Home namma chikmagalur chikamagalur ಬಾಕಿ ಅನುದಾನ ಬಿಡುಗಡೆಗೆ ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ ಆಗ್ರಹ
chikamagalurHomeLatest Newsnamma chikmagalur

ಬಾಕಿ ಅನುದಾನ ಬಿಡುಗಡೆಗೆ ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ ಆಗ್ರಹ

Share
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 0; brp_mask:0; brp_del_th:null; brp_del_sen:null; motionR: 0; delta:1; bokeh:1; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 240.47885;aec_lux_index: 0;albedo: ;confidence: ;motionLevel: 0;weatherinfo: null;temperature: 37;
Share

ಚಿಕ್ಕಮಗಳೂರು: ಇಲ್ಲಿನ ಪ್ರೊಟೆಸ್ಟಂಟ್ ಕ್ರೈಸ್ತರ ಅಭಿವೃದ್ಧಿಗೆ ಬಾಕಿ ಉಳಿದಿರುವ ೧೬೫ ಕೋಟಿ ರೂಗಳನ್ನು ಈ ಬಜೆಟ್‌ನಲ್ಲಿ ಅನುದಾನ ಬಿಡುಗಡೆ ಮಾಡಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಬೇಕೆಂದು ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ ಅಧ್ಯಕ್ಷ ಕೆ.ಕೆ. ವರ್ಗೀಸ್ ಮನವಿ ಮಾಡಿದರು.

ಅವರು  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೨೦೨೫-೨೬ನೇ ಸಾಲಿನಲ್ಲಿ ಕೆಸಿಸಿಡಿಸಿಎಲ್ ಗೆ ೨೫೦ ಕೋಟಿ ರೂ ಘೋಷಿಸಿದ್ದು, ಈ ಪೈಕಿ ಕೇವಲ ೮೫ ಕೋಟಿ ರೂಗಳನ್ನು ಬಿಡುಗಡೆ ಮಾಡಲಾಗಿದೆ. ಕ್ರೈಸ್ತ ಸಮುದಾಯದ ಜನಸಂಖ್ಯೆ ಮತ್ತು ಅಗತ್ಯಗಳನ್ನು ಪೂರೈಸಲು ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಕ್ರೈಸ್ತ ಸಮುದಾಯಗಳಿಗೆ ಜಿಲ್ಲೆ, ತಾಲ್ಲೂಕು, ಹೋಬಳಿ ಮಟ್ಟದಲ್ಲಿ ಸಮಾಧಿ ಸ್ಥಳಗಳಿಗೆ ಜಾಗವನ್ನು ಮೀಸಲಿಡಬೇಕು, ರಾಜ್ಯಾದ್ಯಂತ ಕ್ರೈಸ್ತ ಸಮುದಾಯ ಭವನವನ್ನು ನಿರ್ಮಿಸಬೇಕು, ಪಾಸ್ಟರ್‌ಗಳಿಗೆ ಮುಜುರಾಯಿ ಇಲಾಖೆ ಅಡಿಯಲ್ಲಿ ಮಾಸಿಕ ಗೌರವಧನ ನೀಡಬೇಕು ಹಾಗೂ ಗುರುತಿನ ಚೀಟಿ ವಿತರಿಸುವಂತೆ ಆಗ್ರಹಿಸಿದರು.

ಪ್ರಸ್ತುತ ಅಲ್ಪಸಂಖ್ಯಾತರ ನಿರ್ದೇಶನಾಲಯ ನೀಡುತ್ತಿರುವ ವಿದ್ಯಾರ್ಥಿ ವೇತನಗಳು , ವಸತಿ ನಿಲಯಗಳು, ಶಿಕ್ಷಣ ಸಹಾಯ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ಸಮುದಾಯ ಅಭಿವೃದ್ಧಿ ಯೋಜನೆಗಳು, ಉದ್ಯೋಗ ಮತ್ತು ಜೀವನೋಪಾಯ ಯೋಜನೆಗಳು ಸೇರಿದಂತೆ ಎಲ್ಲಾ ಯೋಜನೆಗಳನ್ನು ಕ್ರೈಸ್ತ ಸಮುದಾಯಕ್ಕೆ ವಿಸ್ತರಿಸಬೇಕೆಂದು ವಿನಂತಿಸಿದರು.

ಕ್ರೈಸ್ತರ ಇತಿಹಾಸ, ಸಾಹಿತ್ಯ, ಸಂಸ್ಕೃತಿ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸಂರಕ್ಷಿಸಲು ಬೆಂಗಳೂರಿನಲ್ಲಿ ಕ್ರೈಸ್ತ ಪರಂಪರೆ ಸಂಗ್ರಹಾಲಯವನ್ನು ಸ್ಥಾಪಿಸಬೇಕು. ಕ್ರೈಸ್ತ ಅಧ್ಯಯನ ಮತ್ತು ಸಾಂಸ್ಕೃತಿಕ ಕೇಂದ್ರಗಳನ್ನು ಉತ್ತೇಜಿಸುವ ಜೊತೆಗೆ ಯುವಕರಿಗೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಆರಂಭಿಸಬೇಕೆಂದು ಹೇಳಿದರು.

ಕ್ರೈಸ್ತರಿಗೆ ಪ್ರತ್ಯೇಕ ೨ಸಿ ವರ್ಗವನ್ನು ರಚಿಸಬೇಕು. ಹಿಂದಿನ ಸರ್ಕಾರ ಜಾರಿಗೆ ತಂದಿರುವ ಮತಾಂತರ ವಿರೋಧಿ ಕಾಯ್ದೆಯನ್ನು ರದ್ದುಪಡಿಸಿ ಧಾರ್ಮಿಕ ಸ್ವಾತಂತ್ರ್ಯ, ಸಾಮಾಜಿಕ ಸೌಹಾರ್ಧತೆಗೆ ಸಹಕರಿಸಬೇಕೆಂದು ವಿನಂತಿಸಿದರು.

ಕ್ರೈಸ್ತ ಸಂಸ್ಥೆಗಳನ್ನು ರಕ್ಷಣೆ ಮಾಡಬೇಕು, ಕ್ರೈಸ್ತ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರ ನೆರವು ನೀಡುವ ಜೊತೆಗೆ ಯೆರೂಸಲೇಮ್ ಯಾತ್ರೆಗೆ ಕ್ರೈಸ್ತರಿಗೆ ಆರ್ಥಿಕ ನೆರವು ನೀಡಬೇಕೆಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕ್ರೈಸ್ತರ ಮಹಾಸಭಾ ಮುಖಂಡರುಗಳಾದ ಸುಂದರಬಾಬು, ರಮೇಶ್‌ಪ್ರಾನ್ಸಿಸ್, ಸುರೇಶ್‌ಜಾಕೋಬ್, ವಿ.ಪಿ. ರಂಗ ಉಪಸ್ಥಿತರಿದ್ದರು.

Protestant Christian Conference demands release of outstanding funds

Share

Leave a comment

Leave a Reply

Your email address will not be published. Required fields are marked *

Don't Miss

ದಲಿತ ಸಂಘಟನೆಗಳ ಒಕ್ಕೂಟದ ವಿಭಿನ್ನ ಹೋರಾಟ

ಚಿಕ್ಕಮಗಳೂರು : ನಗರ ಸಮೀಪದ ಗೌಡನಹಳ್ಳಿ ವಾಸಿ ಮಂಜುನಾಥ್ ಯಾನೆ ಹೇಮಂತ್ ಎಂಬುವವರಿಗೆ ಸೇರಿದ ಜೆ.ಸಿ.ಬಿ ಯನ್ನು ಹೆಚ್.ಡಿ.ಎಫ್.ಸಿ ಬ್ಯಾಂಕ್ ಸೀಜ್ ಮಾಡಿ ಅಕ್ರಮ ಮಾರಾಟ ಮಾಡಿದ್ದು, ಕಳೆದ ೧ ತಿಂಗಳಿನಿಂದ...

ಅರವಿಂದ್ ಕೇಜ್ರವಾಲ್ ದೋಷಮುಕ್ತ ಪಕ್ಷಕ್ಕೆ ಸಂದ ಜಯ

ಚಿಕ್ಕಮಗಳೂರು : ಕೇಂದ್ರ ಸರ್ಕಾರದ ಪಿತೂರಿಯಿಂದ ದೆಹಲಿಯ ಅಬಕಾರಿ ಹಗರಣದಲ್ಲಿ ಸಿಲುಕಿಸಲಾಗಿದ್ದ ಅರವಿಂದ್ ಕೇಜ್ರವಾಲ್ ಮತ್ತು ಇತರ ೨೩ ನಾಯಕರನ್ನು ದೆಹಲಿಯ ನ್ಯಾಯಾಲಯವು ಕೋರ್ಟ್ ದೋಷಮುಕ್ತಗೊಳಿಸಿರುವುದು ಪಕ್ಷಕ್ಕೆ ಸಂದ ಜಯವಾಗಿದೆ ಎಂದು...

Related Articles

ಇಂದು ಪ್ರಾಣೇಶ್ ವಿಧಾನ ಪರಿಷತ್ ಭವಿಷ್ಯ ನಿರ್ಧಾರವೇ….?

ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಆಯ್ಕೆಯಾಗಿರುವ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ವಿರುದ್ಧ...

ಎಐಟಿಯುಸಿ ಕಾರ್ಯಕರ್ತೆಯರಿಗೆ ಸೀರೆ ಬದಲು, ಗೌರವಧನಕ್ಕೆ ಮನವಿ

ಚಿಕ್ಕಮಗಳೂರು:  ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸೀ ರೆ ನೀಡುವ ಬದಲು, ೧೫೦೦೦ ರೂ.ಗಳು ಗೌರವಧನ...

ರೈತರ ಮೇಲಿನ ಪ್ರಕರಣ ಹಿಂದಕ್ಕೆ ಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ

ಚಿಕ್ಕಮಗಳೂರು: ತುಂಗಭದ್ರಾ ಎಡದಂಡೆ ಭಾಗದ ರೈತರಿಗೆ ನೀರು ಹರಿಸಬೇಕು ಎಂದು ಹೋರಾಟ ನಡೆಸಿದ ರೈತ ಮುಖಂಡರ...

ಇಂದಿನಿಂದ ಆರೋಗ್ಯ ಇಲಾಖೆಯ ಅಧಿಕಾರಿ ನೌಕರರು ಅರ್ನಿದಿಷ್ಟಾವಧಿ ಮುಷ್ಕರ

ಚಿಕ್ಕಮಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಾ.೧೧ ರಿಂದ ೧೫ ರವರೆಗೆ ಸಮಸ್ತ ಆರೋಗ್ಯ ಇಲಾಖೆಯ...