Home namma chikmagalur ಸಖರಾಯಪಟ್ಟಣದ ಅಗ್ರಹಾರ ಬಳಿ ನಿಷೇಧಾಜ್ಞೆ ಜಾರಿ
namma chikmagalurHomeKadurLatest News

ಸಖರಾಯಪಟ್ಟಣದ ಅಗ್ರಹಾರ ಬಳಿ ನಿಷೇಧಾಜ್ಞೆ ಜಾರಿ

Share
Share

ಚಿಕ್ಕಮಗಳೂರು: ಸಖರಾಯಪಟ್ಟಣ ಹೋಬಳಿ ಅಗ್ರಹಾರ ಗ್ರಾಮದ ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗೆ ಪರ-ವಿರೋಧ ವ್ಯಕ್ತವಾಗಿದ್ದು, ಉಭಯ ಕಡೆ ಅಹಿತಕರ ಘಟನೆ ನಡೆಯುವ ಸಂಭವವಿರುವುದರಿಂದ ಸ್ಥಳದಿಂದ ಒಂದು ಕಿ.ಮೀ. ವ್ಯಾಪ್ತಿಯವರೆಗೆ ಜುಲೈ ೨೮ ರಿಂದ ಆಗಸ್ಟ್ ೩ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ತರೀಕೆರೆ ಉಪವಿಭಾಗಾಧಿಕಾರಿಗಳಾದ ಎನ್.ವಿ.ನಟೇಶ್ ಅವರು ಆದೇಶ ಹೊರಡಿಸಿದ್ದಾರೆ.

ಅಯ್ಯನಕೆರೆಯಿಂದ ಕೋಡಿ ಬಿದ್ದ ನೀರು ವೇದಾವತಿ ಹಳ್ಳದ ಮೂಲಕ ಕಡೂರು, ಯಗಟಿ ಮಾರ್ಗವಾಗಿ ಚಿತ್ರದುರ್ಗ ತಾಲ್ಲೂಕಿನ ಮಾರಿಕಣಿವೆಗೆ ಹರಿಯುತ್ತದೆ. ಹೀಗೆ ಹರಿಯುವ ನೀರನ್ನು ಅಗ್ರಹಾರ ಗ್ರಾಮದ ಬಳಿ ಇರುವ ಚೆಕ್‌ಡ್ಯಾಂ ಮೇಲ್ಭಾಗದಲ್ಲಿ ಸುಮಾರು ೫ ಮೀಟರ್ ಎತ್ತರದಲ್ಲಿ ಟ್ಯಾಂಕ್ ನಿರ್ಮಿಸಿ ಈ ಟ್ಯಾಂಕ್‌ಗೆ ಕೋಡಿ ಬಿದ್ದ ನೀರು ಸಂಗ್ರಹಿಸಿ ಪೈಪ್‌ಲೈನ್ ಮೂಲಕ ನಾಗೇನಹಳ್ಳಿ ಗ್ರಾಮದ ಕಟ್ಟೆ ಹಾಗೂ ಹುಲಿಕೆರೆ ಗ್ರಾಮದ ಕಟ್ಟೆ ಹಾಗೂ ಹುಲಿಕೆರೆಗೆ ಸಮೀಪವಿರುವ ಬೆರಟಿಕೆರೆಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ೨೦೨೩ರ ಫೆಬ್ರವರಿಯಲ್ಲಿ ಶಂಕುಸ್ಥಾಪನೆ ನಡೆದಿತ್ತು. ಇತ್ತೀಚೆಗೆ ಕಾಮಗಾರಿ ಆರಂಭಗೊಂಡಿದ್ದು, ವೇದಾವತಿ ಹಳ್ಳ ಹರಿಯುವ ಕೆಳಭಾಗದ ಗ್ರಾಮಗಳ ರೈತರು ತಡೆಯೊಡ್ಡಿದ್ದರು.

ವೇದಾವತಿ ಹಳ್ಳ ಹರಿಯುವ ಕೆಳಭಾಗದ ಗ್ರಾಮಗಳ ಗುಬ್ಬಿಹಳ್ಳಿ, ಜಿಗಣೆಹಳ್ಳಿ, ಕುರುಬಗೆರೆ, ದೊಡ್ಡಪಟ್ಟಣಗೆರೆ, ದೊಂಬರಹಳ್ಳಿ, ಚನ್ನಾಪುರ, ಬಂಡಿಕೊಪ್ಪಲು, ಕಡೂರುಹಳ್ಳಿ ಮತ್ತಿತರ ಗ್ರಾಮಗಳ ರೈತರು ಈ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿದ್ದರೆ, ಹುಲಿಕೆರೆ ನಾಗೇನಹಳ್ಳಿ, ಕಂಚುಗಾರನಹಳ್ಳಿ, ಮಡಿಕೆಹೊಸಳ್ಳಿ ಸುತ್ತಮುತ್ತಲ ಗ್ರಾಮಗಳ ರೈತರು ಕಾಮಗಾರಿಯ ಪರವಾಗಿದ್ದಾರೆ.

ಜುಲೈ ೧೯ ರಂದು ಉಭಯ ಕಡೆಯವರು ಅಗ್ರಹಾರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಉಭಯ ಬಣದ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಿಗಿ ಪೊಲೀಸ್ ರಕ್ಷಣೆ ಒದಗಿಸಿದ್ದರಿಂದ ಯಾವುದೇ ಅಹಿತಕರ ಘಟನೆಗೆ ಆಸ್ಪದವಾಗಿರಲಿಲ್ಲ. ಆದರೂ ಉಭಯ ಕಡೆಯ ನಡುವೆ ಯಾವುದೇ ಅಹಿತಕರ ಘಟನೆಗಳ ಸಂಭವಿಸಬಾರದೆನ್ನುವ ದೃಷ್ಟಿಯಿಂದ ಇದೀಗ ನಿಷೇಧಾಜ್ಞೆ ಹೊರಡಿಸಿರುವುದಾಗಿ ಅವರು ತಿಳಿಸಿದ್ದಾರೆ.

Prohibitory order imposed near Agrahara in Sakharayapattana

Share

Leave a comment

Leave a Reply

Your email address will not be published. Required fields are marked *

Don't Miss

ಧರ್ಮಸ್ಥಳ ಪ್ರಕರಣಗಳ ತನಿಖೆ ಎಸ್‌ಐಟಿ ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಚಿಕ್ಕಮಗಳೂರು: ಧರ್ಮಸ್ಥಳ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ನಿಷ್ಪಕ್ಷಪಾತವಾಗಿ ನಡೆಸಿ ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ನೊಂದವರಿಗೆ ನ್ಯಾಯ ಸಿಗುವಂತಾಗಬೇಕು ಎಂದು ಕರ್ನಾಟಕ ಜನಶಕ್ತಿ ಹಾಗೂ ಎದ್ದೇಳು ಕರ್ನಾಟಕ...

ಜನಸಾಮಾನ್ಯರ ಏಳಿಗೆಗೆ ಜೀವನ ಮೀಸಲಿಟ್ಟವರು ಹೆಚ್.ಟಿ.ರಾಜೇಂದ್ರ

ಚಿಕ್ಕಮಗಳೂರು: :- ಸಮಾಜದಲ್ಲಿನ ಶೋಷಿತರು, ರೈತರು, ದಲಿತರ ಮೂಲಹಕ್ಕಿಗಾಗಿ ವೈ ಯಕ್ತಿಕ ಜೀವನವನ್ನು ಜನಸಾಮಾನ್ಯರ ಏಳಿಗೆಗೆ ಮೀಸಲಿಟ್ಟು ಚಳುವಳಿ ರೂಪಿಸಿದ ಅಪರೂಪದ ಜನನಾ ಯಕ ರಾಜೇಂದ್ರರವರು ಎಂದು ಕೆಪಿಸಿಸಿ ವಕ್ತಾರ ಹೆಚ್.ಹೆಚ್.ದೇವರಾಜ್...

Related Articles

ನಯನಮೋಟಮ್ಮ ಅಲಿಯಾಸ್ ನಯನ ಕಮಲಮ್ಮ?

ಮೂಡಿಗೆರೆ: ಮೂಡಿಗೆರೆ ಶಾಸಕಿ ನಯನಮೋಟಮ್ಮ ಕೇಸರಿ ಶಾಲು ಧರಿಸಿ ಹಿಂದು ಮಹಸಭಾ ಗಣಪತಿ ಕಾರ್ಯಕ್ರಮದಲ್ಲಿ ಪ್ರಮೋದ್...

ತಾಯಿಗೆ ಬೆಂಕಿ ಹಾಕಿ ಕೊಂದ ಮಗ

ಚಿಕ್ಕಮಗಳೂರು: ತಾಯಿಯನ್ನು ಮಗ ಬೆಂಕಿ ಹಾಕಿ ಸುಟ್ಟು ಕೊಂದಿರುವ ಅಮಾನುಷ ಘಟನೆ ನಡೆದಿದೆ. ಆಲ್ದೂರು ಠಾಣೆ...

ಆ.17: ಅಜ್ಜಂಪುರ ಪ.ಪಂ. ಚುನಾವಣೆಗೆ ವೇಳಾ ಪಟ್ಟಿ ಪ್ರಕಟ

ಚಿಕ್ಕಮಗಳೂರು: ಹೊಸದಾಗಿ ರಚನೆಯಾಗಿರುವ ಅಜ್ಜಂಪುರ ಪಟ್ಟಣ ಪಂಚಾಯಿತಿಯ ನಂ. ೧ರಿಂದ ೧೨ ವಾರ್ಡ್‌ಗಳ ಕೌನ್ಸಿಲರುಗಳ ಸಾರ್ವತ್ರಿಕ...

ಗೊಬ್ಬರದ ಅಭಾವಕ್ಕೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯೇ ಕಾರಣ

ಚಿಕ್ಕಮಗಳೂರು: ರಾಜ್ಯದಲ್ಲಿ ಯೂರಿಯಾ ಗೊಬ್ಬರದ ಅಭಾವ ಸೃಷ್ಟಿಯಾಗಲು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯೇ ಕಾರಣ ,ಗೊಬ್ಬರ...