Home namma chikmagalur ರಾಜ್ಯದ ಕಾಂಗ್ರೆಸ್ ವರಿಷ್ಟ ನಾಯಕರ ಅವಹೇಳನ ಖಂಡಿಸಿ ಪ್ರತಿಭಟನೆ
namma chikmagalurchikamagalurHomeLatest News

ರಾಜ್ಯದ ಕಾಂಗ್ರೆಸ್ ವರಿಷ್ಟ ನಾಯಕರ ಅವಹೇಳನ ಖಂಡಿಸಿ ಪ್ರತಿಭಟನೆ

Share
????????????????????????????????????
Share

ಚಿಕ್ಕಮಗಳೂರು:  ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹಸಚಿವ ರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ಬಿಜೆಪಿ ಕಾರ್ಯಕರ್ತರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂ ದು ಆಗ್ರಹಿಸಿ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭ ಟನೆ ನಡೆಸಿದರು.

ಈ ವೇಳೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಲ್.ಮೂರ್ತಿ ಮಾತನಾಡಿ ರಾಷ್ಟ್ರದ ಪ್ರಜಾತಂತ್ರವು ಮೋದಿ ಆಡಳಿತದಲ್ಲಿ ಅಪಾಯದ ಸ್ಥಿತಿಯಲ್ಲಿದೆ. ಅಧಿಕಾರಕ್ಕಾಗಿ ಬಿಜೆಪಿ, ಸಂಘ-ಪರಿವಾರದ ಕಾರ್ಯಕರ್ತ ರು ಎಲ್ಲಾ ಮಟ್ಟಕ್ಕೂ ಇಳಿಯುತ್ತಿದೆ. ಅಲ್ಲದೇ ವಿಶ್ವ ಬ್ಯಾಂಕ್‌ನಲ್ಲಿ ಕೇಂದ್ರ ಸರ್ಕಾರ ಸಾಲ ಪಡೆದು, ಬಿಹಾರ ದಲ್ಲಿ ಹಂಚಿಕೆಗೊಳಿಸಿ ಚುನಾವಣೆ ಎದುರಿಸಿದೆ ಎಂದು ಆರೋಪಿಸಿದರು.

ಕ್ಷೇತ್ರದ ಮಾಜಿ ಶಾಸಕ ಸಿ.ಟಿ.ರವಿ, ಸಿದ್ದರಾಮಯ್ಯ ಬಗ್ಗೆ ಪದೇ ಪದೇ ಅವಮಾನಿಸಿದ ಕಾರಣ ಚಿಕ್ಕಮ ಗಳೂರು ಸೇರಿದಂತೆ ಪ್ರತಿ ತಾಲ್ಲೂಕಿನಲ್ಲಿ ಬಿಜೆಪಿ ದೂಳಿಪಟವಾಗಿದೆ. ಅವರದೇ ಪಕ್ಷದ ಮಾಜಿ ಮುಖ್ಯಮಂ ತ್ರಿ ಲೈಂಗಿಕ ಕಿರುಕುಳ, ಚಿತ್ರತಾರೆ ಕರೆದೊಯ್ದ ಪ್ರಕರಣ ಹಾಗೂ ೧೫ಕ್ಕೂ ಮಂದಿ ಮುಂಬೈನಲ್ಲಿ ಅಶ್ಲೀಲ ವೀಡಿ ಯೋ ನಡೆಸಿದವರ ವಿರುದ್ಧ ಮಾತನಾಡುತ್ತಿಲ್ಲವೆಕೇ ಎಂದು ಪ್ರಶ್ನಿಸಿದರು.

ದೆಹಲಿ ಕೆಂಪುಕೋಟೆಯಲ್ಲಿ ಬಾಂಬ್ ಸ್ಪೋಟಿಸಿ ಕೆಲವು ಇಸ್ಲಾಂಕರಣಕ್ಕೆ ಭಯೋತ್ಪಾದಕರು ಮುಂದಾ ದರೆ, ರಾಷ್ಟ್ರದಲ್ಲಿ ಬಿಜೆಪಿ, ಆರ್‌ಎಸ್‌ಎಸ್ ಸಂಘಟನೆಗಳು ಮನಬಂದಂತೆ ಹೇಳಿಕೆ ನೀಡುವ ಮೂಲಕ ಹಿಂ ದೂ ಭಯೋತ್ಪಾದಕರಾಗಿ ಸನಾತನ ಧರ್ಮದ ಅಪಮಾನಿಸುವ ಜೊತೆಗೆ ಧರ್ಮದ ಅದೋಗತಿಗೆ ಕಾರಣೀ ಭೂತರಾಗಿದ್ದಾರೆ ಎಂದು ಹೇಳಿದರು.

ಇತ್ತೀಚೆಗೆ ಕ್ಷೇತ್ರದ ಮಾಜಿ ಶಾಸಕರು ಗೋಮಾಂಸ ಜಿಲ್ಲೆಯಲ್ಲಿ ವಿಪರೀತವಾಗಿದೆ ಎಂದು ಪ್ರತಿಭಟಿಸು ತ್ತಾರೆ. ಕಳೆದ ಎರಡು ದಶಕಗಳೀಂದ ಶಾಸಕರಾಗಿದ್ದ ಸಿ.ಟಿ.ರವಿ ತಮ್ಮ ಅವಧಿಯಲ್ಲಿ ಗೋಮಾಂಸ ನಿಯಂ ತ್ರಣಕ್ಕೆ ತರದೇ ಕಮೀಷನ್ ಪಡೆಯುತ್ತಿರೇ ಎಂದು ಪ್ರಶ್ನಿಸಿದ ಅವರು ಕೇವಲ ರಾಜಕೀಯ ಲಾಭಕ್ಕಾಗಿ ಇನ್ನೊಬ್ಬರ ಮೇಲ ಗೂಬೆ ಕೂರಿಸುವುದು ಸರಿಯಲ್ಲ ಎಂದು ದೂರಿದರು.

ಕೆಪಿಸಿಸಿ ವಕ್ತಾರ ಹೆಚ್.ಹೆಚ್.ದೇವರಾಜ್ ಮಾತನಾಡಿ ಆರ್‌ಎಸ್‌ಎಸ್ ದೇಶಭಕ್ತರು, ಸಂವಿಧಾನ ಸಂ ರಕ್ಷಕರು ಎಂಬುದನ್ನು ಮರೆತು. ಬಾಯಿಗೆ ಬಂದಂತೆ ಹೇಳಿಕೆ ನೀಡುವ ಹೀನಾಯ ಸಂಸ್ಕೃತಿ ಸಂಘ-ಪರಿ ವಾರದಲ್ಲಿದೆ. ಗೃಹ ಸಚಿವರ ವೈಯಕ್ತಿಕ ಕುಟುಂಬದ ಬಗ್ಗೆ ಪರಿವಾರದ ಕಾರ್ಯಕರ್ತನ ಹೇಳಿಕೆಗೆ ಪೊಲೀ ಸರು ಬಂಧಿಸಿ ಕಾರಾಗೃಹ ಅತಿಥಿ ಮಾಡಿರುವುದು ಒಳ್ಳೆಯ ಕೆಲಸ ಎಂದರು.

ಸಿದ್ದರಾಮಯ್ಯ ಬಗ್ಗೆ ಸಿದ್ದರಾಮುಲ್ಲಾ ಖಾನ್ ಎಂದ ವ್ಯಕ್ತಿಯನ್ನು ಮನೆಗೆ ಕಳಿಸುವ ಕೆಲಸ ಕಾಂಗ್ರೆಸ್ ಮಾಡಿದೆ. ಬಿಜೆಪಿ ವಿ.ಪಕ್ಷದ ನಾಯಕ ಈಚೆಗೆ ಹೇಳಿಕೆ ನೀಡಿ ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಇಲ್ಲದಿದ್ದರೆ ಪಕ್ಷವು ನಶಿಸಲಿದೆ ಎಂಬ ಆಧಾರವಿಲ್ಲದೇ ಹೇಳಿಕೆ ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಹೇಳಿ ದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ ರಾಜ್ಯ ಕಾಂಗ್ರೆಸ್ ವರಿಷ್ಟರ ನಾಯಕರ ಬಗ್ಗೆ ಆವಾಚ್ಯ ಶಬ್ದಗಳ ಬಳಸಿ ನಿಂದಿಸಿರುವ ಗೂಂಡಾಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಸಂ ಸ್ಕೃತಿ, ಸಂಸ್ಕಾರ ಇಲ್ಲದ ಬಿಜೆಪಿ ಮುಖಂಡರು ರಾಜ್ಯ ಗೃಹಸಚಿವ ಪರಮೇಶ್ವರ್ ಹಾಗೂ ಮಕ್ಕಳ ಬಗ್ಗೆ ಮಾತ ನಾಡುವ ನೈತಿಕ ಯೋಗ್ಯತೆಯಿಲ್ಲ ಎಂದು ದೂರಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿ. ವಿರುದ್ಧ ಹಿಂಬದಿಯಲ್ಲಿ ನಿಂದಿಸುವ ಮುಖಂಡರುಗಳು, ನೇರವಾಗಿ ಡಿ.ಕೆ.ಶಿ. ಎದುರು ಹೇಳುವ ಸಾಮರ್ಥ್ಯವಿಲ್ಲ. ಮೂರ್ಖತನವನ್ನು ಬಿಟ್ಟು ಬಿಜೆಪಿ ಕಾರ್ಯಕರ್ತರು ಎಚ್ಚರಿಕೆ ವಹಿಸಬೇಕು. ಮುಂದೆ ಈ ರೀತಿ ಅವಾಚ್ಯ ಶಬ್ದಗಳ ಬಳಸಿದರೆ ಜಿಲ್ಲಾ ಬಿಜೆಪಿ ನಾಯಕರು ಮತ್ತು ಕಾರ್ಯ ಕರ್ತರ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಸಿದರು.

ಜಿ.ಪಂ. ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಮಾತನಾಡಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ದು ವಾರ್ತನೆ ನಡೆಯಿಂದ ಜನತೆ ಸೋಲುಣಿಸಿ, ಕಾಂಗ್ರೆಸ್ ಜೈಕಾರ ಹಾಕಿದರೂ, ಇನ್ನೂ ಬುದ್ದಿ ಹೀನರಾಗಿ ವರ್ತಿಸುತ್ತಿದ್ದಾರೆ. ಅಲ್ಲದೇ ಕಾಂಗ್ರೆಸ್ ವರಿಷ್ಟರ ನಾಯಕರನ್ನು ಅಪಮಾನಿಸುವ ಹೇಳಿಕೆ ಎಂದಿಗೂ ರಾಜ್ಯದ ಜನತೆ ಸಹಿಸುವುದಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಸದಸ್ಯ ಎಂ.ಸಿ.ಶಿವಾನಂದಸ್ವಾಮಿ, ತಾಲ್ಲೂಕು ಅಧ್ಯಕ್ಷ ಮಲ್ಲೇಶ್, ಸಿಡಿಎ ಅಧ್ಯಕ್ಷ ಮೊಹಮ್ಮದ್ ನಯಾಜ್, ಕೆಪಿಸಿಸಿ ವಕ್ತಾರ ಅನಂತು, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಹಮ್ಮದ್ ಹನೀಫ್, ತಾಲ್ಲೂಕು ಅಧ್ಯಕ್ಷ ಪ್ರವೀಣ್ ಬೆಟ್ಟಗೆರೆ, ನಗರಸಭಾ ಸದಸ್ಯರಾದ ಖಲಂಧರ್, ಜಾವೀದ್, ಶಾದಂ ಆಲಂ ಖಾನ್, ಮುಖಂಡರುಗಳಾದ ಕೆ.ವಿ.ಮಂಜುನಾಥ್, ಹಿರೇಗೌಜ ಶಿವು, ಪ್ರಸಾದ್ ಅಮೀನ್, ಬಸವರಾಜ್, ಪ್ರಕಾಶ್ ರೈ, ಜಗದೀಶ್ ಮತ್ತಿತರರು ಹಾಜರಿದ್ದರು.

Protest against contempt of senior Congress leaders in the state

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...