Home namma chikmagalur chikamagalur ಸಂವಿಧಾನ ವಿರೋಧಿ ಎಸ್.ಐ.ಆರ್ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ಸಂವಿಧಾನ ವಿರೋಧಿ ಎಸ್.ಐ.ಆರ್ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ಸಂವಿಧಾನ, ಪ್ರಜಾತಂತ್ರ, ಜನವಿರೋಧಿ ಆಗಿರುವ ಸರ್ವಾಧಿಕಾರಿ ಗುಣವಿರುವ ಎಸ್.ಐ.ಆರ್ ರದ್ಧಾಗಬೇಕು ಸಂವಿಧಾನ ಬದ್ಧವಾದ, ಜನಸ್ನೇಹಿಯಾದ ಐ.ಆರ್ ತೀವ್ರ ಪರಿಷ್ಕರಣೆ ಮೂಲಕ ಜಾರಿಗೆ ತರಬೇಕು ಎಂದು ಆಗ್ರಹಿಸಿ ಇಂದು ಪ್ರಗತಿ ಸಂಘಟನೆಗಳ ಹಾಗೂ ಜಾತ್ಯಾತೀತ ಪಕ್ಷಗಳ ಒಕ್ಕೂಟ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನಾ ಸತ್ಯಾಗ್ರಹ ನೆಡೆಸಿದರು.

ಇಂದು ಬೆಳಿಗ್ಗೆ ಆಜಾದ್ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಎಸ್.ಐ.ಆರ್ ಎಂಬ ಅಸಂವಿಧಾನಿಕ, ಅವೈಜ್ಞಾನಿಕ, ದೋಷಪೂರಿತ ಮತ್ತು ದುರುದ್ದೇಶಪೂರಿತ ಮತದಾರರ ಪಟ್ಟಿಯ ಪರಿಷ್ಕರಣಾ ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಆಗ್ರಹಿಸಿದರು,

ಭಾರತದ ಪ್ರತಿಯೊಬ್ಬ ನಾಗರೀಕನನ್ನು ಮುಕ್ತವಾಗಿ ಹಾಗೂ ಪಾರದರ್ಶಕವಾಗಿ ಒಳಗೊಳ್ಳುವ ರೀತಿಯಲ್ಲಿ ನೆಡೆಸಬೇಕು, ಇಡೀ ಚುನಾವಣಾ ಪ್ರಕ್ರಿಯೆಯನ್ನೇ ಅಪಹರಿಸಲು ಮುಂದಾಗಿರುವ ಇ.ಸಿ.ಐ ಆಯ್ಕೆ ವಿಧಾನ, ವಿ.ವಿ.ಎಂ ಮುಂತಾದ ಕಬಂಧ ಬಾಹುಗಳಿಂದ ಮುಕ್ತಿ ದೊರಕಬೇಕು ಎಂದು ಒತ್ತಾಯಿಸಿದರು.

ಈ ಪ್ರಕ್ರಿಯೆಯನ್ನು ವ್ಯವದಾನದ ಜೊತೆ ನೆಡೆಸಬೇಕು ಕನಿಷ್ಠ ೧ ವರ್ಷದ ಅವಧಿ ನಿಗದಿಮಾಡಬೇಕು, ೬ ತಿಂಗಳು ಮನೆ-ಮನೆಗೆ ಹೋಗಿ ಮತದಾರರ ಪಟ್ಟಿ ಪರಿಷ್ಕರಣೆ ನೆಡೆಸಬೇಕು, ಕರಡುಪಟ್ಟಿ ತಯಾರಾದ ಮೇಲೆ ತಿದ್ದುಪಡಿ ಸಲ್ಲಿಸಲು ಜನರಿಗೆ ಕನಿಷ್ಠ ೬ ತಿಂಗಳ ಸಮಯಾವಕಾಶ ನೀಡಬೇಕೆಂಬ ಬೇಡಿಕೆಯು ಸೇರಿದಂತೆ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಗೆ ಕನಿಷ್ಠ ೭ ಅಂಶಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಪ್ರತಿಭಟನೆಯಲ್ಲಿ ಎದ್ದೇಳು ಕರ್ನಾಟಕದ ಜಿಲ್ಲಾಧ್ಯಕ್ಷ ಟಿ.ಎಲ್ ಗಣೇಶ್, ರಾಜ್ಯ ಸಂಚಾಲಕ ಗೌಸ್ ಮೊಹಿದ್ದೀನ್, ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಯೂಸುಫ್‌ಹಾದಿ, ಮಂಜು, ಉಪಸ್ಥಿತರಿದ್ದರು.

Protest demanding repeal of unconstitutional SIR

Share

Leave a comment

Leave a Reply

Your email address will not be published. Required fields are marked *

Don't Miss

ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು

ಚಿಕ್ಕಮಗಳೂರು: ಪರಿಶಿಷ್ಟಜಾತಿ,ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರು, ನಿವೃತ್ತ ಸರ್ಕಾರಿ ನೌಕರ ಸಂಘದವರು ಸಮುದಾಯದ ಅಭಿವೃದ್ಧಿಗೆ ದುಡಿಯುವ ಸಂಕಲ್ಪ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆಲಸ ನಿರ್ವಹಿಸಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುವ ಎನ್.ಎಂ. ನಾಗರಾಜ್...

ಗ್ರಾಮಲೆಕ್ಕಿಗನಿಗೆ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚನೆ

ಚಿಕ್ಕಮಗಳೂರು : ಗ್ರಾಮಲೆಕ್ಕಿಗರೊಬ್ಬರಿಗೆ ಚಿನ್ನ, ಬೆಳ್ಳಿ ಮೇಲೆ ಹೂಡಿಕೆ ಮಾಡಿ ಲಾಭಮಾಡಿಕೊಡುವ ಆಮಿಷವೊಡ್ಡಿದ ಬ್ಯಾಂಕ್ ಉದ್ಯೋಗಿಯೊಬ್ಬ ೪೫.೨೦ ಲಕ್ಷ ಹಣಕ್ಕೆ ೫೦ ನಕಲಿ ಕೆ.ಜಿ. ಬೆಳ್ಳಿ ಗಟ್ಟಿ ನೀಡಿ ವಂಚಿಸಿರುವ ಬಗ್ಗೆ...

Related Articles

ಸಿದ್ದು ಮೌನಂ ಸಮ್ಮತಿ ಯಾವಾಗ ಸ್ಪೋಟಿಸುತ್ತದೆ ?

ಕರ್ನಾಟಕದ ರಾಜಕಾರಣದಲ್ಲಿ ಇಂತಹ ಬೆಳವಣಿಗೆ ನಡೆಯ ಬಹುದು ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ. 2013...

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ...

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ-ವೃದ್ಧ ಸಾವು

ಕಡೂರು: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಹೆಚ್ಚಿನ ಚಿಕಿತ್ಸೆಗಾಗಿ...