Home namma chikmagalur chikamagalur ಕೊಲೆ ಆರೋಪಿ ಗಲ್ಲಿಗೇರಿಸಲು ಆಗ್ರಹಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ಕೊಲೆ ಆರೋಪಿ ಗಲ್ಲಿಗೇರಿಸಲು ಆಗ್ರಹಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ಕೊಡಗು ಜಿಲ್ಲೆಯ ಪತ್ರಿಕೋದ್ಯಮದ ವಿದ್ಯಾರ್ಥಿನಿ ರಂಜಿತಾ ಅವರನ್ನು ಅತ್ಯಾಚಾರ ಮಾಡಿ ಕೊಲೆಗೈದಿರುವ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೃಷ್ಣಪ್ಪ ಬಣ ಮತ್ತು ದಲಿತ ಮಹಿಳಾ ಒಕ್ಕೂಟದಿಂದ ರಾಜ್ಯ ಸಮಿತಿ ಕರೆಯಂತೆ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಮಹಿಳೆಯರು ಸೇರಿದಂತೆ ನೂರಾರು ಕಾರ್ಯಕರ್ತರು ನಗರದ ಆಜಾದ್‌ಪಾರ್ಕಿನಲ್ಲಿ ಸಮಾವೇಶಗೊಂಡು ಕೊಡಗಿನ ರಂಜಿತಾ ಕೊಲೆಗಡುಕರನ್ನು ಬಂಧಿಸಿ ನೊಂದ ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿ ಘೋಷಣೆ ಕೂಗಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಭೀಮಯ್ಯ ಮಾತನಾಡಿ, ಮಾ.೧೧ ರಂದು ಕೊಡಗಿನ ಅಯ್ಯಪ್ಪ ಎಂಬಾತ ಮೈಸೂರಿನ ಮಹಾರಾಣಿ ಕಾಲೇಜಿನ ವಿದ್ಯಾರ್ಥಿನಿ ರಂಜಿತಾಳನ್ನು ಪುಸಲಾಯಿಸಿ ಬೆಂಗಳೂರಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ. ತೋಟಕಾರ್ಮಿಕರು, ಬಡವರ ಪರವಾಗಿ ಸದಾ ಹೋರಾಟ ನಡೆಸುತ್ತಿದ್ದ ರಂಜಿತಾಳ ಕೊಲೆ ವ್ಯವಸ್ಥಿತ ಪಿತೂರಿಯಾಗಿದ್ದು ಈ ಪ್ರಕರಣನ್ನು ರಾಜ್ಯ ಸರಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ಓರ್ವ ವಿದ್ಯಾರ್ಥಿನಿಗೆ ಆದ ಅನ್ಯಾಯವನ್ನು ರಾಜ್ಯದ ಯಾವೊಂದು ಮಹಿಳಾ ಸಂಘಟನೆಗಳು ಖಂಡಿಸದಿರುವುದು ವಿಪರ್ಯಾಸ ಕೂಡಲೇ ಆರೋಪಿಗಳಿಗೆ ಕಠಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ರಾಜ್ಯ ಸಂಚಾಲಕ ವೆಂಕಟೇಶ್ ಮಾತನಾಡಿ, ರಂಜಿತಾ ಕೊಲೆಗಡುಕರನ್ನು ಗಲ್ಲಿಗೇರಿಸಬೇಕು. ಹೋರಾಟಗಾರ್ತಿಯಾಗಿದ್ದ ರಂಜಿತಾ ಶೋಷಿತರ ಪರವಾಗಿ ಸದಾ ದನಿಎತ್ತುತ್ತಿದ್ದರು. ಇಂತಹ ಹೆಣ್ಣುಮಗಳನ್ನು ಕೊಲೆ ಮಾಡಿರುವ ದುರುಳರಿಗೆ ಕಠಿಣ ಶಿಕ್ಷೆಯಾಗಬೇಕು. ಸಂತ್ರಸ್ಥ ಕುಟುಂಬಕ್ಕೆ ಪರಿಹಾರ, ಜಮೀನು ನೀಡಬೇಕು. ಕುಟುಂಬದ ಒಬ್ಬರಿಗೆ ಸರಕಾರಿ ನೌಕರಿ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಮಹಿಳಾ ಸಂಚಾಲಕಿ ಭವಾನಿ ಮಾತನಾಡಿ ಕೊಡಗಿನಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು ಈ ಬಗ್ಗೆ ರಾಜ್ಯ ಸರಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಡಿಎಸ್‌ಎಸ್ ಮುಖಂಡರಾದ ರಾಜೇಶ್, ಅಬ್ದುಲ್‌ರೆಹಮಾನ್, ಕೃಷ್ಣ, ಶಿವಕುಮಾರ್, ಮಂಜುನಾಥ್, ಭಾಸ್ಕರ, ಅಶೋಕ, ಮೋಹನ್‌ಕುಮಾರ್, ರಾಘವೇಂದ್ರ ಮತ್ತಿತರರಿದ್ದರು. ನಂತರ ಜಿಲ್ಲಾಧಿಖಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Protest demanding hanging of murder accused

 

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...