Home namma chikmagalur chikamagalur ನಡು ರಸ್ತೆಯಲ್ಲೇ ಮಚ್ಚು ಹಿಡಿದು ಭೀಕರವಾಗಿ ಜಗಳ
chikamagalurCrime NewsHomeLatest Newsnamma chikmagalur

ನಡು ರಸ್ತೆಯಲ್ಲೇ ಮಚ್ಚು ಹಿಡಿದು ಭೀಕರವಾಗಿ ಜಗಳ

Share
Share

ಚಿಕ್ಕಮಗಳೂರು: ಮನೆ ಮುಂದೆ ನೀರು ಹರಿದ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಕಪಕ್ಕದ ಮನೆಯವರು ನಡು ರಸ್ತೆಯಲ್ಲೇ ಮಚ್ಚು ಹಿಡಿದು ಭೀಕರವಾಗಿ ಜಗಳವಾಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದಲ್ಲಿ ನಡೆದಿದೆ.

ವಿಶೇಷವೆಂದರೆ, ಗಲಾಟೆ ಮಾಡಿಕೊಂಡ ಇಬ್ಬರ ಹೆಸರೂ ಸತೀಶ್ ಎಂಬುದಾಗಿದೆ. ಮನೆ ಮುಂದೆ ನೀರು ಹರಿಯುವ ಸಣ್ಣ ವಿಷಯಕ್ಕೆ ಶುರುವಾದ ತಕರಾರು ವಿಕೋಪಕ್ಕೆ ತಿರುಗಿದ್ದು, ಇಬ್ಬರೂ ಮಚ್ಚು ಹಿಡಿದು ಬೀದಿಗೆ ಬಿದ್ದಿದ್ದಾರೆ.

ಗಲಾಟೆಯ ತೀವ್ರತೆ ಎಷ್ಟಿತ್ತೆಂದರೆ, ಒಬ್ಬ ಸತೀಶ್ ಮಚ್ಚನ್ನು ಕೈಯಲ್ಲಿ ಅತ್ಯಂತ ಗಟ್ಟಿಯಾಗಿ ಹಿಡಿದಿದ್ದರಿಂದ ಆತನ ಕೈಯಿಂದ ರಕ್ತ ಹರಿದಿದೆ. ಈ ವೇಳೆ ಸ್ಥಳೀಯರು ಮಧ್ಯಪ್ರವೇಶಿಸಿ, ಹರಸಾಹಸಪಟ್ಟು ಆತನ ಕೈಯಲ್ಲಿದ್ದ ಮಚ್ಚನ್ನು ಕಸಿದುಕೊಂಡಿದ್ದಾರೆ. ಆದರೆ ಮಚ್ಚು ಕಿತ್ತುಕೊಂಡ ತಕ್ಷಣವೇ ಮತ್ತೊಬ್ಬ ಸತೀಶ್ ಇಟ್ಟಿಗೆಯನ್ನು ಹಿಡಿದು ಹಲ್ಲೆ ಮಾಡಲು ಮುಂದಾಗಿದ್ದಾನೆ.

ಸದ್ಯ ಈ ಜಗಳದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Prepare a picture of a fierce fight with a machete in the middle of the road.

Share

Leave a comment

Leave a Reply

Your email address will not be published. Required fields are marked *

Don't Miss

ಬಿಡದಿ ರೈತರ ಹೋರಾಟ ಬೆಂಬಲಿಸಿ ಆ.25ರಂದು ವಿಧಾನಸೌಧ ಚಲೋ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಾಗೂ ರೈತರ ಭೂಮಿ ರಕ್ಷಣೆಗೆ ಆಗ್ರಹಿಸಿ ಆ.25ರಂದು ಬೆಂಗಳೂರಿನಲ್ಲಿ ಬೃಹತ್ ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ ಎಂದು...

ಮುಂಗಾರು ಋತುವಿನಲ್ಲಿ ಜಿಲ್ಲೆಯಲ್ಲಿ ಶೇ.35 ಮಳೆ ಕೊರತೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಋತುವಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೆ ಶೇ.೩೫ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...

Related Articles

ಕುದುರೆಮುಖ ಭಾಗದಲ್ಲಿ ವಾಸಿಗರ ವಿಶೇಷ ಗಮನ ಸೆಳೆದ ನೀಲಕುರಿಂಜಿ

ಚಿಕ್ಕಮಗಳೂರು:  ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯಕ್ಕೆ ಮತ್ತೊಂದು ವಿಶೇಷ ಮೆರುಗು ನೀಡುವಂತೆ ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ...

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ...

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ...

ಅಜ್ಜಂಪುರ ಸುತ್ತಮುತ್ತ ಕರಡಿ ಹಾವಳಿ

ಅಜ್ಜಂಪುರ: ಅಜ್ಜಂಪುರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚಿನ ದಿನಗಳಲ್ಲಿ ಕರಡಿ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹಗಲು-ರಾತ್ರಿ...