Home namma chikmagalur ಸಖರಾಯಪಟ್ಟಣದ ಅಗ್ರಹಾರ ಬಳಿ ನಿಷೇಧಾಜ್ಞೆ ಜಾರಿ
namma chikmagalurHomeKadurLatest News

ಸಖರಾಯಪಟ್ಟಣದ ಅಗ್ರಹಾರ ಬಳಿ ನಿಷೇಧಾಜ್ಞೆ ಜಾರಿ

Share
Share

ಚಿಕ್ಕಮಗಳೂರು: ಸಖರಾಯಪಟ್ಟಣ ಹೋಬಳಿ ಅಗ್ರಹಾರ ಗ್ರಾಮದ ಚೆಕ್‌ಡ್ಯಾಂ ನಿರ್ಮಾಣ ಕಾಮಗಾರಿಗೆ ಪರ-ವಿರೋಧ ವ್ಯಕ್ತವಾಗಿದ್ದು, ಉಭಯ ಕಡೆ ಅಹಿತಕರ ಘಟನೆ ನಡೆಯುವ ಸಂಭವವಿರುವುದರಿಂದ ಸ್ಥಳದಿಂದ ಒಂದು ಕಿ.ಮೀ. ವ್ಯಾಪ್ತಿಯವರೆಗೆ ಜುಲೈ ೨೮ ರಿಂದ ಆಗಸ್ಟ್ ೩ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ತರೀಕೆರೆ ಉಪವಿಭಾಗಾಧಿಕಾರಿಗಳಾದ ಎನ್.ವಿ.ನಟೇಶ್ ಅವರು ಆದೇಶ ಹೊರಡಿಸಿದ್ದಾರೆ.

ಅಯ್ಯನಕೆರೆಯಿಂದ ಕೋಡಿ ಬಿದ್ದ ನೀರು ವೇದಾವತಿ ಹಳ್ಳದ ಮೂಲಕ ಕಡೂರು, ಯಗಟಿ ಮಾರ್ಗವಾಗಿ ಚಿತ್ರದುರ್ಗ ತಾಲ್ಲೂಕಿನ ಮಾರಿಕಣಿವೆಗೆ ಹರಿಯುತ್ತದೆ. ಹೀಗೆ ಹರಿಯುವ ನೀರನ್ನು ಅಗ್ರಹಾರ ಗ್ರಾಮದ ಬಳಿ ಇರುವ ಚೆಕ್‌ಡ್ಯಾಂ ಮೇಲ್ಭಾಗದಲ್ಲಿ ಸುಮಾರು ೫ ಮೀಟರ್ ಎತ್ತರದಲ್ಲಿ ಟ್ಯಾಂಕ್ ನಿರ್ಮಿಸಿ ಈ ಟ್ಯಾಂಕ್‌ಗೆ ಕೋಡಿ ಬಿದ್ದ ನೀರು ಸಂಗ್ರಹಿಸಿ ಪೈಪ್‌ಲೈನ್ ಮೂಲಕ ನಾಗೇನಹಳ್ಳಿ ಗ್ರಾಮದ ಕಟ್ಟೆ ಹಾಗೂ ಹುಲಿಕೆರೆ ಗ್ರಾಮದ ಕಟ್ಟೆ ಹಾಗೂ ಹುಲಿಕೆರೆಗೆ ಸಮೀಪವಿರುವ ಬೆರಟಿಕೆರೆಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ೨೦೨೩ರ ಫೆಬ್ರವರಿಯಲ್ಲಿ ಶಂಕುಸ್ಥಾಪನೆ ನಡೆದಿತ್ತು. ಇತ್ತೀಚೆಗೆ ಕಾಮಗಾರಿ ಆರಂಭಗೊಂಡಿದ್ದು, ವೇದಾವತಿ ಹಳ್ಳ ಹರಿಯುವ ಕೆಳಭಾಗದ ಗ್ರಾಮಗಳ ರೈತರು ತಡೆಯೊಡ್ಡಿದ್ದರು.

ವೇದಾವತಿ ಹಳ್ಳ ಹರಿಯುವ ಕೆಳಭಾಗದ ಗ್ರಾಮಗಳ ಗುಬ್ಬಿಹಳ್ಳಿ, ಜಿಗಣೆಹಳ್ಳಿ, ಕುರುಬಗೆರೆ, ದೊಡ್ಡಪಟ್ಟಣಗೆರೆ, ದೊಂಬರಹಳ್ಳಿ, ಚನ್ನಾಪುರ, ಬಂಡಿಕೊಪ್ಪಲು, ಕಡೂರುಹಳ್ಳಿ ಮತ್ತಿತರ ಗ್ರಾಮಗಳ ರೈತರು ಈ ಕಾಮಗಾರಿಗೆ ವಿರೋಧ ವ್ಯಕ್ತಪಡಿಸಿದ್ದರೆ, ಹುಲಿಕೆರೆ ನಾಗೇನಹಳ್ಳಿ, ಕಂಚುಗಾರನಹಳ್ಳಿ, ಮಡಿಕೆಹೊಸಳ್ಳಿ ಸುತ್ತಮುತ್ತಲ ಗ್ರಾಮಗಳ ರೈತರು ಕಾಮಗಾರಿಯ ಪರವಾಗಿದ್ದಾರೆ.

ಜುಲೈ ೧೯ ರಂದು ಉಭಯ ಕಡೆಯವರು ಅಗ್ರಹಾರ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಉಭಯ ಬಣದ ನಡುವೆ ಮಾತಿನ ಚಕಮಕಿ ನಡೆದಿದ್ದು, ಬಿಗಿ ಪೊಲೀಸ್ ರಕ್ಷಣೆ ಒದಗಿಸಿದ್ದರಿಂದ ಯಾವುದೇ ಅಹಿತಕರ ಘಟನೆಗೆ ಆಸ್ಪದವಾಗಿರಲಿಲ್ಲ. ಆದರೂ ಉಭಯ ಕಡೆಯ ನಡುವೆ ಯಾವುದೇ ಅಹಿತಕರ ಘಟನೆಗಳ ಸಂಭವಿಸಬಾರದೆನ್ನುವ ದೃಷ್ಟಿಯಿಂದ ಇದೀಗ ನಿಷೇಧಾಜ್ಞೆ ಹೊರಡಿಸಿರುವುದಾಗಿ ಅವರು ತಿಳಿಸಿದ್ದಾರೆ.

Prohibitory order imposed near Agrahara in Sakharayapattana

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...