Home namma chikmagalur ajjampura ಭೀಕರ ಕೊಲೆ ಆರೋಪಿಗೆ ಜೈಲು ಶಿಕ್ಷೆ-ದಂಡ
ajjampurachikamagalurHomeLatest Newsnamma chikmagalur

ಭೀಕರ ಕೊಲೆ ಆರೋಪಿಗೆ ಜೈಲು ಶಿಕ್ಷೆ-ದಂಡ

Share
Share

ಮೂಡಿಗೆರೆ: ತಾಲೂಕಿನ ಕುನ್ನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣದ ಆರೋಪಿಗೆ ಚಿಕ್ಕಮಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಎಂಟು ವರ್ಷ, ಒಂದು ತಿಂಗಳು ಮತ್ತು ಎರಡು ದಿನಗಳ ಕಾಲ ಸಾಧಾರಣ ಜೈಲು ಶಿಕ್ಷೆ ಹಾಗೂ 35,000 ರೂ. ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

2018ರ ಜನವರಿ 22ರಂದು ಅಸ್ತಿ ಮತ್ತು ಜಾಗದ ವಿಚಾರವಾಗಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ಅಂಬಿಕಾ ಎಂಬುವವರು ಅದೇ ಗ್ರಾಮದ ನಿವಾಸಿ ಸಂಜೀವ ಎಂಬುವವರನ್ನು ಕೊಲೆ ಮಾಡಿದ್ದರು. ಕೃತ್ಯದ ಬಳಿಕ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮರುದಿನ ಬೆಳಿಗ್ಗೆ ಶವಕ್ಕೆ ಟೈರ್ ಮತ್ತು ಒಣ ಎಲೆಗಳನ್ನು ಹಾಕಿ ಸುಟ್ಟು ಹಾಕುವ ಮೂಲಕ ಕ್ರೌರ್ಯ ಮೆರೆದಿದ್ದರು. ಈ ಸಂಬಂಧ ಮೃತರ ಸಹೋದರ ನೀಡಿದ ದೂರಿನ ಮೇರೆಗೆ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿ ಅಂಬಿಕಾ ವಿರುದ್ಧದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ, ಈಗಾಗಲೇ ಆಕೆ ನ್ಯಾಯಾಂಗ ಬಂಧನದಲ್ಲಿ ಕಳೆದ ಅವಧಿಯನ್ನೇ ಶಿಕ್ಷೆಯಾಗಿ ಪರಿಗಣಿಸಿ ಆದೇಶ ಹೊರಡಿಸಿದೆ. ದಂಡದ ಮೊತ್ತ 35,000 ರೂ. ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಎರಡು ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.

ಅಂದಿನ ಮೂಡಿಗೆರೆ ವೃತ್ತ ನಿರೀಕ್ಷಕ ಜಗದೀಶ್ ಎಂ ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ಸರ್ಕಾರದ ಪರವಾಗಿ ಅಭಿಯೋಜಕಿ ವೀಣಾ ಅವರು ಸಮರ್ಥವಾಗಿ ವಾದ ಮಂಡಿಸಿದ್ದರು. ತನಿಖಾ ತಂಡದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಮಯೋಚಿತ ಕರ್ತವ್ಯದ ಫಲವಾಗಿ ಎಂಟು ವರ್ಷಗಳ ನಂತರ ಈ ಪ್ರಕರಣದ ಆರೋಪಿಗೆ ಶಿಕ್ಷೆಯಾಗಿದೆ.

Prison sentence and fine for gruesome murder accused

Share

Leave a comment

Leave a Reply

Your email address will not be published. Required fields are marked *

Don't Miss

ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ಕಾಡಾನೆ ಸೆರೆ

ಚಿಕ್ಕಮಗಳೂರು: ಕಳೆದ ಒಂದು ವಾರದಿಂದ ಮಲೆನಾಡಿಗರ ನಿದ್ದೆಗೆಡಿಸಿ, ಇಬ್ಬರು ಅಮಾಯಕರನ್ನು ಬಲಿಪಡೆದಿದ್ದ ರಕ್ಕಸ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಭಾನುವಾರ ಬೆಳಿಗ್ಗೆ ಮತ್ತೊಬ್ಬ ಕಾರ್ಮಿಕ ಮಹಿಳೆಯನ್ನು ಭೀಕರವಾಗಿ ಕೊಂದ...

ಆಸ್ತಿ ವಿವಾದ – ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಆಸ್ತಿ ವಿವಾದವೊಂದು ಭೀಕರ ಸ್ವರೂಪ ಪಡೆದುಕೊಂಡಿದೆ. ತಂದೆ ತಾಯಿ ಹಾಗೂ ತಂಗಿಯನ್ನು ಕಳೆದುಕೊಂಡು ಅನಾಥನಾಗಿದ್ದ ಯುವಕನೋರ್ವ ಪೊಲೀಸ್ ಠಾಣೆಯ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಾಫಿನಾಡನ್ನು ಬೆಚ್ಚಿಬೀಳಿಸಿದೆ. ನಗರದ ಪುನೀತ್‌...

Related Articles

ಖಂಡ್ರೆ ಸಭೆಯಿಂದ ಕಾಡು ಪ್ರಾಣಿಗಳ “ಅನಾಹುತ” ನಿಲ್ಲಿಸಲು ಸಾಧ್ಯವೇ ?

ಅರಣ್ಯ ಸಚಿವ ಖಂಡ್ರೆ(ಕಂಡರೆ) ಆನೆ,ಹುಲಿ.ಸಿಂಹ,ಇಲಿ,ಪಲ್ಲಿಗಳು ನಡುಗುತ್ತವೆ ಎಂಬ ಭ್ರಮೆ ಯಲ್ಲಿ ಬಾಳೆ ಹೊನ್ನೂರಲ್ಲಿ ರೈತರು,ಬೆಳೆಗಾರರು ಮತ್ತು...

ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿದ ಎಸ್.ಎಲ್.ಭೋಜೇಗೌಡ

ಚಿಕ್ಕಮಗಳೂರು: ದುಬೈ ವಿಮಾನ ನಿಲ್ದಾಣದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಸಿಲುಕಿದ್ದಾರೆ. ದುಬೈ ವಿಮಾನ ನಿಲ್ದಾಣದಿಂದ...

ಬಾಳೆಹೊನ್ನೂರಿನಲ್ಲಿ ನಡೆದ ಸಭೆಯಲ್ಲಿ ಅರಣ್ಯ ಸಚಿವರ ಭಾಷಣಕ್ಕೆ ಅಡ್ಡಿ

ಎನ್.ಆರ್ ಪುರ: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ...

ಹಳೇ ವೈಷಮ್ಯದ ಹಿನ್ನೆಲೆ ವ್ಯಕ್ತಿಯ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ

ಚಿಕ್ಕಮಗಳೂರು: ಹಳೇ ವೈಷಮ್ಯದ ಹಿನ್ನೆಲೆ ವ್ಯಕ್ತಿ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು...