Home namma chikmagalur ಹುಣಸೆಮಕ್ಕಿ ಗ್ರಾಮದ ರಸ್ತೆಯಲ್ಲಿ ಭತ್ತನಾಟಿ ಮಾಡಿ ಪ್ರತಿಭಟನೆ
namma chikmagalurchikamagalurHomeLatest News

ಹುಣಸೆಮಕ್ಕಿ ಗ್ರಾಮದ ರಸ್ತೆಯಲ್ಲಿ ಭತ್ತನಾಟಿ ಮಾಡಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ವಸ್ತಾರೆ ಹೋಬಳಿಯ ಆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಮಕ್ಕಿ ಗ್ರಾಮಕ್ಕೆ ಸಂಪರ್ಕ ರಸ್ತೆ ಹಲವು ವ?ಗಳಿಂದ ದುರಸ್ತಿ ಕಾಣದೆ ಹದಗೆಟ್ಟಿದ್ದು, ಇದರಿಂದ ಗ್ರಾಮಸ್ಥರು ಬೇಸತ್ತು ರಸ್ತೆಯಲ್ಲಿ ಬತ್ತದ ನಾಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಈ ವೇಳೆ ಗ್ರಾಮಸ್ಥರು ಮಾತನಾಡಿ ಮಳೆಗಾಲದಲ್ಲಿ ಓಡಾಡಲು ತೀವ್ರ ತೊಂದರೆಯಾಗುತ್ತಿದೆ, ವಿದ್ಯಾ ರ್ಥಿಗಳು ಶಾಲೆಗೆ ತೆರಳಲು, ರೋಗಿಗಳು ಆಸ್ಪತ್ರೆಗೆ ತೆರಳಲು ಹರಸಾಹಸ ಪಡಬೇಕಿದೆ ಎಂದರು.

ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಕೂಡ ಯಾವುದೇ ಪ್ರಯೋಜನವಾಗಿಲ್ಲ ಉಡಾಫೆ ಉತ್ತರ ನೀಡುತ್ತಾರೆ, ಈವರೆಗೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀ ಲಿಸಿಲ್ಲ, ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ಸ್ಥಳಕ್ಕೆ ಭೇಟಿ ನೀ ಡಿ ಪರಿಶೀಲಿಸಿ ಗುಣಮಟ್ಟದ ರಸ್ತೆ ಕಾಮಗಾರಿ ಮಾಡಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಗ್ರಾಮದಲ್ಲಿ ಅನೇಕ ಕುಟುಂಬಗಳಿಗೆ ನಿವೇಶನವಿಲ್ಲ, ಹೀಗಾಗಿ ಗ್ರಾಮದ ಸ್ಥಳದಲ್ಲೇ ಲೇಔಟ್ ಮಾಡಿ ನಿವೇಶನ ರಹಿತರಿಗೆ ನಿವೇಶನ ಹಂಚಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ಪಿ ಡಿ ಓ ಅವರಿಗೆ ಮನವಿ ಸಲ್ಲಿಸಿದರು. ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಆದ? ಬೇಗ ಮನೆ ಕಟ್ಟಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ರಮೇಶ್, ಲೋಕೇಶ್, ರಾಜು, ಸಂಕೇತ್, ಕೆಂಚಯ್ಯ, ಚಂದ್ರಯ್ಯ, ಸೋಮಶೇಖರ್, ಶಂಕರ್, ಶಿವಣ್ಣ, ನವೀನ್, ಮನು, ಸುನಿಲ್, ಮಂಜುನಾಥ್, ರಘು, ಗಿರೀಶ್, ಚಂದ್ರ ಶೇಖರ್, ಸಂದೀಪ್, ಸಿದ್ದೇಶ್, ಪರಮೇಶ್, ಲೋಕಯ್ಯ, ಅಣ್ಣಪ್ಪ, ಮಂಜುನಾಥ್, ರವಿ, ಕಮಲ್, ರಮೇ ಶ್, ಪೂರ್ಣೇಶ್, ರೆಮತ್, ಜಯಪ್ಪ, ತಿಪ್ಪೇಶ್ ಉಪಸ್ಥಿತರಿದ್ದರು.

Protest by planting rice on the road in Hunasemakki village

Share

Leave a comment

Leave a Reply

Your email address will not be published. Required fields are marked *

Don't Miss

ಗಿರಿ ಪ್ರದೇಶದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ನೂತನ ಸಂಚಾರ ವ್ಯವಸ್ಥೆ

ಚಿಕ್ಕಮಗಳೂರು: : ಮುಳ್ಳಯ್ಯನಗಿರಿ ಭಾಗದಲ್ಲಿ ಇತ್ತೀಚೆಗೆ ವಾರಾಂತ್ಯದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಎರಡು ಸ್ಲಾಟ್‌ಗಳಲ್ಲಿ ಪ್ರತೀದಿನ ವಾಹನಗಳನ್ನು ಗಿರಿಭಾಗಕ್ಕೆ ಬಿಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು....

ಕಾವೇರುತ್ತಿದೆ ಅಜ್ಜಂಪುರ ಪಟ್ಟಣ ಪಂಚಾಯತಿ ಚುನಾವಣೆ

ಅಜ್ಜಂಪುರ: ಕಳೆದ ಏಳು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಬಣಗುಡುತ್ತಿದ್ದ ಪಟ್ಟಣ ಪಂಚಾಯತಿಗೆ ಆಗಷ್ಟ್ 17 ರಂದು ಚುನಾವಣೆ ದಿನಾಂಕ ನಿಗದಿಯಾಗಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜನತಾದಳದ ಮಧ್ಯೆ ಬಿರುಸಿನ...

Related Articles

ಮಕ್ಕಳ ಬಾಲ್ಯ ಸುರಕ್ಷತೆಗಾಗಿ ಭದ್ರ ಬಾಲ್ಯ ಯೋಜನೆ ಅನುಷ್ಠಾನ

ಚಿಕ್ಕಮಗಳೂರು: ಮಕ್ಕಳ ಬಾಲ್ಯವನ್ನು ಸುರಕ್ಷಿತಗೊಳಿಸುವ ಗುರಿ ಇರಿಸಿಕೊಂಡು ಜಿಲ್ಲೆಯಲ್ಲಿ ಭದ್ರ ಬಾಲ್ಯ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಎಲ್ಲಾ...

ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ವಿರುದ್ಧ ಸಮಾಜದಿಂದ ಪ್ರತಿಭಟನೆ

ಚಿಕ್ಕಮಗಳೂರು:  ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ನಿಗಧಿತ ದರಕ್ಕಿಂತ ಕಡಿಮೆ...

ಮಾದಕ ವಸ್ತು ವಿರೋಧಿ ಜಾಗೃತಿ ಸಮಿತಿ ರಚನೆ ಕಡ್ಡಾಯ 

ಚಿಕ್ಕಮಗಳೂರು:  ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವ ಮೂಲಕ ಮಾದಕ ವಸ್ತು...

ವೇದಾನದಿ ನೀರಿನ ಹಂಚಿಕೆಯಲ್ಲಿ ರೈತರು ಸಂಯಮ ಕಾಪಾಡಬೇಕು

ಚಿಕ್ಕಮಗಳೂರು: ವೇದಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರೈತರು ಸಂಯಮ ಕಾಪಾಡಬೇಕು. ಜೊತೆಗೆ ಕೆರೆ ತುಂಬಿಸುವ...