Home namma chikmagalur chikamagalur ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ
chikamagalurHomeLatest Newsnamma chikmagalur

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ

Share
Share

ಚಿಕ್ಕಮಗಳೂರು: ಹಳ್ಳಿಗಳ ಜನರ ಜೀವನ ಮಟ್ಟ ಸುಧಾರಣೆಯಾಗಬೇಕು. ಸ್ಥಳೀಯವಾಗಿ ಎಲ್ಲಾ ಕಾಲದಲ್ಲೂ ಅವರಿಗೆ ಕೂಲಿ ಕೆಲಸ ಸಿಗಬೇಕೆಂಬ ಉದ್ದೇಶದಿಂದ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಮನರೇಗಾ ಯೋಜನೆಗೆ ತಿದ್ದುಪಡಿ ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಕೂಲಿ ಕಾರ್ಮಿಕರಿಗೆ, ರೈತರಿಗೆ ಅನ್ಯಾಯ ಮಾಡಲು ಹೊರಟಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ರದ್ದುಪಡಿಸಿ ಗ್ರಾಮ ಪಂಚಾಯಿತಿ ಅಧಿಕಾರವನ್ನು ಮೊಟಕುಗೊಳಿಸಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಮನರೇಗಾ ಯೋಜನೆಯಿಂದ ಗ್ರಾಮ ಪಂಚಾಯಿತಿಗಳು, ಗ್ರಾಮಗಳು ಅಭಿವೃದ್ಧಿ ಹೊಂದಿವೆ. ಪ್ರಧಾನಮಂತ್ರಿಗಳು ಬಿಡುಗಡೆ ಮಾಡುವ ಹಣ ನೇರವಾಗಿ ಗ್ರಾಮ ಪಂಚಾಯಿತಿಗಳಿಗೆ ಬರುತ್ತಿತ್ತು. ವಿಬಿ ಜಿ ರಾಮ್ ಜಿ ಯೋಜನೆಯಿಂದ ಗ್ರಾಮ ಪಂಚಾಯಿತಿಗಳು ತಮ್ಮ ಅಧಿಕಾರ ಕಳೆದುಕೊಳ್ಳಲಿವೆ ಎಂದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿರುವ ಯೋಜನೆಗಳ ಹೆಸರು ಬದಲಾವಣೆ ಮಾಡುವುದೇ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಯಾಗಿದೆ. ಹೀಗೆ ಸಾಕಷ್ಟು ಬದಲಾವಣೆಗಳನ್ನು ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಗ್ರಾಮೀಣ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ತಿಳಿಸಿದರು.

ಮಹಾತ್ಮಗಾಂಧಿಯವರ ಕನಸು ನನಸು ಮಾಡಲು ಕಾಂಗ್ರೆಸ್ ಮುಂದಾಗಿದ್ದರೇ, ಕೇಂದ್ರ ಬಿಜೆಪಿ ಸರ್ಕಾರ ಮಹಾತ್ಮಗಾಂಧಿ ಅವರ ಕನಸಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿಗೆ ಜನಸಾಮಾನ್ಯರು, ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಹೇಳಿದರು.

ಕೆಪಿಸಿಸಿ ವಕ್ತಾರ ಹೆಚ್.ಹೆಚ್.ದೇವರಾಜ್ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ದುಷ್ಟ ಶಕ್ತಿಗಳು ಒಂದಾಗಿದ್ದು, ಅವುಗಳನ್ನು ಮಟ್ಟ ಹಾಕಬೇಕಾದರೆ ಕಾಂಗ್ರೆಸ್ ಕಾರ್ಯಕರ್ತರು ಒಂದಾಗಬೇಕೆಂದು ಸಲಹೆ ನೀಡಿದರು.

ಕಾಂಗ್ರೆಸ್ ಆಡಳಿತದಲ್ಲಿ ಉತ್ತಮವಾದ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಆ ಯೋಜನೆಯನ್ನು ಮೊಟಕುಗೊಳಿಸುವ ಮೂಲಕ ಗ್ರಾಮೀಣ ಭಾಗದ ಜನರ ಕೆಲಸವನ್ನು ಕೇಂದ್ರ ಬಿಜೆಪಿ ಸರ್ಕಾರ ಕಿತ್ತುಕೊಳ್ಳಲು ಹೊರಟಿದೆ ಎಂದು ತಿಳಿಸಿದರು.

ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ಮೂಲಕ ಪಕ್ಷವನ್ನು ಸದೃಡಗೊಳಿಸಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಮುಂದಾಗುವಂತೆ ಮನವಿ ಮಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ ಮಾತನಾಡಿ, ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡಲು ಹೊರಟಿದೆ. ಹೆಸರು ಬದಲಾಯಿಸುವುದೇ ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಎಂದು ವ್ಯಂಗ್ಯವಾಡಿದರು.

ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆಯನ್ನು ಮಾಡುವ ಮೂಲಕ ವಿಬಿ ಜಿ ರಾಮ್ ಜಿ ವಿರುದ್ಧ ಹೋರಾಟ ಮಾಡಲು ಎಲ್ಲರೂ ಮುಂದಾಗಬೇಕು. ಗ್ರಾಮೀಣ ಜನರಿಗೆ ಜನ ಜಾಗೃತಿ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮಾಡಬೇಕು ಎಂದರು.

ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹಮದ್ ನಯಾಜ್, ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕ ಜಿಲ್ಲಾಧ್ಯಕ್ಷ ಮಲ್ಲೇಶಸ್ವಾಮಿ ಮಾತನಾಡಿದರು. ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಕ.ರಾ.ಕೃ.ಉ.ಸಂ.ರಪ್ತು ನಿಗಮ ಅಧ್ಯಕ್ಷ ಬಿ.ಹೆಚ್.ಹರೀಶ್, ನಗರಸಭಾ ಸದಸ್ಯರಾದ ಜಾವಿದ್, ಪರಮೇಶ್ ರಾಜ್ ಅರಸ್, ಶಾದಬ್ ಆಲಂ ಖಾನ್, ಮಂಜುಳ ಲಕ್ಷ್ಮಣ್, ಜಿಲ್ಲಾ ವಕ್ತಾರ ರೂಬೆನ್ ಮೊಸಸ್, ತಾಲ್ಲೂಕು ಪ್ರಚಾರ ಸಮಿತಿ ಅಧ್ಯಕ್ಷ ಬೆಟ್ಟಗೆರೆ ಪ್ರವೀಣ್, ನಗರಾಧ್ಯಕ್ಷ ತನೋಜ್ ಕುಮಾರ್, ಮುಖಂಡರಾದ ಅತೀಕ್ ಖೈಸರ್, ಜೇಮ್ಸ್ ಡಿಸೋಜಾ, ಕಾಲುಬಾ, ಹೆಚ್.ಸಿ.ಗಂಗಾಧರ್, ಕೆ.ಭರತ್, ಆಶ್ರಯ ಸಮಿತಿ, ಸಿಡಿಎ, ನಗರಸಭೆ ಸದಸ್ಯರು, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Protest against the central BJP government

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...