Home namma chikmagalur ಉದ್ಯಾನವನ ಜಾಗ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ
namma chikmagalurchikamagalurHomeLatest News

ಉದ್ಯಾನವನ ಜಾಗ ತೆರವುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ನಗರದ ರಾಮನಹಳ್ಳಿ ಬಡಾವಣೆಯ ಸರ್ವೆ ನಂ. ೧೧೫/೧ ರಲ್ಲಿ ಇರುವ ಪಾರ್ಕ್ ಜಾಗವನ್ನು ಅತಿಕ್ರಮಿಸಿರುವುದನ್ನು ಕೂಡಲೇ ತೆರವುಗೊಳಿಸುವಂತೆ ಆಗ್ರಹಿಸಿ ನಗರಸಭೆ ಮತ್ತು ಸಿಡಿಎ ಎದುರು ಸಧ್ಯದಲ್ಲೇ ಉಗ್ರ ಪ್ರತಿಭಟನೆ ನಡೆಸುವುದಾಗಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಸಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ನಮ್ಮ ಕರವೇ ಜಿಲ್ಲಾಧ್ಯಕ್ಷ ಅಗ್ನಿ ಸುಮಂತ್ ಅವರು ರಾಮನಹಳ್ಳಿ ಬಡಾವಣೆಯ ಸರ್ವೆ ನಂ.೧೫೫/೧ ರಲ್ಲಿ ೨ ಎಕರೆ ೧೩ ಗುಂಟೆ ಜಾಗವನ್ನು ೧೯೮೬-೨೭ ರಲ್ಲಿ ಮಹದೇವಪ್ಪ ಎಂಬುವವರು ಮೀಸಲಿಟ್ಟಿದ್ದು, ೮೦x೨೦೦ ಅಡಿ ಜಾಗವನ್ನು ಪಾರ್ಕಿಗೆ ಕಾಯ್ದಿರಿಸಿ ಬಡಾವಣೆ ನಕ್ಷೆ ಅನುಮೋದನೆಯಾಗಿದೆ ಎಂದು ಹೇಳಿದರು.

ಲೇಔಟ್‌ನಲ್ಲಿ ಬಿಡಲಾಗಿದ್ದ ಉದ್ಯಾನವನದ ಈ ಜಾಗವನ್ನು ಕೆಲವು ಬಲಾಢ್ಯರು ನಗರಸಭೆ ಮತ್ತು ಸಿಡಿಎ ಅಧಿಕಾರಿಗಳೊಂದಿಗೆ ಶಾಮೀಲಾಗಿ ಮಾರ್ಪಾಡು ನಕ್ಷೆ ತಯಾರಿಸಿದ್ದಾರೆಂದು ಆರೋಪಿಸಿದರು.

ಈ ಸಂಬಂಧ ಸ್ಥಳೀಯ ನಗರಸಭೆ ಸದಸ್ಯರು, ನಗರಸಭಾಧ್ಯಕ್ಷರು ಮತ್ತು ಪೌರಾಯುಕ್ತರು, ಸಿಡಿಎ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ದೂರು ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.

ರಾಮನಹಳ್ಳಿ ಹನುಮಂತನಗರದ ಉದ್ಯಾನವನ ಜಾಗ ಅತಿಕ್ರಮಿಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಜಾಗವನ್ನು ಉಳಿಸುವಂತೆ ಆಗ್ರಹಿಸಿದರು.

ಇನ್ನೊಂದು ವಾರದಲ್ಲಿ ತೆರವು ಕಾರ್ಯಾಚರಣೆ ಆಗದಿದ್ದರೆ ಸಂಘಟನೆ ವತಿಯಿಂದ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಮುಖಂಡರಾದ ಪ್ರದೀಪ್, ಜೀವನ್, ಪ್ರಜ್ವಲ್, ಸುಭಾನ್, ಅಕ್ಷಯ್ ಉಪಸ್ಥಿತರಿದ್ದರು.

Protest demanding the clearing of park land

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...