ಮೂಡಿಗೆರೆ: ತಾಲೂಕಿನ ಗೋಣಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ವೆನಂಬರ್ ೧೪೪ ರಲ್ಲಿ ವಸತಿಗಾಗಿ ಹೋರಾಟ ವೇದಿಕೆ ಮತ್ತು ಟಿಯುಸಿಐ ನೇತೃತ್ವದಲ್ಲಿ ನಿವೇಶನ ರಹಿತರು ನಿವೇಶನಕ್ಕೆ ಕಾಯ್ದಿರಿಸಿದ ಜಾಗದಲ್ಲಿ ಗುಡಿಸಲು ನಿರ್ಮಿಸಿ ಅಲ್ಲೇ ವಾಸ್ತವ್ಯ ಹೂಡಲು ನಿರ್ಧರಿಸಿ ಪ್ರತಿಭಟನಾಧರಣಿ ಆರಂಭಗೊಂಡಿದೆ.
ಕಳೆದ ಹತ್ತು ವರ್ಷದಿಂದ ನಿವೇಶನಕ್ಕೆ ಕಾಯ್ದಿರಿಸಿದ ಭೂಮಿಯನ್ನು ನಿವೇಶನ ಕಲ್ಪಿಸಲು ಒತ್ತಾಯಿಸಿ ಹೋರಾಟ ರೂಪಿಸಲಾಗಿತ್ತು ಆದರೆ ಪಂಚಾಯಿತಿ ಆಡಳಿತ ಮತ್ತು ತಾಲೂಕು ಆಡಳಿತ ಸೂಕ್ತ ಕ್ರಮವಹಿಸಿದೆ ಇರುವುದರಿಂದ ಇಂದು ನಿವೇಶನ ರಹಿತರು ಗುಡಿಸಲು ನಿರ್ಮಿಸಿಕೊಂಡು ವಾಸಿಸಲು ಮುಂದಾಗಿದ್ದಾರೆ.
ನಿವೇಶನಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ತಾಲೂಕು ಪಂಚಾಯಿತಿ ಎದುರು ಪ್ರತಿಪಟನಾಧರಣಿ ಮಾಡಿ ನಿವೇಶನಕ್ಕೆ ಕಾಯ್ದಿರಿಸುವ ಜಾಗದಲ್ಲಿ ಈಗಾಗಲೇ ಒಬ್ಬ ಪ್ರಭಾವಶಾಲಿಗಳು ಮನೆ ನಿರ್ಮಿಸಿದ್ದು ಇದನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಲಾಗಿತ್ತು. ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಕ್ರಮ ಜರುಗಿಸಿರಲಿಲ್ಲ ಹೀಗಾಗಿ ಅನಿವಾರ್ಯ ಕಾರಣಗಳಿಂದ ಈಗಾಗಲೇ ಕೂಲಿ ಲೈನಿನಲ್ಲಿ ವಾಸಿಸುವ ಬಾಡಿಗೆಮನೆ ವಾಸಿಗಳಿಗೆ ನಿವೇಶನ ಕಲ್ಪಿಸುವಂತೆ ದಾಖಲಾತಿಗಳೊಂದಿಗೆ ಗೋಣಿಬೀಡು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಲಾಗಿತ್ತು.
ಆದರೆ ಗ್ರಾಮ ಪಂಚಾಯಿತಿ ಆಡಳಿತ ಪ್ರಭಾವಿಗಳ ಒತ್ತಡಕ್ಕೆ ಮಣಿದು ಯಾವುದೇ ಕ್ರಮ ಜರುಗಿಸಿಲ್ಲ ಹೀಗಾಗಿ ನಿವೇಶನ ರಹಿತರೆಲ್ಲ ಒಂದಾಗಿ ಗುಡಿಸಲು ನಿರ್ಮಿಸಿ ಹೋರಾಟ ರೂಪಿಸಿದ್ದಾರೆ ಈ ಹೋರಾಟಕ್ಕೆ ಸಿಪಿಐಎಂಎಲ್ ತಾಲೂಕು ಮತ್ತು ಜಿಲ್ಲಾ ಸಮಿತಿ ಸಂಗಾತಿಗಳು ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳು ಕೂಡ ಹೋರಾಟಕ್ಕೆ ಬೆಂಬಲಿಸಿ, ಧರಣಿಯಲ್ಲಿ ಮತ್ತು ಗುಡಿಸಲು ನಿರ್ಮಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೆ ಗುಡಿಸಲಿನಲ್ಲಿ ವಾಸ ಮಾಡಲು ನಿರ್ಧರಿಸಲಾಗಿದೆ.
ಮೂಡಿಗೆರೆ ತಾಲೂಕಿನಲ್ಲಿ ಕಂದಾಯ ಭೂಮಿ ಗೋಮಾಳ, ಗೈರಾಣಿ, ಗೋಮಾಳ, ಕೆರೆಯಂಗ, ಹುಲ್ಲು ಬನ, ಊರು ಉಡುಬಿ ಸೇರಿದಂತೆ ಎಲ್ಲ ಭೂಮಿಗಳು ಉಳ್ಳವರ ಪಾಲಾಗಿದ್ದು ನಿವೇಶನಕ್ಕೆ ಜಾಗ ಇಲ್ಲದಂತಾಗಿದೆ ರಾಜಕಾರಣಿಗಳು ತಮ್ಮ ಸ್ವಾರ್ಥ ರಾಜಕೀಯಕ್ಕಾಗಿ ಸುಳ್ಳುಗಳನ್ನೇ ಹೇಳುತ್ತಾ ಕಾಲಹರಣ ಮಾಡುತ್ತಿದ್ದಾರೆ ಹೀಗಾಗಿ ಜನರು ಅನಿವಾರ್ಯ ಕಾರಣಗಳಿಂದ ಸರ್ಕಾರಿ ಭೂಮಿಯಲ್ಲಿ ವಾಸಿಸಲು ಕಾರಣವಾಗಿದೆ.
ಸಿಪಿಐ(ಎಂ.ಎಲ್) ರಾಜ್ಯ ಕಾರ್ಯದರ್ಶಿ ಬಿ.ರುದ್ರಯ್ಯ ಮಾತನಾಡಿ, ತಾಲೂಕಿನ ಗೋಣಿಬಿಡು ಗ್ರಾ.ಪಂ. ವ್ಯಾಪ್ತಿಯ ಮಣ್ಣಿಕೆರೆ ಗ್ರಾಮದ ಸರ್ವೇ ನಂಬರ್ ೧೪೪ ರಲ್ಲಿ ೩.೨೦ ಎಕರೆ ಸರ್ಕಾರಿ ಭೂಮಿಯನ್ನು ಕಳೆದ ಹತ್ತು ವರ್ಷದ ಹಿಂದೆ ನಿವೇಶನಕ್ಕೆ ಕಾಯ್ದಿರಿಸಲಾಗಿತ್ತು. ನಿವೇಶನ ಹಂಚಿಕೆ ಮಾಡುವಂತೆ ಅನೇಕ ವರ್ಷ ದಿಂದ ಪ್ರತಿಭಟನೆ ನಡೆಸಲಾಗಿದೆ. ಆದರೆ ತಾಲೂಕು ಆಡಳಿತ ಯಾವುದೇ ಕ್ರಮವಹಿಲ್ಲ. ಹಾಗಾಗಿ ಇಲ್ಲಿಯೇ ಗುಡಿಸಲು ನಿರ್ಮಿಸಿ ವಾಸ್ತವ್ಯ ಹೂಡಲು ನಿರ್ಧರಿಸಲಾಗಿದೆ ಎಂದರು.
ಅಲ್ಲದೇ ಈ ಜಾಗದಲ್ಲಿ ಈಗಾಗಲೇ ಒರ್ವ ವ್ಯಕ್ತಿ ಪ್ರಭಾವ ಬಳಿಸಿ ಮನೆ ನಿರ್ಮಿಸಿದ್ದು, ಇದನ್ನು ಕೂಡ ತೆರವುಗೊಳಿಸಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೂ ಹೋರಾಟ ಮುಂದುವರೆಯಲಿದೆ ಎಂದು ಹೇಳಿದರು.
ಟಿಯುಸಿಐ ಜಿಲ್ಲಾಧ್ಯಕ್ಷ ಕೆ.ಕೆ.ಕೃಷ್ಣಪ್ಪ ಮಾತನಾಡಿ, ಜನಪ್ರತಿನಿಧಿಗಳು ತಮ್ಮ ಸ್ವಾರ್ಥ ರಾಜಕೀಯಕ್ಕಾಗಿ ಸುಳ್ಳು ಹೇಳುತ್ತಾ ಕಾಲಹರಣ ಮಾಡುತ್ತಿದ್ದರಿಂದ ತಾಲೂಕಿನಲ್ಲಿ ಕಂದಾಯ ಭೂಮಿ, ಗೋಮಾಳ, ಗೈರಾಣಿ ಗೋಮಾಳ, ಕೆರೆಯಂಗಳ, ಹುಲ್ಲುಬನ, ಸೇರಿದಂತೆ ಎಲ್ಲಾ ಭೂಮಿ ಉಳ್ಳವರ ಪಾಲಾಗಿದ್ದು, ನಿವೇಶನಕ್ಕೆ ಜಾಗಸಿಗದಂತಾಗಿದೆ. ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ನಿವೇಶನ ರಹಿತರ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದರು.
ಸಿಪಿಐಎಂಎಲ್ ಜಿಲ್ಲಾ ಕಾರ್ಯದರ್ಶಿ ಸಂದೀಪ್, ಗೋಣಿಬೀಡು ಹೋಬಳಿ ವಸತಿಗಾಗಿ ಹೋರಾಟ ವೇದಿಕೆ ಕಾರ್ಯದರ್ಶಿ ರಾಜೇಶ್, ಉಮೇಶ್, ಸುರೇಶ್, ಗೋಪಾಲ್, ಕೃಷ್ಣ, ಜಾನಕಿ, ಯಶೋಧ ಮತ್ತಿತರರಿದ್ದರು.
Protest sit-in by building a hut for the site
Leave a comment