Home namma chikmagalur ಹುಣಸೆಮಕ್ಕಿ ಗ್ರಾಮದ ರಸ್ತೆಯಲ್ಲಿ ಭತ್ತನಾಟಿ ಮಾಡಿ ಪ್ರತಿಭಟನೆ
namma chikmagalurchikamagalurHomeLatest News

ಹುಣಸೆಮಕ್ಕಿ ಗ್ರಾಮದ ರಸ್ತೆಯಲ್ಲಿ ಭತ್ತನಾಟಿ ಮಾಡಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ವಸ್ತಾರೆ ಹೋಬಳಿಯ ಆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಮಕ್ಕಿ ಗ್ರಾಮಕ್ಕೆ ಸಂಪರ್ಕ ರಸ್ತೆ ಹಲವು ವ?ಗಳಿಂದ ದುರಸ್ತಿ ಕಾಣದೆ ಹದಗೆಟ್ಟಿದ್ದು, ಇದರಿಂದ ಗ್ರಾಮಸ್ಥರು ಬೇಸತ್ತು ರಸ್ತೆಯಲ್ಲಿ ಬತ್ತದ ನಾಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.

ಈ ವೇಳೆ ಗ್ರಾಮಸ್ಥರು ಮಾತನಾಡಿ ಮಳೆಗಾಲದಲ್ಲಿ ಓಡಾಡಲು ತೀವ್ರ ತೊಂದರೆಯಾಗುತ್ತಿದೆ, ವಿದ್ಯಾ ರ್ಥಿಗಳು ಶಾಲೆಗೆ ತೆರಳಲು, ರೋಗಿಗಳು ಆಸ್ಪತ್ರೆಗೆ ತೆರಳಲು ಹರಸಾಹಸ ಪಡಬೇಕಿದೆ ಎಂದರು.

ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರು ಕೂಡ ಯಾವುದೇ ಪ್ರಯೋಜನವಾಗಿಲ್ಲ ಉಡಾಫೆ ಉತ್ತರ ನೀಡುತ್ತಾರೆ, ಈವರೆಗೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀ ಲಿಸಿಲ್ಲ, ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತು ಸ್ಥಳಕ್ಕೆ ಭೇಟಿ ನೀ ಡಿ ಪರಿಶೀಲಿಸಿ ಗುಣಮಟ್ಟದ ರಸ್ತೆ ಕಾಮಗಾರಿ ಮಾಡಬೇಕು. ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಗ್ರಾಮದಲ್ಲಿ ಅನೇಕ ಕುಟುಂಬಗಳಿಗೆ ನಿವೇಶನವಿಲ್ಲ, ಹೀಗಾಗಿ ಗ್ರಾಮದ ಸ್ಥಳದಲ್ಲೇ ಲೇಔಟ್ ಮಾಡಿ ನಿವೇಶನ ರಹಿತರಿಗೆ ನಿವೇಶನ ಹಂಚಬೇಕು ಎಂದು ಒತ್ತಾಯಿಸಿ ಗ್ರಾಮ ಪಂಚಾಯಿತಿ ಪಿ ಡಿ ಓ ಅವರಿಗೆ ಮನವಿ ಸಲ್ಲಿಸಿದರು. ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆಗಳಿಗೆ ಆದ? ಬೇಗ ಮನೆ ಕಟ್ಟಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ರಮೇಶ್, ಲೋಕೇಶ್, ರಾಜು, ಸಂಕೇತ್, ಕೆಂಚಯ್ಯ, ಚಂದ್ರಯ್ಯ, ಸೋಮಶೇಖರ್, ಶಂಕರ್, ಶಿವಣ್ಣ, ನವೀನ್, ಮನು, ಸುನಿಲ್, ಮಂಜುನಾಥ್, ರಘು, ಗಿರೀಶ್, ಚಂದ್ರ ಶೇಖರ್, ಸಂದೀಪ್, ಸಿದ್ದೇಶ್, ಪರಮೇಶ್, ಲೋಕಯ್ಯ, ಅಣ್ಣಪ್ಪ, ಮಂಜುನಾಥ್, ರವಿ, ಕಮಲ್, ರಮೇ ಶ್, ಪೂರ್ಣೇಶ್, ರೆಮತ್, ಜಯಪ್ಪ, ತಿಪ್ಪೇಶ್ ಉಪಸ್ಥಿತರಿದ್ದರು.

Protest by planting rice on the road in Hunasemakki village

Share

Leave a comment

Leave a Reply

Your email address will not be published. Required fields are marked *

Don't Miss

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ

ಚಿಕ್ಕಮಗಳೂರು: ರಾಜ್ಯದ ಅತ್ಯುನ್ನತ ಶಿಖರವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ ಮಣ್ಣು, ಅದಿರು ಸಾಗಾಣೆ ನಡೆಯುತ್ತಿರುವ ಆರೋಪ ಕೇಳಿಬಂದಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯೇತರ...

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ

ಚಿಕ್ಕಮಗಳೂರು : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದಿಣ್ಣೆಕೆರೆ ಗ್ರಾಮದ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಕೂದುವಳ್ಳಿಯ ಲಿಟಲ್...

Related Articles

A.C.F ಕೆ.ಎಸ್.ಮೋಹನ್ ನಿವಾಸದ ಮೇಲೆ ಲೋಕಾಯುಕ್ತಾ ದಾಳಿ

  ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಅರಣ್ಯ ಅಧಿಕಾರಿ ಕೆ.ಎಸ್.ನಿವಾಸ ಮತ್ತು ಸಂಭಂದಿಸಿದ ಹಲವು...

ಸಿ.ಟಿ.ರವಿಗೆ ಶೋಷಿತ ವರ್ಗದ ಅಪ್ಪಂದಿರಿಂದ ತಕ್ಕ ಪಾಠ

ಚಿಕ್ಕಮಗಳೂರು : ಆರ್‌ಎಸ್‌ಎಸ್ ನೊಂದಣಿ ಮಾಡಿಸಲು ಅವನಪ್ಪನಿಂದಲೂ ಆಗಲಿಲ್ಲ ಎಂದು ಪ್ರಿಯಾಂಕ ಖರ್ಗೆ ಬಗ್ಗೆ ಹೇಳಿರುವ...

ವಿಳಾಸ ಕೇಳುವ ನೆಪದಲ್ಲಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ ಕಳವು

ಚಿಕ್ಕಮಗಳೂರು: ವಿಳಾಸ ಕೇಳುವ ನೆಪದಲ್ಲಿ ಗಮನ ಬೇರೆಡೆಗೆ ಸೆಳೆದು ಬರೋಬ್ಬರಿ ಎಂಟು ಲಕ್ಷ ರೂಪಾಯಿ ಹಣವಿದ್ದ...

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ತರಾತುರಿಯಲ್ಲಿ ಮನೆಗೆ ಬೀಗ ಹಾಕದೆ ಹೊರಟ ದಂಪತಿಯ ನಿರ್ಲಕ್ಷ್ಯವನ್ನು ಬಂಡವಾಳ ಮಾಡಿಕೊಂಡ ಕಳ್ಳರು, ಮನೆಯಲ್ಲಿದ್ದ...