Home Latest News ಕಾಡಾನೆ ವಿರುದ್ಧ ಸಿಡಿದೆದ್ದ ರೈತ ಸಂಘ : ಡಿಎಫ್ಓ ಕಚೇರಿಗೆ ಮುತ್ತಿಗೆ
Latest News

ಕಾಡಾನೆ ವಿರುದ್ಧ ಸಿಡಿದೆದ್ದ ರೈತ ಸಂಘ : ಡಿಎಫ್ಓ ಕಚೇರಿಗೆ ಮುತ್ತಿಗೆ

Share
Share

ಚಿಕ್ಕಮಗಳೂರು : ಕಾಡಾನೆ ಬೀಟಮ್ಮ ಗ್ಯಾಂಗ್ ಸ್ಥಳಾಂತರಕ್ಕೆ ಒತ್ತಾಯಿಸಿ ಅರಣ್ಯ ಇಲಾಖೆಯ ಡಿಎಫ್ ಓ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ರೈತ ಸಂಘ ಇಂದು ಪ್ರತಿಭಟನೆ ನಡೆಸಿತು. ಇದಕ್ಕೂ ಮೊದಲು ನಗರದ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತೆಡೆ ನಡೆಸಿದರು.

ನಿರಂತರ ಆನೆ ಹಾವಳಿಗೆ ಕಂಗೆಟ್ಟ ಮಲೆನಾಡಿಗರ ಆಕ್ರೋಶ ಇಂದು ಕಟ್ಟೆ ಹೊಡೆದಿತ್ತು, ಕರ್ನಾಟಕ ರೈತ ಸಂಘ ಇಂದು ಬೀದಿಗಿಳಿದು ಚಳುವಳಿ ನಡೆಸಿದ್ದು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಾನವ ಸರಪಳಿ ನಡೆಸಿ ಅರಣ್ಯ ಇಲಾಖೆ ವಿರುದ್ಧ ಸಿಡಿದೆದ್ದಿದ್ದರು ನಂತರ ಅರಣ್ಯ ಇಲಾಖೆಗೆ ಮುತ್ತಿಗೆ ಹಾಕಲು ಮುಂದಾದ ರೈತರು ಡಿಎಫ್ಓ ಕಚೇರಿಗೆ ತೆರಳಿದರು.
ಚಿಕ್ಕಮಗಳೂರು ತಾಲೂಕಿನ ಮಲೆನಾಡು ಭಾಗದ ರೈತರಿಗೆ ಕಳೆದ ತಿಂಗಳಿನಿಂದ ಕಂಗಾಲಾಗಿದ್ದಾರೆ

26 ಆನೆಗಳ ಹಾವಳಿಯಿಂದ ಹೈರಾಣಾಗಿರೋ ಮಲೆನಾಡಿಗರಿಗೆ ಅಡಿಕೆ, ಕಾಫಿ-ಮೆಣಸು, ಬಾಳೆ-ಭತ್ತ ಯಾವ ಬೆಳೆಯನ್ನೂ ಬಿಡದೆ ಆನೆಗಳ ಹಿಂಡು ನಾಶಪಡಿಸುತ್ತಿವೆ
20 ದಿನದಲ್ಲಿ 30 ಲಕ್ಷಕ್ಕೂ ಅಧಿಕ ನಾನಾ ಬೆಳೆಗಳನ್ನು ನಾಶಪಡಿಸಿ ಇನ್ನೂ ಅಲ್ಲಿಯೇ ಬೀಡು ಬಿಟ್ಟಿರುವ ಬೀಟಮ್ಮ ಗ್ಯಾಂಗ್ ಕಾಫಿ ಗಿಡಗಳನ್ನ ಬುಡಸಮೇತ ಕಿತ್ತು ಹಾಕುತ್ತಿವೆ.
ಚಿಕ್ಕಮಗಳೂರು ನಗರದ ಸುತ್ತಳತೆಯಲ್ಲಿರೋ ಕಾಡಾನೆಗಳ ಹಿಂಡು ಇನ್ನೂ ಇದ್ದು ಕೂಡಲೇ ಆನೆ ಹಾವಳಿಗೆ ಬ್ರೇಕ್ ಹಾಕಬೇಕೆಂದು ರೈತರು ಆಗ್ರಹಿಸಿದ್ದಾರೆ. ಪ್ರತಿಭಟನೆ ನಂತರ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ ಸರ್ಕಾರ ಬೆಳೆಹಾನಿಗೆ ದಯಾಪರಿಹಾರ ಕೊಡ್ತೀವಿ ಅನ್ನುತ್ತೆ, 1 ಲಕ್ಷ ನಷ್ಟವಾಗಿದ್ರೆ ಕೇವಲ 5 ಸಾವಿರ ಕೊಟ್ರೆ ಆನೆ ಬಾಯಿಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗುತ್ತೆ. ವೈಜ್ಞಾನಿಕ ಪರಿಹಾರ ನೀಡಬೇಕು. ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕಬೇಕು ಎಂದು ಒತ್ತಾಯಿಸಿದರು.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...