳೆದ ಮೂರು ವರ್ಷಗಳಿಂದ ವಿಚಾರಣೆ ನಡೆಸಿ ಮರು ಮತ ಎಣಿಕೆ ಗೆ ಮೇ ಎರಡರಂದು ದಿನ ನಿಗದಿ ಮಾಡಿತ್ತು .ಅದರಲ್ಲಿ ಜೀವರಾಜ್ ಜಯಗಳಿಸಿ ರಾಜೇಗೌಡ ಪರಾಜಿತ ಎಂದು ಘೋಷಣೆ ಮಾಡಲಾಯಿತು.ನಂತರ ಗೆಲುವಿನ ದಾಖಲೆ ಪಡೆಯಲು ಜೀವರಾಜ್ ಹಗಲಿರುಳು ಓಡಾಟ ನಡೆಸಿದ ನಂತರ ವಿಧಾನ ಸಭಾ ಸದಸ್ಯ ಎಂದು ಪ್ರಮಾಣ ವಚನ ತೆಗೆದುಕೊಳ್ಳಲು ಮತ್ತೆ ಹೋರಾಟಮಾಡಿದ್ದರು.

ಜಿಲ್ಲಾ ಮಟ್ಟದಲ್ಲಿ ಅಷ್ಟೇ ಅಲ್ಲ ರಾಜ್ಯ ಮಟ್ಟದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಜಟಾಪಟಿ ನಡೆದಿತ್ತು. ರಾಜೇಗೌಡರು ಇದನ್ನೆಲ್ಲ ಪ್ರಶ್ನೆಸಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದರು.ಇಂದು ಸುಪ್ರೀಂ ಕೋರ್ಟ್ ರಾಜೇಗೌಡರು ಶಾಸಕರಾಗಿ ಮುಂದುವರೆಯಲು ತಾತ್ಕಾಲಿಕ ತಡೆ ನೀಡಿರುವುದು ರಾಜೇಗೌಡರಿಗೆ ರಾಜಕೀಯ ಶಕ್ತಿ ಇಮ್ಮಡಿ ಆಗಿದೆ ಎಂದು ರಾಜಕೀಯ ಮತ್ತು ಕಾನೂನು ತಜ್ಞರ ಅಭಿಪ್ರಾಯವಾಗಿದೆ.

ಜೀವರಾಜ್ ಗೆ ರಾಜಕೀಯ ಹಿನ್ನಡೆ ಆಗಿದೆ.ಒಟ್ಟಾರೆ ಶೃಂಗೇರಿ ಕ್ಷೇತ್ರದ ಮತ ತಿರುವು ಪ್ರಕರಣ ದಿನಕ್ಕೊಂದು ಬಣ್ಣ,ಕ್ಷಣಕ್ಕೊಂದು ಬಣ್ಣ ಬದಲಾಯಿಸಿ ಹಲವರ ಹೃದಯ ಬಡಿತಕ್ಕೆ ಕಾರಣವಾಗಿತ್ತು. ಇನ್ನೂ ಮುಂದೆ ಇಬ್ಬರು ಕೋರ್ಟ್ ನಲ್ಲಿ ಮುಂದುವರೆದರು ವಿಧಾನ ಸಭಾ ಅವಧಿ ಮುಗಿದಿರುತ್ತದೆ.

Political mileage for Rajegowda – the final nail in the coffin for Jeevaraj?

Share

Leave a comment

Leave a Reply

Your email address will not be published. Required fields are marked *

Don't Miss

ಕಾಫಿನಾಡಿನಲ್ಲಿ ಲಾಂಗು – ಮಚ್ಚುಗದ್ದೆ ಸುದ್ದಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಲಾಂಗು ಮತ್ತು ಮಚ್ಚುಗಳಂತಹ ಮಾರಕಾಸ್ತ್ರಗಳು ಬಳಕೆ ತೀರಾ ಸಾಮಾನ್ಯ ಎಂಬಂತಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕೇಕ್ ಕತ್ತರಿಸುವ ಸಂಭ್ರಮಾಚರಣೆ ಇರಲಿ ಅಥವಾ ರಾಜಕೀಯ ನಾಯಕರ...

ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ಶಿಕ್ಷಕರ ಮೇಲೆ ಪೋಕೋ ಪ್ರಕರಣ

ಕಡೂರು: ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಕಾಮುಕ ಸಹ ಶಿಕ್ಷಕ ಹಾಗೂ ಆತನಿಗೆ ಸಾಥ್ ನೀಡಿದ ಮುಖ್ಯಶಿಕ್ಷಕನ ವಿರುದ್ಧ ಕಠಿಣ...

Related Articles

ಮುಳ್ಳಯ್ಯನಗಿರಿ ಬಳಿ ಟ್ರಾಫಿಕ್ ಜಾಮ್

ಚಿಕ್ಕಮಗಳೂರು: ಮೂರು ದಿನಗಳ ಸತತ ರಜೆಯ ಹಿನ್ನೆಲೆಯಲ್ಲಿ ಪ್ರಕೃತಿ ಸೌಂದರ್ಯವನ್ನು ಆಸ್ವಾದಿಸಲು ಪ್ರವಾಸಿಗರು ಕಾಫಿನಾಡು ಚಿಕ್ಕಮಗಳೂರಿನತ್ತ...

ಕೆಂಪೇಗೌಡರ ಕನಸಿನ ಬೆಂಗಳೂರು ನಮ್ಮ ಹೆಮ್ಮೆಯ ಸಂಕೇತ

ಚಿಕ್ಕಮಗಳೂರು: ಇಂದು ಜಾಗತಿಕ ಮಟ್ಟದಲ್ಲಿ ಬೆಳೆದು ನಿಂತಿರುವ ಬೆಂಗಳೂರು ಮಹಾನಗರದ ಸೃಷ್ಟಿಗೆ ಕಾರಣರಾದ ನಾಡಪ್ರಭು ಕೆಂಪೇಗೌಡರ ಜಯಂತಿಯು...

ಶ್ರೀರಾಮನ ಹೆಸರಿನಲ್ಲಿ ಹಣ ದೋಚಲಾಗಿದೆ

ಚಿಕ್ಕಮಗಳೂರು: ಅಯೋಧ್ಯೆಯ ಶ್ರೀರಾಮ ಮಂದಿರ ಟ್ರಸ್ಟ್‌ಗೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಕುರಿತು ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ...

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ,...