Home namma chikmagalur chikamagalur ಕಗ್ಗಂಟಾಗಿ ಉಳಿದ ಅಂಚೆ ಮತಗಳ ಎಣಿಕೆ ಕಾರ್ಯ
chikamagalurHomeLatest Newsnamma chikmagalur

ಕಗ್ಗಂಟಾಗಿ ಉಳಿದ ಅಂಚೆ ಮತಗಳ ಎಣಿಕೆ ಕಾರ್ಯ

Share
Share

ಚಿಕ್ಕಮಗಳೂರು: ಹೈಕೋರ್ಟ್ ನಿರ್ದೇಶನದಂತೆ ಶನಿವಾರ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ಕಾರ್ಯ ಪೂರ್ಣಗೊಳ್ಳದೆ. ತಡರಾತ್ರಿವರೆಗೂ ಕಗ್ಗಂಟಾಗಿ ಉಳಿದಿತ್ತು.

2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ 201 ಮತಗಳಿಂದ ಜಯ ಸಾಧಿಸಿದ್ದರು. 1,822 ಅಂಚೆ ಮತಗಳಲ್ಲಿ 279 ಮತಗಳು ತಿರಸ್ಕೃತಗೊಂಡಿದ್ದವು. ಇದರ ವಿರುದ್ಧ ಬಿಜೆಪಿ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಹೈಕೋರ್ಟ್ ಮೊರೆ ಹೋಗಿದ್ದರು.

ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಸುಧಾಕರಶೆಟ್ಟಿ ಅವರು ಮಧ್ಯಾಹ್ನ ಮತ ಎಣಿಕೆ ಕೇಂದ್ರದಿಂದ ಹೊರ ಬಂದು, ‘ತಿರಸ್ಕೃತ ಮತಗಳ ಪರಿಶೀಲನೆ ಶೇ. 70ರಷ್ಟು ಮುಗಿದಿದೆ. ಯಾವುದೇ ಮತಪತ್ರ ಪುರಸ್ಕೃತವಾಗಿಲ್ಲ. ಈ ಮರು ಎಣಿಕೆಯಿಂದ ಫಲಿತಾಂಶದಲ್ಲಿ ವ್ಯತ್ಯಾಸ ಆಗುವುದಿಲ್ಲ’ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.

ಆರಂಭದ 350 ಮತಗಳ ಎಣಿಕೆಯ ವೇಳೆಗೆ ಟಿ.ಡಿ.ರಾಜೇಗೌಡ ಮತ್ತು ಡಿ.ಎನ್.ಜೀವರಾಜ್ ಇಬ್ಬರಿಗೂ ಗುರುತು ಹಾಕಿರುವ 50 ಮತ ಪತ್ರ ದೊರಕಿದವು. ‘2023ರಲ್ಲಿ ನಡೆದ ಎಣಿಕೆ ವೇಳೆ ಮಾನ್ಯವಾಗಿದ್ದ ಮತಪತ್ರಗಳಲ್ಲಿ ಈಗ ಇಬ್ಬರ ಹೆಸರಿಗೂ ಗುರುತು ಹಾಕಲಾಗಿದೆ ಎಂದರೆ ಮತಪತ್ರಗಳನ್ನು ವಿರೂಪಗೊಳಿಸಲಾಗಿದೆ. ಮತ ಎಣಿಕೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ರಾಜೇಗೌಡ ಪಟ್ಟು ಹಿಡಿದರು ಎಂದು ಮೂಲಗಳು ತಿಳಿಸಿವೆ.

ರಾಜೇಗೌಡ ಅವರು ಎಣಿಕೆಗೆ ಅಡ್ಡಿಪಡಿಸು ತ್ತಿದ್ದು ಅವರನ್ನು ಹೊರಗೆ ಕಳುಹಿಸಿ ಎಣಿಕೆ ಮಾಡಬೇಕು ಎಂದು ಬಿಜೆಪಿಯವರು ಪ್ರತಿಭಟನೆ ನಡೆಸಿದರು.

Postal vote counting remains a mess

Share

Leave a comment

Leave a Reply

Your email address will not be published. Required fields are marked *

Don't Miss

ಲವ್ ಜಿಹಾದ್ ಖಂಡಿಸಿ ನಗರದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ರಾಜ್ಯ ಹಾಗೂ ದೇಶದ ಹಲವೆಡೆ ನಡೆಯುತ್ತಿರುವ ಲವ್ ಜಿಹಾದ್ ಹಾಗೂ ಕಾರ್ಪೊರೇಟ್ ಜಿಹಾದ್‌ನಂತಹ ಕೃತ್ಯಗಳನ್ನು ಖಂಡಿಸಿ ವಿಶ್ವಹಿಂದೂ ಪರಿಷತ್-ಬಜರಂಗದಳ ಹಾಗೂ ಮಾತೃಶಕ್ತಿ ದುರ್ಗಾ ವಾಹಿನಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು....

ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ

ಚಿಕ್ಕಮಗಳೂರು : ಸರ್ವ ಜನರ ಉತ್ಸವವಾಗಿ ಜನೋತ್ಸವದ ರೀತಿ ವಿಶಿಷ್ಠ ಮಾದರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜಯಂತಿಯನ್ನು ವೈಚಾರಿಕಾ ಕಾರ್ಯಕ್ರಮವಾಗಿ ಏ.೨೭ ರಂದು ಸೋಮವಾರ ಬೆಳಿಗ್ಗೆ ೧೦.೩೦ ಕ್ಕೆ...

Related Articles

ಇಳೆಹೊಳೆ ಗ್ರಾಮದಲ್ಲಿ ನಮ್ಮೂರ ಶಾಲೆ ಪ್ರತಿರೋಧ ಚಳವಳಿಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲೆಯ ಇಳೆಹೊಳೆ ಗ್ರಾಮದಲ್ಲಿ “ನಮ್ಮೂರ ಶಾಲೆ ನಮ್ಮಯ ಕಣ್ಮಣಿ” ಎಂದು ಹೆಸರಿರುವಬ್ಯಾನರ್ ಅನ್ನು ಶಾಲಾಭಿವೃದ್ಧಿ...

ಆರೋಗ್ಯಪೂರ್ಣ ಶರೀರ ಸಂಪಾದಿಸಲು ನಡಿಗೆ ಅವಶ್ಯಕ

ಚಿಕ್ಕಮಗಳೂರು: ಆರೋಗ್ಯಪೂರ್ಣ ಶರೀರ ಸಂಪಾದಿಸಲು ನಡಿಗೆ ಅತ್ಯವಶ್ಯಕ. ಈ ಹಾ ದಿಯಲ್ಲಿ ಪ್ರತಿಯೊಬ್ಬರು ಹೆಚ್ಚು ತೊಡಗಿಸಿಕೊಂಡು...

ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ. ಎನ್. ಜೀವರಾಜ್ ಜಯ

ಚಿಕ್ಕಮಗಳೂರು: ಅತ್ಯಂತ ಕುತೂಹಲ ಮೂಡಿಸಿದ್ದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ...

ಮತ ಎಣಿಕೆ ವಿಳಂಬ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

ಚಿಕ್ಕಮಗಳುರು: ರಾಜ್ಯ ಸರ್ಕಾರ ತಮ್ಮ ಶಾಸಕನ ಸೋಲಿನ ಭಯದಲ್ಲಿ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಸ್ಥಗಿತ...