Home namma chikmagalur chikamagalur ಸಿಎನ್‌ಜಿ ಗ್ಯಾಸ್ ಸ್ಟೇಷನ್‌ಗೆ ಅನುಮತಿ ವಿರೋಧಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ಸಿಎನ್‌ಜಿ ಗ್ಯಾಸ್ ಸ್ಟೇಷನ್‌ಗೆ ಅನುಮತಿ ವಿರೋಧಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ನಗರ ಹೊರವಲಯದ ಗವನಹಳ್ಳಿ ಬಳಿ ನಿರ್ಮಿಸುತ್ತಿರುವ ಸಿಎನ್‌ಜಿ ಗ್ಯಾಸ್ ಸ್ಟೇಷನ್‌ಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಗ್ಯಾಸ್ ಸ್ಟೇಷನ್ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿದ ಹಲವಾರು ಬಿಜೆಪಿ ಮುಖಂಡರು, ಸ್ಥಳೀಯ ನಿವಾಸಿಗಳು ಗ್ಯಾಸ್‌ಬಂಕ್ ಬೇಡ ಎಂಬ ಫ್ಲೆಕ್ಸ್ ಪ್ರದರ್ಶಿಸಿದರು. ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಘೋಷಣೆ ಕೂಗಿದರು.

ಸ್ಥಳೀಯ ನಿವಾಸಿ ಕೇಶವ್ ಈ ವೇಳೆ ಮಾತನಾಡಿ, ಗ್ಯಾಸ್ ಸ್ಟೇಷನ್ ನಿರ್ಮಿಸುತ್ತಿರುವ ಪಕ್ಕದಲ್ಲಿ ನನ್ನ ಮನೆ, ಸುತ್ತಮುತ್ತ ಸಾರ್ವಜನಿಕರ ಮನೆಗಳಿವೆ. ಹಿಂಭಾಗದಲ್ಲಿ ಎಸ್ಸಿ ಸ್ಮಶಾನವಿದೆ. ಪಕ್ಕದಲ್ಲಿ ಸಾಮಿಲ್ ಇದ್ದು ಒಣಕಟ್ಟಿಗೆಗಳ ರಾಶಿಯೇ ಇದೆ. ಬೆಂಕಿ ಅವಘಡ ಉಂಟಾದಲ್ಲಿ ಇಡೀ ಊರೇ ಭಸ್ಮವಾಗುವ ಅಪಾಯವಿದೆ ಎಂದು ದೂರಿದರು.

ಸಿಎನ್‌ಜಿ ಕಂಪನಿಯವರು ಗ್ಯಾಸ್ ಬಂಕ್ ನಿರ್ಮಿಸುವುದರ ವಿರುದ್ಧ ಜಿಲ್ಲಾಧಿಕಾರಿಗಳಿಗೆ ತಕರಾರು ಅರ್ಜಿಸಲ್ಲಿಸಿದ್ದೆ, ಅವರು ಒಂದು ವರ್ಷ ಕಳೆದರೂ ನಮಗೆ ಸಮಜಾಯಿಷಿ ನೀಡಲಿಲ್ಲ. ಇದೀಗ ಮಾಲೀಕರಿಗೆ ಗ್ಯಾಸ್ ಬಂಕ್ ನಿರ್ಮಿಸಲು ಅನುಮತಿ ನೀಡಿದ್ದಾರೆ, ಇದು ಕಾನೂನುಬಾಹಿರ ಎಂದು ಆರೋಪಿಸಿದರು.

ಪಕ್ಕದಲ್ಲಿ ಯೋಗ ತರಗತಿ ಕೊಠಡಿ, ಸ್ಮಶಾನ, ಸಾಮಿಲ್ ಸಾರ್ವಜನಿಕ ಹಿತದೃಷ್ಟಿ ಹಿನ್ನೆಲೆಯಲ್ಲಿ ಗ್ಯಾಸ್ ಸ್ಟೇಷನ್‌ಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿದರು.

ಬಿಜೆಪಿ ಮುಖಂಡ ಕುರುವಂಗಿ ವೆಂಕಟೇಶ್ ಮಾತನಾಡಿ, ಗ್ಯಾಸ್ ಸ್ಟೇಷನ್ ನಿರ್ಮಿಸುತ್ತಿರುವ ಹಿಂಭಾಗದಲ್ಲಿ ಪರಿಶಿಷ್ಟ ಸಮುದಾಯದ ಸ್ಮಶಾನವಿದೆ. ಅಲ್ಲಿ ಕಳೆಬರ ದಹಿಸುವಾಗ ಬೆಂಕಿ ಅವಘಡ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನಾನುಕೂಲವಾಗಿರುವ ಗ್ಯಾಸ್ ಸ್ಟೇಷನ್‌ಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶ್ರೀನಿವಾಸ್, ಕವಿತಾಶೇಖರ್, ಮುತ್ತಯ್ಯ, ಸಂತೋಷ್ ಕೊಟ್ಯಾನ್, ಆಲ್ದೂರು ಶಶಿ, ಅಮೃತೇಶ ಚನ್ನಕೇಶವ. ಶ್ಯಾಮ್ ವಿ ಗೌಡ, ರೂಪಕುಮಾರ್, ರವಿಕುಮಾರ್ ಮತ್ತಿತರಿದ್ದರು.

Protest against permission for CN gas station

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...