Home Crime News ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಖಾಸಗಿ ಫೈನಾನ್ಸ್ ಕಚೇರಿ
Crime News

ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಖಾಸಗಿ ಫೈನಾನ್ಸ್ ಕಚೇರಿ

Share
Share

ಚಿಕ್ಕಮಗಳೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮೂಡಿಗೆರೆ ಮೇಗಲಪೇಟೆಯ ಪಾರ್ವತಿ ಹೈಟ್ಸ್ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಕಟ್ಟಡದಲ್ಲಿದ್ದ ಕೆನರಾ ಬ್ಯಾಂಕ್ ಮೇಲಂತಸ್ತಿನಲ್ಲಿರುವ ಶ್ರೀರಾಮ್ ಫೈನಾನ್ಸ್ ಕಛೇರಿ ಸುಟ್ಟು ಭಸ್ಮವಾಗಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಕಟ್ಟಡದಿಂದ ಹೊಗೆ ಬರುವುದನ್ನು ಕಂಡ ಅಕ್ಕಪಕ್ಕದವರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವ ಹೊತ್ತಿಗಾಗಲೇ ಶ್ರೀರಾಮ್ ಫೈನಾನ್ಸ್ ಕಛೇರಿ ಬಹುತೇಕ ಸುಟ್ಟು ಕರಕಲಾಗಿದೆ. ಮೂಡಿಗೆರೆ ಅಗ್ನಿಶಾಮಕ ವಾಹನವಲ್ಲದೇ ಚಿಕ್ಕಮಗಳೂರಿನಿಂದಲೂ ಹೆಚ್ಚುವರಿ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಆಗಮಿಸಿ ಬೆಂಕಿನಂದಿಸುವ ಕಾರ್ಯದಲ್ಲಿ ನಿರತರಾದರು. ರಾತ್ರಿ ಸುಮಾರು 3 ಗಂಟೆಯ ಸಮಯಕ್ಕೆ ಸಂಪೂರ್ಣ ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಂಜಾಗೃತ ಕ್ರಮವಾಗಿ ಮೂಡಿಗೆರೆ ಪಟ್ಟಣದಾದ್ಯಂತ ವಿದ್ಯುತ್ ನಿಲುಗಡೆ ಮಾಡಲಾಗಿತ್ತು.

ಬೆಂಕಿ ಇಂದಾಗಿ ಶ್ರೀರಾಮ್ ಫೈನಾನ್ಸ್ ಕಛೇರಿ ಕಡತಗಳು ಮತ್ತು ಪರಿಕರಗಳು ಸಂಪೂರ್ಣ ಭಸ್ಮವಾಗಿವೆ. ಲಾಕರ್ ನಲ್ಲಿದ್ದು ಹಣ ಮತ್ತು ಚಿನ್ನವನ್ನು ಸುರಕ್ಷಿತವಾಗಿ ಹೊರ ತೆಗೆಯಲಾಗಿದೆ.

ಇದೇ ಕಟ್ಟಡದಲ್ಲಿ ಪಟ್ಟಣದ ಪ್ರಮುಖ ಬ್ಯಾಂಕ್ ಕೆನರಾ ಬ್ಯಾಂಕ್ ಸೇರಿದಂತೆ ವಿವಿಧ ಕಛೇರಿಗಳು, ಮನೆಗಳು ಇದ್ದವು. ಬೆಂಕಿ ಕೆನರಾ ಬ್ಯಾಂಕ್ ಸೇರಿದಂತೆ ಇಡೀ ಕಟ್ಟಡಕ್ಕೆ ವ್ಯಾಪಿಸುವ ಅಪಾಯ ಎದುರಾಗಿತ್ತು. ಕಟ್ಟಡದಲ್ಲಿದ್ದ ವಾಸವಾಗಿದ್ದ ಮನೆಗಳ ನಿವಾಸಿಗಳು ಮುಂಜಾಗೃತ ಕ್ರಮವಾಗಿ ಪ್ರಮುಖ ವಸ್ತುಗಳೊಂದಿಗೆ ಮನೆಯಿಂದ ಹೊರಗೆ ಬಂದಿದ್ದರು. ಬೆಂಕಿ ತಗುಲಿದ್ದ ಕಛೇರಿಯ ಮೇಲ್ಬಾಗದ ಮನೆಯಲ್ಲಿ ವೈದ್ಯರೊಬ್ಬರು ಬಾಡಿಗೆಯಿದ್ದರು. ಅವರ ಕುಟುಂಬವನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಕಟ್ಟಡದಲ್ಲಿ ಇರುವ ಮನೆಗಳ ನೆಲ ಮತ್ತು ಗೋಡೆಗಳು ಶಾಖದಿಂದ ಬಿಸಿಯಾಗಿದೆ. ಕೆನರಾ ಬ್ಯಾಂಕ್ ಕಛೇರಿಗೆ ಬೆಂಕಿ ತಗುಲಿದ್ದರೆ ಅಪಾರ ಪ್ರಮಾಣದ ನಷ್ಟ, ದಾಖಲೆ ನಷ್ಟ ಸಂಭವಿಸುತ್ತಿತ್ತು.

ಕಟ್ಟಡವು ಪಟ್ಟಣದ ಶಿವಪ್ರಕಾಶ್ ಅವರಿಗೆ ಸೇರಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಥವಾ ಯು.ಪಿ.ಎಸ್. ಹೀಟ್ ಆಗಿ ಬೆಂಕಿ ತಲುಗಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳೀಯ ನಿವಾಸಿಗಳ ಸಮಯಪ್ರಜ್ಞೆ ಮತ್ತು ಅಗ್ನಿಶಾಮಕ ಸಿಬ್ಬಂದಿಯ ಸಕಾಲಿಕ ಕಾರ್ಯದಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...