Home State News ಮುಂದಿನ ಮೂರು ದಿನಗಳು ಪ್ರವಾಸ ಮುಂದೂಡಿ : ಚಿಕ್ಕಮಗಳೂರು ಜಿಲ್ಲಾಡಳಿತ ಸೂಚನೆ
State News

ಮುಂದಿನ ಮೂರು ದಿನಗಳು ಪ್ರವಾಸ ಮುಂದೂಡಿ : ಚಿಕ್ಕಮಗಳೂರು ಜಿಲ್ಲಾಡಳಿತ ಸೂಚನೆ

Share
Share

 

ಚಿಕ್ಕಮಗಳೂರು : ಪ್ರವಾಸಿಗರೇ… ಸದ್ಯಕ್ಕೆ ಕಾಫಿನಾಡ ಪ್ರವಾಸ ಮುಂದೂಡಿ ನಾಳೆಯಿಂದ 3 ದಿನ ಕಾಫಿನಾಡಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಒಂದು ವಾರ ಅಥವಾ ಮಳೆ ನಿಲ್ಲೋವರೆಗೂ ನಿಮ್ಮ ಪ್ರವಾಸ ಮುಂದೂಡಿ ಎಂದು
ಪ್ರವಾಸಿಗರಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಮನವಿ ಮಾಡಿದೆ.

ಜಿಲ್ಲೆಯಲ್ಲಿ ವಾಡಿಕೆಗಿಂತ ಅಕಾಲಿಕ ಮಳೆ ಹೆಚ್ಚಾಗುತ್ತಿದೆ, ನದಿ-ಹಳ್ಳ-ಕೆರೆ ಗಳು ತುಂಬಿ ಕೆಲವೆಡೆ ಅಪಾಯದ ಮಟ್ಟದಲ್ಲಿವೆ ಅಲ್ಲದೇ ಮಲೆನಾಡಿನ ಅಲ್ಲಲ್ಲೇ ಭೂಕುಸಿತ ಕೂಡ ಉಂಟಾಗಿದೆ. ಮಲೆನಾಡಿನಲ್ಲಿ ಧರೆ, ಬೆಟ್ಟ-ಗುಡ್ಡ ಕುಸಿಯುವ ಸಂಭವ ಕೂಡ ಎದುರಾಗಿದೆ. ಇದರಿಂದಾಗಿ ನಿಮ್ಮ ಟ್ರಕ್ಕಿಂಗ್ ಹಾಗೂ ಪ್ರವಾಸ ಕಾರ್ಯಕ್ರಮಗಳನ್ನು ಮುಂದಿನ ಒಂದು ವಾರಗಳ ಕಾಲ ಮುಂದೂಡಿ ಎಂದು ಡಿ.ಸಿ ಕಚೇರಿಯಿಂದ ಸಲಹೆ ನೀಡಲಾಗಿದೆ. ಸಾರ್ವಜನಿಕರು ಹಾಗೂ ಹೊರ ಜಿಲ್ಲೆಗಳಿಂದ ಬರುವ ಪ್ರವಾಸಿಗರು ನದಿಪಾತ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.
ಅಲ್ಲದೇ ಬಟ್ಟೆಗಳು ಹಾಗೂ ಜಾನುವಾರುಗಳನ್ನು ತೊಳೆಯಲು ಕೆರೆ-ಕಟ್ಟೆಗಳ ಬಳಿ ಹೋಗದಂತೆ ಸಹಾ ಎಚ್ಚರಿಕೆ ಕೊಡಲಾಗಿದೆ.
ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಪ್ರವಾಸಿಗರು-ಸ್ಥಳಿಯರಿಗೆ ಮನವಿ ಮಾಡಲಾಗಿದೆ. ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ ಅದರಲ್ಲೂ ಮುಳ್ಳಯ್ಯನಗಿರಿ ಐ.ಡಿ ಪೀಠ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಿದೆ

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

127 K.G ಚಿನ್ನದ ಕಳ್ಳಿ ರನ್ಯಾರಾವ್ ಗೆ 102 ಕೋಟಿ ದಂಡ

ಚಿಕ್ಕಮಗಳೂರು: ಚಿಕ್ಕಮಗಳೂರು ಮೂಲದ ಚಿತ್ರನಟಿ ರನ್ಯಾ ರಾವ್ ವಿದೇಶದಿಂದ 127ಕೆ,ಜಿ,ಚಿನ್ನ ಕದ್ದು ತಂದು ಕಂದಾಯ ಗುಪ್ತಚರ...

ಮಾರುಕಟ್ಟೆಯಲ್ಲಿ ಟೊಮೆಟೊ ಧಾರಣೆ ದಿಢೀರ್‌ ಕುಸಿತ

ಬೆಂಗಳೂರು: ಮಳೆ, ಮೋಡ ಕವಿದ ವಾತಾವರಣ ಮತ್ತು ರೋಗಬಾಧೆಯಿಂದ ಗುಣಮಟ್ಟ ಕಳೆದು ಕೊಳ್ಳುತ್ತಿರುವ ಟೊಮೆಟೊ ಧಾರಣೆ...

ಕೇಂದ್ರ ಸರ್ಕಾರದ ಅನುದಾನ ಹಾಗೂ ತೆರಿಗೆ ಪಾಲು ಕುರಿತು ನಮ್ಮ ಸರ್ಕಾರ ‘ಶ್ವೇತಪತ್ರ’ ಪತ್ರ

ವಿಧಾನಸಭೆ:  ಕೇಂದ್ರ ಸರ್ಕಾರವು ಕೇಂದ್ರ ಪುರಸ್ಕೃತ ಯೋಜನೆಗಳಿಗೆ ರಾಜ್ಯಕ್ಕೆ ನೀಡುತ್ತಿರುವ ಅನುದಾನ ಹಾಗೂ ತೆರಿಗೆ ಪಾಲು...

ಮಟ್ಟು ಔಟ್- ಶಿವಕುಮಾರ್ ಇನ್- ಆರತಿ ಸ್ಟ್ರಾಂಗ್- ಜಕ್ಕಣ್ಣ ಒಕೆ

ಬೆಂಗಳೂರು: ವಿಧಾನ ಪರಿಷತ್ ಗೆ ನಾಲ್ವರನ್ನು ನೇಮಕ ಮಾಡಿ ಎರಡು ತಿಂಗಳ ಹಿಂದೆ ರಾಜ್ಯಪಾಲರ ಬಳಿ...