Home namma chikmagalur ಬಾಲಕಿಯರ ಅತ್ಯಾಚಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಪ್ರತಿಭಟನೆ
namma chikmagalurchikamagalurHomeLatest News

ಬಾಲಕಿಯರ ಅತ್ಯಾಚಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಪ್ರತಿಭಟನೆ

Share
Share

ಚಿಕ್ಕಮಗಳೂರು: ಬಾಲಕಿಯರ ಮೇಲೆ ಅತ್ಯಾಚಾರ ಎಸಗಿರುವ ದುಷ್ಕರ್ಮಿಗಳ ವಿರುದ್ಧ ಪ್ರಕರಣವನ್ನು ದಾಖಲಿಸಿ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ದಲಿತ ಮತ್ತು ಕನ್ನಡಪರ ಸಂಘ ಟನೆಗಳ ಪದಾಧಿಕಾರಿಗಳು ಸೋಮವಾರ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಈ ಕುರಿತು ಮಾತನಾಡಿದ ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಕೊಪ್ಪಳ ಜಿಲ್ಲೆಯ ಅಪ್ರಾಪ್ತ ವಯಸ್ಸಿನ ಶಾಲಾ ಬಾಲಕಿ ಮೇಲೆ ಅತ್ಯಾಚಾರಗೈದು ಕೊಲೆಗೈದಿರುವ ದುರುಳರು ಹಾಗೂ ಚಿಕ್ಕ ಮಗಳೂರಿನ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣವನ್ನು ಕೂಲಂಕುಶವಾಗಿ ತನಿಖೆಗೆ ನಡೆಸಬೇಕು ಎಂದು ಒತ್ತಾ ಯಿಸಿದರು.

ಬಾಲಕಿಯರ ಅತ್ಯಾಚಾರ ಪ್ರಕರಣಗಳು ರಾಜ್ಯದಲ್ಲಿ ಕಡಿವಾಣವಾಗುತ್ತಿಲ್ಲ. ಧರ್ಮಸ್ಥಳದ ಸೌಜನ್ಯ ಪ್ರಕ ರಣದ ಚಳಿವಳಿಯಂತೆ ಬೃಹತ್ ಮಟ್ಟದಲ್ಲಿ ಆರಂಭಿಸುವ ಮೂಲಕ ಸರ್ಕಾರವನ್ನು ಬಡಿದೇಳಿಸಿದರೆ ಅಮಾ ಯಕ ಬಾಲಕಿಯರ ಕುಟುಂಬಕ್ಕೆ ನ್ಯಾಯವನ್ನು ಒದಗಿಸಬಹುದು ಎಂದು ಹೇಳಿದರು.

ಅತ್ಯಾಚಾರಿ ಆರೋಪಿಗಳನ್ನು ಶೀಘ್ರವೇ ಬಂಧಿಸಿ ನ್ಯಾಯಾಂಗ ವ್ಯವಸ್ಥೆಯಡಿ ಶಿಕ್ಷಿಸಲು ಸರ್ವರು ಒಂ ದಾಗಬೇಕಿದೆ. ಅಲ್ಲದೇ ಈ ಚಳುವಳಿಗಳು ಒಂದು ದಿನಕ್ಕೆ ಸೀಮಿತಗೊಳಿಸಬಾರದು. ನಿರಂತರವಾಗಿ ಹೋ ರಾಟ ನಡೆಸಿ ಸರ್ಕಾರದ ಕಣ್ತೆರೆಸಬೇಕು. ಮುಂದಿನ ದಿನಗಳಲ್ಲಿ ಅತ್ಯಾಚಾರಿಗಳು ಈ ದುಕೃತ್ಯಕ್ಕೆ ಕೈಹಾಕದಂತೆ ಕಟ್ಟುನಿಟ್ಟಿನ ಕಾನೂನು ರೂಪಿಸಬೇಕು ಎಂದರು.

ದಸಂಸ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್ ಮಾತನಾಡಿ ಕೊಪ್ಪಳದ ಬಾಲಕಿಯ ಪಾಲ ಕರು ಮನೆಯಲ್ಲಿ ಇಲ್ಲದ ವೇಳೆಯಲ್ಲಿ ದುಷ್ಕರ್ಮಿಗಳು ಅತ್ಯಾಚಾರವೆಸಗಿ, ಮಾರಾಕಾಸ್ತ್ರಗಳಿಂದ ಕೊಲೆಗೈದು ದುಷ್ಕತ್ಯ ಮೆರೆದಿದ್ದಾರೆ. ಜಿಲ್ಲೆಯ ಕೊಪ್ಪ ತಾಲ್ಲೂಕಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಆತ್ಮಹತ್ಯೆ ಪ್ರಕ ರಣ ಸಾಕಷ್ಟು ಅನುಮಾನ ಮೂಡಿಸಿರುವ ಕಾರಣ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾ ಯಿಸಿದರು.

ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ಮಾತನಾಡಿ ರಾಜ್ಯದಲ್ಲಿ ಪುಟ್ಟ ಬಾಲಕಿಯರ ಮೇಲೆ ಅತ್ಯಾ ಚಾರಗಳು ನಡೆಯುತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಮೌನವಹಿ ಸಿರುವುದು ಸರಿಯಲ್ಲ. ಇಂಥಹ ಪ್ರಕರಣಗಳನ್ನು ಗಂಭೀರವಾಗಿ ಚಿಂತಿಸುವ ಮೂಲಕ ನೊಂದ ಬಾಲಕಿ ಯರ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ಎಸ್ಸಿಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯರಾದ ಲಕ್ಷ್ಮಣ್, ರಮೇಶ್, ಭೀಮ್ ಆರ್ಮಿ ಗೌರವಾಧ್ಯಕ್ಷ ಹೊನ್ನೇಶ್, ಕನ್ನಡಸೇನೆ ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್, ವಿವಿಧ ಮುಖಂ ಡರುಗಳಾದ ಕುರುವಂಗಿ ವೆಂಕಟೇಶ್, ಹೆಚ್.ಪಿ.ಮಂಜೇಗೌಡ, ಹಂಪಯ್ಯ, ಶಂಕರೇಗೌಡ, ಅನ್ವರ್, ರವಿ, ಹರೀಶ್‌ಮಿತ್ರ, ಭಾರತಿ, ರತ್ನ, ಡಾ|| ಸುಂದರಗೌಡ, ಹೇಮಂತ್ ಮತ್ತಿತರರಿದ್ದರು.

Protest for disciplinary action against rapists of girls

Share

Leave a comment

Leave a Reply

Your email address will not be published. Required fields are marked *

Don't Miss

ಮಕ್ಕಳಪ್ರತಿಭೆ ರಾಷ್ಟ್ರಮಟ್ಟದಲ್ಲಿ ಬೆಳಗಿಸಿದ ಕ್ರೀಡಾ ಶಿಕ್ಷಕ

ತರೀಕೆರೆ: ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯಗಳ ಜೊತೆಗೆ ದೈಹಿಕ ಶಿಕ್ಷಣವು ಬಹು ಮುಖ್ಯ. ಮಕ್ಕಳ ಆಸಕ್ತಿ ಗಮನಿಸಿ ಪ್ರೋತ್ಸಾಹ ನೀಡುವುದರ ಜೊತೆಗೆ ತರಭೇತಿ ನೀಡಿದರೆ ತಾಲ್ಲೂಕು, ಜಿಲ್ಲೆ,ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕೀರ್ತಿ ಗಳಿಸಲು...

ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ

ಮೂಡಿಗೆರೆ: ತಾಲ್ಲೂಕಿನ ಗೋಣಿಬಿಡು ಹೋಬಳಿಯ ಜಿ.ಹೊಸಳ್ಳಿ, ಹೊಸಪುರ, ಕಸ್ಕೇಬೈಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮೂರು ಗುಂಪುಗಳಲ್ಲಿ ಸುಮಾರು 40ಕ್ಕೂ ಅಧಿಕ ಕಾಡಾನೆಗಳು ದಾಳಿ ನಡೆಸಿದ್ದು ಭಯದ ವಾತಾವರಣ ಸೃಷ್ಟಿಯಾಗಿದೆ. ಒಂದು ತಿಂಗಳಿನಿಂದ...

Related Articles

ಫೋಟೋ-ವಿಡಿಯೋಗ್ರಫಿ ಕೆನಾನ್ ಕ್ಯಾಮಾರಗಳು ಶ್ರೇಷ್ಠ

ಚಿಕ್ಕಮಗಳೂರು:  ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ಕ್ಷೇತ್ರದಲ್ಲಿ ಹೊಸ ಆಯಾಮ ವನ್ನು ಸೃಷ್ಟಿಸುವ ಕೆನಾನ್ ಕ್ಯಾಮರಾಗಳು ಛಾಯಾಗ್ರಾಹಕರ...

ಕೊಳಮಗೆ ಬಳಿಯ ಭದ್ರಾ ನದಿಗೆ ಬಿದ್ದ ಪಿಕ್‌ಅಪ್: ಯುವಕ ಸಾವಿನ ಶಂಕೆ

ಕಳಸ: ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್‌ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ...

ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ

ಕೊಪ್ಪ : ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು...

ಅರಣ್ಯ ಸಚಿವರಿಗೆ ಮಲ್ನಾಡು ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ

ಚಿಕ್ಕಮಗಳೂರು: ಅರಣ್ಯ ಸಚಿವರಿಗೆ ಮಲ್ನಾಡು ಭಾಗಕ್ಕೂ ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ. ನಿರಂತರವಾಗಿ...