Home namma chikmagalur chikamagalur ಸರ್ಫೇಸಿ ಕಾಯ್ದೆ ವಿರೋಧಿಸಿ ಏ. 22ರಂದು ಪ್ರತಿಭಟನೆ
chikamagalurHomeLatest Newsnamma chikmagalur

ಸರ್ಫೇಸಿ ಕಾಯ್ದೆ ವಿರೋಧಿಸಿ ಏ. 22ರಂದು ಪ್ರತಿಭಟನೆ

Share
Share

ಚಿಕ್ಕಮಗಳೂರು: ಸರ್ಫೇಸಿ ಕಾಯ್ದೆ ವಿರೋಧಿಸಿ ಏ. 22ರಂದು ಬೆಳಿಗ್ಗೆ 11ಗಂಟೆಗೆ ನಗರದ ಸಂಸತ್ ಸದಸ್ಯರ ಕಚೇರಿ ಮತ್ತು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಮಹೇಶ್ ತಿಳಿಸಿದರು.

ಜಿಲ್ಲಾ ಕಾಫಿ ಬೆಳೆಗಾರರ ಸಂಘ, ಜಿಲ್ಲಾ ಸಣ್ಣ ಬೆಳೆಗಾರರ ಸಂಘ, ಜಿಲ್ಲಾ ಬೆಳೆಗಾರರ ಹಿತ ರಕ್ಷಣಾ ಸಮಿತಿ ಸಹಯೋಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಾಫಿ ಬೆಳೆಗಾರರ ಸಾಲ ವಸೂಲಾತಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸರ್ಫೇಸಿ ಕಾಯ್ದೆಯು ಬೆಳೆಗಾರರ ಕೊರಳಿಗೆ ಉರುಳಾಗಿದೆ. ಈಗಾಗಲೇ ಬೆಳೆಗಾರರು ಅನೇಕ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿ ನರಳುತ್ತಿದ್ದಾರೆ. ರಸಗೊಬ್ಬರ, ಕ್ರಿಮಿನಾಶಕಗಳ ಬೆಲೆ ಏರಿಕೆ, ಕಾರ್ಮಿಕರ ಕೊರತೆ, ಪ್ರಕೃತಿ ವೈಪರೀತ್ಯಗಳ ಮಧ್ಯೆ ಸಿಲುಕಿ ಹೊರ ಬರಲಾಗದೆ ಬೆಳೆಗಾರರು ಕಂಗಾಲಾಗಿದ್ದಾರೆ ಎಂದರು.

ಮಾನವ ಮತ್ತು ಕಾಡು ಪ್ರಾಣಿಗಳ ಸಂಘರ್ಷ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಬೆಳೆ ಹಾನಿ ಜೀವ ಹಾನಿಯ ಪ್ರಮಾಣಗಳು ಏರಿಕೆಯಾಗುತ್ತಿವೆ. ಜೀವಹಾನಿ ಹಾಗೂ ಕಾಡುಪ್ರಾಣಿಗಳ ಹಾವಳಿ ತಡೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈವರೆಗೂ ಶಾಶ್ವತ ಪರಿಹಾರ ಕಂಡುಕೊಂಡಿಲ್ಲ ಎಂದು ದೂರಿದರು.

ಈ ಎಲ್ಲಾ ಸಮಸ್ಯೆಗಳ ನಡುವೆ ಸರ್ವೇಸಿ ಕಾಯ್ದೆ ಬಳಸಿಕೊಂಡು ಕಾಫಿ ತೋಟಗಳನ್ನು ಆನ್‌ಲೈನ್ ಮೂಲಕ ಹರಾಜು ಮಾಡುವ ಪ್ರಕ್ರಿಯೆಯನ್ನು ಬ್ಯಾಂಕ್‌ಗಳು ಮುಂದುವರೆಸಿವೆ ಎಂದರು.

ಜಿಲ್ಲೆಯಲ್ಲಿ ಏಳು ಬೆಳೆಗಾರರ ಕಾಫಿ ತೋಟಗಳನ್ನು ಆನ್‌ಲೈನ್ ಮೂಲಕ ಹರಾಜು ಮಾಡಲಾಗಿದೆ. ಹಲವರಿಗೆ ನೋಟಿಸ್ ನೀಡಲಾಗಿದೆ. ಕರ್ನಾಟಕ ಬೆಳೆಗಾರರ ಸಂಘಟನೆಗಳು ಈಗಾಗಲೇ ಮೂಡಿಗೆರೆ ಮತ್ತು ಮಂಗಳೂರು ಬ್ಯಾಂಕ್ ಕಚೇರಿಗಳ ಎದುರು ಧರಣಿ ನಡೆಸಿವೆ. ಆದರೂ ಬ್ಯಾಂಕುಗಳು ಬೆಳೆಗಾರರ ಮನವಿಗೆ ಮಣಿದಿಲ್ಲ. ಬೆಳೆಗಾರರ ಒಕ್ಕೂಟದ ಸದಸ್ಯರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೊಂದಿಗೆ ಹೋಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ್ದಾರೆ. ಬೆಳೆಗಾರರ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿದ್ದಾರೆ. ಆದರೂ ಕೇಂದ್ರ ಸರ್ಕಾರ ಜಾಣ ಮೌನ ವಹಿಸಿದೆ ಎಂದು ದೂರಿದರು.

ಆನ್‌ಲೈನ್‌ ಹರಾಜು ಪ್ರಕ್ರಿಯೆ ನಿಲ್ಲಿಸಬೇಕು, ಸರ್ಫೇಸಿ ಕಾಯ್ದೆಯಿಂದ ಕಾಫಿ ಬೆಳೆಯನ್ನು ಹೊರಗಿಡಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಗೌರವಾಧ್ಯಕ್ಷ ಎಂ.ಸಿ. ಬಸವರಾಜ್, ಜಿಲ್ಲಾ ಖಜಾಂಚಿ ಕುಮಾರಸ್ವಾಮಿ, ಮುಖಂಡರಾದ ಗುರುಶಾಂತಪ್ಪ, ಪ್ರದೀಪ್ ಭಾಗವಹಿಸಿ ದ್ದರು.

Protest against the SARFAESI Act on April 22

Share

Leave a comment

Leave a Reply

Your email address will not be published. Required fields are marked *

Don't Miss

ಕನ್ನಡದ ಸಂಯೋಜಕ ಪ್ರತಿಭೆ ತೇಜಸ್ವಿ

ಕೊಟ್ಟಿಗೆಹಾರ: ಪೋಟೋಗ್ರಾಫಿ, ಫಿಶಿಂಗ್, ಪೈಂಟಿಂಗ್, ಸಾಹಿತ್ಯ ಹೀಗೆ ನಾನಾ ಬಗೆಯ ಆಸಕ್ತಿ ಕುತೂಹಲಗಳಿದ್ದ ತೇಜಸ್ವಿ ಅವರು ಕನ್ನಡದ ಸಂಯೋಜಕ ಪ್ರತಿಭೆ ಎಂದು ವಿಮರ್ಶಕ, ಲೇಖಕ ಡಾ.ಎಚ್.ಎಸ್.ಸತ್ಯನಾರಾಯಣ ಹೇಳಿದರು. ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ...

ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮ ಯಶಸ್ಸಿಗೆ ಸೂಚನೆ

ಚಿಕ್ಕಮಗಳೂರು: ಮುಖ್ಯಮಂತ್ರಿಗಳು ಏಪ್ರಿಲ್ ೧೩ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಸವಲತ್ತುಗಳ ವಿತರಣೆ ಮಾಡಲಿದ್ದಾರೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ...

Related Articles

ಅಂಬೇಡ್ಕರ್ ಜಯಂತಿಗೆ ಅಡ್ಡಿ ಕ್ರಮಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ಚಿಕ್ಕಮಗಳೂರು: ಮರ್ಲೆಹೊಸಕೋಟೆಯಲ್ಲಿ ಕಂದಾಯ ಜಾಗದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲು ಮುಂದಾಗಿದ್ದಾಗ ಧ್ವಜಗಳನ್ನು ತೆರವುಗೊಳಿಸಿದ ಗ್ರಾಮಲೆಕ್ಕಿಗರು ಮತ್ತು...

ಜಮೀನಿನ ನಕಲಿ ದಾಖಲೆ ಸೃಷ್ಟಿಸಿ ವಂಚನೆ

ಚಿಕ್ಕಮಗಳೂರು: ಕಡೂರು ತಾಲೂಕು ಪಂಚನಹಳ್ಳಿ ಹೋಬಳಿ ಡಿ.ಹೊಸಹಳ್ಳಿ ಗ್ರಾಮದ ತಮ್ಮ ಪಿತ್ರಾರ್ಜಿತ ಆಸ್ತಿಗೆ ನಕಲಿ ದಾಖಲೆಯನ್ನು...

ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ 80 ರೈತರಿಗೆ ವಂಚನೆ

ಕಡೂರು : ಸರಕಾರದ ವಿವಿಧ ಇಲಾಖೆಗಳಡಿ ದೊರೆಯುವ ಸಬ್ಸಿಡಿ ಸವಲತ್ತುಗಳನ್ನು ಕೊಡಿಸುವುದಾಗಿ ನಂಬಿಸಿ ೮೦ ಜನ...

ನರ್ಸ್‌ನಿಂದ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ರೀಲ್ಸ್ ವೀಕ್ಷಣೆ

ಎನ್.ಆರ್.ಪುರ : ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರವೀಗ ರೀಲ್ಸ್ ಅಡ್ಡವಾಗಿ...