Home Crime News ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಖಾಸಗಿ ಫೈನಾನ್ಸ್ ಕಚೇರಿ
Crime News

ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಖಾಸಗಿ ಫೈನಾನ್ಸ್ ಕಚೇರಿ

Share
Share

ಚಿಕ್ಕಮಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೂಡಿಗೆರೆ ಮೇಗಲಪೇಟೆಯ ಪಾರ್ವತಿ ಹೈಟ್ಸ್ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಕಟ್ಟಡದಲ್ಲಿದ್ದ ಕೆನರಾ ಬ್ಯಾಂಕ್ ಮೇಲಂತಸ್ತಿನಲ್ಲಿರುವ ಶ್ರೀರಾಮ್ ಫೈನಾನ್ಸ್ ಕಛೇರಿ ಸುಟ್ಟು ಭಸ್ಮವಾಗಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಕಟ್ಟಡದಿಂದ ಹೊಗೆ ಬರುವುದನ್ನು ಕಂಡ ಅಕ್ಕಪಕ್ಕದವರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವ ಹೊತ್ತಿಗಾಗಲೇ ಶ್ರೀರಾಮ್ ಫೈನಾನ್ಸ್ ಕಛೇರಿ ಬಹುತೇಕ ಸುಟ್ಟು ಕರಕಲಾಗಿದೆ. ಮೂಡಿಗೆರೆ ಅಗ್ನಿಶಾಮಕ ವಾಹನವಲ್ಲದೇ ಚಿಕ್ಕಮಗಳೂರಿನಿಂದಲೂ ಹೆಚ್ಚುವರಿ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಆಗಮಿಸಿ ಬೆಂಕಿನಂದಿಸುವ ಕಾರ್ಯದಲ್ಲಿ ನಿರತರಾದರು. ರಾತ್ರಿ ಸುಮಾರು 3 ಗಂಟೆಯ ಸಮಯಕ್ಕೆ ಸಂಪೂರ್ಣ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಂಜಾಗೃತ ಕ್ರಮವಾಗಿ ಮೂಡಿಗೆರೆ ಪಟ್ಟಣದಾದ್ಯಂತ ವಿದ್ಯುತ್ ನಿಲುಗಡೆ ಮಾಡಲಾಗಿತ್ತು.

ಬೆಂಕಿ ಇಂದಾಗಿ ಶ್ರೀರಾಮ್ ಫೈನಾನ್ಸ್ ಕಛೇರಿ ಕಡತಗಳು ಮತ್ತು ಪರಿಕರಗಳು ಸಂಪೂರ್ಣ ಭಸ್ಮವಾಗಿವೆ. ಲಾಕರ್ ನಲ್ಲಿದ್ದು ಹಣ ಮತ್ತು ಚಿನ್ನವನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ.

ಇದೇ ಕಟ್ಟಡದಲ್ಲಿ ಪಟ್ಟಣದ ಪ್ರಮುಖ ಬ್ಯಾಂಕ್ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಕಛೇರಿಗಳು, ಮನೆಗಳು ಇದ್ದವು. ಬೆಂಕಿ ಕೆನರಾ ಬ್ಯಾಂಕ್ ಸೇರಿದಂತೆ ಇಡೀ ಕಟ್ಟಡಕ್ಕೆ ವ್ಯಾಪಿಸುವ ಅಪಾಯ ಎದುರಾಗಿತ್ತು. ಕಟ್ಟಡದಲ್ಲಿದ್ದ ವಾಸವಾಗಿದ್ದ ಮನೆಗಳ ನಿವಾಸಿಗಳು ಮುಂಜಾಗೃತ ಕ್ರಮವಾಗಿ ಪ್ರಮುಖ ವಸ್ತುಗಳೊಂದಿಗೆ ಮನೆಯಿಂದ ಹೊರಗೆ ಬಂದಿದ್ದರು. ಬೆಂಕಿ ತಗುಲಿದ್ದ ಕಛೇರಿಯ ಮೇಲ್ಬಾಗದ ಮನೆಯಲ್ಲಿ ವೈದ್ಯರೊಬ್ಬರು ಬಾಡಿಗೆಯಿದ್ದರು. ಅವರ ಕುಟುಂಬವನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಕಟ್ಟಡದಲ್ಲಿ ಇರುವ ಮನೆಗಳ ನೆಲ ಮತ್ತು ಗೋಡೆಗಳು ಶಾಖದಿಂದ ಬಿಸಿಯಾಗಿದೆ. ಕೆನರಾ ಬ್ಯಾಂಕ್ ಕಛೇರಿಗೆ ಬೆಂಕಿ ತಗುಲಿದ್ದರೆ ಅಪಾರ ಪ್ರಮಾಣದ ನಷ್ಟ, ದಾಖಲೆ ನಷ್ಟ ಸಂಭವಿಸುತ್ತಿತ್ತು.

ಕಟ್ಟಡವು ಪಟ್ಟಣದ ಶಿವಪ್ರಕಾಶ್ ಅವರಿಗೆ ಸೇರಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಥವಾ ಯು.ಪಿ.ಎಸ್. ಹೀಟ್ ಆಗಿ ಬೆಂಕಿ ತಲುಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳೀಯ ನಿವಾಸಿಗಳ ಸಮಯಪ್ರಜ್ಞೆ ಮತ್ತು ಅಗ್ನಿಶಾಮಕ ಸಿಬ್ಬಂದಿಯ ಸಕಾಲಿಕ ಕಾರ್ಯದಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ

ಚಿಕ್ಕಮಗಳೂರು:  ಬಾಲ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪ ರಾಧವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವ ಮಾಲೀಕರಿಗೆ ೬ ತಿಂಗಳಿಗಿಂತ ಕಡಿಮೆಯಿಲ್ಲದಂತೆ ೨ ವರ್ಷ ಜೈಲು ಶಿಕ್ಷೆ ಹಾ ಗೂ...

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

Related Articles

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...

ಎರಡು ಪ್ರತ್ಯೇಕ ಪೋಕೋ ಪ್ರಕರಣದಲ್ಲಿ ಇಬ್ಬರ ಬಂಧನ

ಬಾಳೆಹೊನ್ನೂರು: ಅಪ್ರಾಪ್ತರ ಮೇಲಿನ ದೌರ್ಜನ್ಯ ಕುರಿತಂತೆ 2 ಪ್ರತ್ಯೇಕ ಪೋಕೋ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ಬಾಳೆಹೊನ್ನೂರು...