Home namma chikmagalur ಅಭಿವೃದ್ಧಿ ಕೆಲಸಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ
namma chikmagalurHomeLatest News

ಅಭಿವೃದ್ಧಿ ಕೆಲಸಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ

Share
Share

ಚಿಕ್ಕಮಗಳೂರು: ಮುಖ್ಯ ಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರದ ವಿಶೇಷ ಅನುದಾನವನ್ನು ನಗರಕ್ಕೆ ನೀಡಿದ್ದು ಅದರ ಭಾಗವಾಗಿ ರಸ್ತೆ ಡಾಂಬರೀಕರಣಕ್ಕೆ ಗುದ್ಧಲಿ ಪೂಜೆ ನೆರೆವೇರಿಸಲಾಗುತ್ತಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

ಅವರು ಇಂದು ಹಿರೇಮಗಳೂರು ಮುಖ್ಯ ರಸ್ತೆಗೆ ೩೩.೭೦ ಕಲ್ಯಾಣ ನಗರ ರಸ್ತೆ ಕಾಮಗಾರಿಗೆ ೩೬.೦೦, ಹೌಸಿಂಗ್ ಬೋರ್ಡ್ ರಸ್ತೆ ಕಾಮಗಾರಿಗೆ ೨೫.೦೦ ವೆಚ್ಚದಲ್ಲಿ ವಿವಿಧ ರಸ್ತೆ ಡಾಂಬರೀಕರಣಕ್ಕೆ ಶಂಕುಸ್ಥಾಪನೆ ನೆರೆವೇರಿಸಿ ಮಾತನಾಡಿ ಚಿಕ್ಕಮಗಳೂರು ನಗರದಲ್ಲಿ ಹಲವು ರಸ್ತೆಗಳು ಗುಂಡಿ ಬಿದ್ದಿದ್ದು, ನನ್ನ ಹುಟ್ಟೂರು ಆದ ಹಿರೇಮಗಳೂರಿನ ಮುಖ್ಯ ರಸ್ತೆ ಅತಿ ಹೆಚ್ಚು ಗುಂಡಿ ಬಿದ್ದು ಹಾಳಾಗಿದ್ದು ಸರ್ಕಾರದ ವಿಶೇಷ ಅನುದಾನದಡಿ ೩೩.೭೦ ಲಕ್ಷ ರೂ ವೆಚ್ಚದಲ್ಲಿ ಡಾಂಬರೀಕರಣ ಮಾಡಲಾಗುತ್ತಿದೆ, ನಂತರ ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿಗೆ ಹಂತ-ಹಂತವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ನಾವು ಓದಿದ ಶಾಲೆಯ ೧ ರಿಂದ ೭ನೇ ತರಗತಿಗಳನ್ನು ಆಧುನಿಕ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ ಹಾಗೂ ಕೋದಂಡ ರಾಮ ಸ್ವಾಮಿ ದೇವಾಲಯದ ಜೊತೆಗೆ ಹಲವಾರು ದೇವಾಲಯಗಳ ಪುನಶ್ಚೇತನ ಕಾರ್ಯ ಪ್ರಾರಂಭಗೊಂಡಿದ್ದು ಶೀಘ್ರದಲ್ಲಿ ಮುಕ್ತಾಯ ಗೊಳಿಸಲಾಗುವುದು, ಬಡವರ ಪರವಾದ ೫ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರ ಪರವಾದ ಕೆಲಸಗಳನ್ನು ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ರವರ ನೇತೃತ್ವದ ಸರ್ಕಾರ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಸೈಕಲ್ ತುಳಿ ಸಮಸ್ಯೆ ತಿಳಿ ಎಂದು ಸೈಕಲ್‌ನಲ್ಲಿ ನಗರ ಪ್ರದಕ್ಷಿಣೆ ಮಾಡುವ ಮೂಲಕ ನಗರದ ಸಮಸ್ಯೆಯನ್ನು ಪ್ರಾಮಾಣಿಕವಾಗಿ ತಿಳಿದುಕೊಳ್ಳುವ ಕೆಲಸವನ್ನು ಮಾಡಲಾಗುತ್ತಿದೆ, ನಗರದ ನಾಗರೀಕರಿಂದ ಉತ್ತಮ ಸ್ಪಂದನೆಯು ದೋರಕಿದೆ, ಸ್ಥಳದಲ್ಲಿಯೇ ಅವರ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನವನ್ನು ಸಹ ಮಾಡಲಾಗುತ್ತಿದೆ ಎಂದರು.

ಹಿರೇಮಗಳೂರು ಶ್ರೀದೇವಿ ಯುವಕ ಸಂಘದಿಂದ ನಮ್ಮ ರಾಜಕೀಯ ಜೀವನ ಪ್ರಾರಂಭಗೊಂಡು ಶ್ರೀ ಕೊದಂಡ ರಾಮ ಸ್ವಾಮಿಯ ಸಂಚಾಲಕನಾಗಿ ಇಂದು ೭ ಕೋಟಿ ಜನಸಂಸ್ಯೆಯಲ್ಲಿ ೨೨೪ ಜನರು ಮಾತ್ರ ವಿಧಾನ ಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಅವಕಾಶವಿದ್ದು, ಅವರಲ್ಲಿ ನಾನು ಒಬ್ಬನಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಪ್ರಪಂಚ ಇರುವ ವರೆಗೂ ದಾಖಲೆಯಲ್ಲಿ ಉಳಿಯುವುದಾಗಿ ತಿಳಿಸಿದರು.

ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ ಶಾಸಕರು ೨೭.೫ ಕೋಟಿ ರೂಗಳ ಅನುದಾನ ತಂದು ನಗರದ ಎಲ್ಲಾ ರಸ್ತೆಗಳ ಡಾಂಬರೀಕರಣಕ್ಕೆ ಚಾಲನೆ ನೀಡಲಾಗುತ್ತಿದೆ, ಇದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಲಲಿತಾ ಬಾಯಿ, ಸದಸ್ಯರಾದ ಎ,ಸಿ ಕುಮಾರೆಗೌಡ, ಕವಿತಾ ಶೇಖರ್, ಅರುಣ್ ಕುಮಾರ್, ವರಸಿದ್ಧಿ ವೇಣುಗೋಪಾಲ್, ಇಂದಿರಾ ಶಂಕರ್, ಪರಮೇಶ್ ರಾಜ್ ಅರಸ್, ಗುರುಮಲ್ಲಪ್ಪ, ಲಕ್ಷ್ಮಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜೇಗೌಡ, ಗ್ರಾಮಸ್ಥರಾದ ಹೆಚ್.ಎಂ ನಾರಾಯಣ್, ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತರಾದ ಸುರೇಶ್, ಕಾಂಗ್ರೆಸ್ ಮುಖಂಡರಾದ ರಾಮಚಂದ್ರ, ಜಗಧೀಶ್, ಗಂಗಾಧರ್, ಶಿವಣ್ಣ, ರಮೇಶ್, ಶಿವಣ್ಣ, ಸುರೇಶ್, ವೆಂಕಟೇಶ್, ಯೋಗೀಶ್, ಲೋಕಣ್ಣ, ಚಂದ್ರಪ್ಪ, ಪ್ರಸಾದ್ ಅಮೀನ್, ಪುಟ್ಟಸ್ವಾಮಿ, ರಾಮಣ್ಣ, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Public cooperation is needed for development work.

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...