Home namma chikmagalur chikamagalur ಮೂಡಿಗೆರೆ ಪ.ಪಂ. ಎದುರು ಕಸ ಹಾಕಿ ಪ್ರತಿಭಟನೆ
chikamagalurHomeLatest Newsnamma chikmagalur

ಮೂಡಿಗೆರೆ ಪ.ಪಂ. ಎದುರು ಕಸ ಹಾಕಿ ಪ್ರತಿಭಟನೆ

Share
Share

ಮೂಡಿಗೆರೆ: ಪ.ಪಂ. ಅಧಿಕಾರಿಗಳು ಪಟ್ಟಣದ ಘನತ್ಯಾಜ್ಯ ಸಂಗ್ರಹ, ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲಾಗಿದ್ದಾರೆಂದು ಪಟ್ಟಣದ ನಿವಾಸಿಗಳು ಹಾಗೂ ರೈತ ಮುಖಂಡರು ಸೋಮವಾರ ಪ.ಪಂ. ಎದುರು ಕಸ ಹಾಕಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಆರ್.ದುಗ್ಗಪ್ಪಗೌಡ ಮಾತನಾಡಿ, ಪಟ್ಟಣದಲ್ಲಿ ಜನರು ಎಲ್ಲೆಂದರಲ್ಲಿ ಕಸ ಹಾಕುತ್ತಿದ್ದಾರೆ. ಅಲ್ಲದೇ ಕಸ ಸಂಗ್ರಹ ವಾಹನಗಳು ಬರುತ್ತಿಲ್ಲ. ಅನೇಕ ವರ್ಷದಿಂದ ಈ ಸಮಸ್ಯೆಗೆ ಇಂದಿಗೂ ಪರಿಹಾರ ಕಂಡುಕೊಳ್ಳಲು ಪ.ಪಂ. ಆಡಳಿತಕ್ಕೆ ಸಾಧ್ಯವಾಗಿಲ್ಲ. ರಸ್ತೆ ಬದಿಯಲ್ಲಿ ಜನರು ಕಸ ಹಾಕತ್ತಿದ್ದರಿಂದ ಮಳೆ ಬಂದಾಗ ತ್ಯಾಜ್ಯವೆಲ್ಲಾ ಕೊಚ್ಚಿಕೊಂಡು ಕುಡಿಯುವ ನೀರು ಬಳಸುವ ಹಳ್ಳ ಕೊಳ್ಳಗಳಿಗೆ ಸೇರುತ್ತಿದೆ. ಕಸದ ರಾಶಿಯಿಂದ ಪಟ್ಟಣದ ಸೌಂಧರ್ಯ ಸಂಪೂರ್ಣ ನಾಶವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಎಸ್.ಪಿ.ರಾಜು ಮಾತನಾಡಿ, ಪ.ಪಂ. ನಿರ್ಲಕ್ಷ್ಯದಿಂದ ಪಟ್ಟಣವೇ ಗೊಬ್ಬು ವಾಸನೆಯಿಂದ ಕೂಡಿದೆ. ಈ ಬಗ್ಗೆ ಅನೇಕ ಬಾರಿ ಪ.ಪಂ. ಅಧಿಕಾರಿಗಳು ಹಾಗೂ ಗುತ್ತಿಗೆ ಪಡೆದ ವ್ಯಕ್ತಿಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ರಸ್ತೆ ಬದಿ ಕಸ ಹಾಕುವವರಿಗೆ ದೊಡ್ಡ ಮೊತ್ತದ ದಂಡ ಹಾಕಬೇಕು. ಕಸ ಸಂಗ್ರಹಣೆ ವಾಹನ ಪ್ರತಿನಿತ್ಯ ಎಲ್ಲಾ ವಾರ್ಡ್‌ಗಳಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ಕಸವನ್ನು ಕಚೇರಿಯೊಳಗೆ ಸುರಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೃಷಭ್‌ರಾಜ್, ಜಿಲ್ಲಾ ಸಂಚಾಲಕ ಪಿ.ಕೆ.ನಾಗೇಶ್‌ಗೌಡ, ಚಿಕ್ಕಮಗಳೂರು ತಾಲೂಕು ಅಧ್ಯಕ್ಷ ತುಳಸೇಗೌಡ, ತಾಲೂಕು ಸಂಚಾಲಕ ಡಿ.ಎಸ್.ರಮೇಶ್, ಕೃಷ್ಣ ಕಳಸ, ಪದ್ಮರಾಜ್, ಬಸವರಾಜಪ್ಪ ಮತ್ತಿತರರಿದ್ದರು.

Protest by throwing garbage in front of Mudigere P.P.

Share

Leave a comment

Leave a Reply

Your email address will not be published. Required fields are marked *

Don't Miss

ತರೀಕೆರೆ-ಕಡೂರು-ಚಿಕ್ಕಮಗಳೂರು: ಅದಲು-ಬದಲು ಕಾಂಗ್ರೆಸ್, ಬಿಜೆಪಿ ಕಿತ್ತಾಟ !

ಚಿಕ್ಕಮಗಳೂರು: ರಸ್ತೆ ಕಾಮಗಾರಿಗಳು, ಭದ್ರ ಉಪಕಣಿವೆ ಯೋಜನೆಗಳಿಗೆ ಕಾಂಗ್ರೆಸ್ ಶಾಸಕರುಗಳಲ್ಲಿ “ಸಿಟ್ಟು” ಮಡಿಗಟ್ಟಿದೆ. ಇದಕ್ಕೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯಮತ್ತು ಬಿಜೆಪಿ ಮುಖಂಡ ಸಿ.ಟಿ.ರವಿ ಹಾದಿ ರಂಪ,ಬೀದಿ ರಂಪ ಮಾಡಿಕೊಂಡು ದೂರುಪ್ರತಿದೂರು...

ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆಯಿಂದ ಶಾಸಕ ಸಿ.ಟಿ ರವಿ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ವಿಧಾನಪರಿಷತ್ ಶಾಸಕ ಸಿ.ಟಿ ರವಿ ರವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು...

Related Articles

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಜನಪ್ರತಿನಿಧಿಗಳಿಂದ ಸ್ವಾಗತ

ಚಿಕ್ಕಮಗಳೂರು:  ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದ್ದು, ಅತ್ಯಂತ ಹುರುಪಿನಿಂದ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ...

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ಆದ್ಯತೆ ನೀಡಿ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ದೋಷಮುಕ್ತ ಮತದಾರರ ಪಟ್ಟಿ ಅತ್ಯಗತ್ಯ....

 ಮಕ್ಕಳ ಶಾಲಾ ಹಾಜರಾತಿ ಬಗ್ಗೆ ಪೋಷಕರು ನಿಗಾ ವಹಿಸಬೇಕು

ಚಿಕ್ಕಮಗಳೂರು: ಮಕ್ಕಳು ಪ್ರತಿದಿನ ತಪ್ಪದೆ ಶಾಲೆಗೆ ಹಾಜರಾಗಬೇಕು. ಶಿಕ್ಷಣದಲ್ಲಿ ನಿರಂತರತೆ ಅತ್ಯಂತ ಮುಖ್ಯವಾಗಿದ್ದು, ಪೋಷಕರು ಈ...

ನಿವೇಶನಕ್ಕಾಗಿ ಒತ್ತಾಯಿಸಿ 4ನೇ ದಿನಕ್ಕೆ ಮುಂದುವರೆದ ಧರಣಿ

ಮೂಡಿಗೆರೆ: ತಾಲೂಕಿನ ಮಣ್ಣಿಕೆರೆ ಗ್ರಾಮದಲ್ಲಿ ಟಿಯುಸಿಐ ಮತ್ತು ವಸತಿಗಾಗಿ ಹೋರಾಟ ವೇದಿಕೆ ವತಿಯಿಂದ ನಿವೇಶನ ರಹಿತರು...