Home Latest News ಬಸವನಕೋಡಿ ಸರ್ಕಾರಿ ಶಾಲೆಯಲ್ಲಿ ಜನ ಸಂಪರ್ಕ ಸಭೆ
Latest NewschikamagalurHomenamma chikmagalur

ಬಸವನಕೋಡಿ ಸರ್ಕಾರಿ ಶಾಲೆಯಲ್ಲಿ ಜನ ಸಂಪರ್ಕ ಸಭೆ

Share
Share

ಚಿಕ್ಕಮಗಳೂರು:  ಈಶ್ವರಹಳ್ಳಿ, ಸಿಂಧಿಗೆರೆ ಮತ್ತು ಕಳಸಾಪುರ ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ೪.೯ ಕೋಟಿ ರೂ.ಗಳ ಅನುದಾನದಲ್ಲಿ ದೇವಸ್ಥಾನ, ಸಮುದಾಯ ಭವನ, ಕಾಂಕ್ರ್ರೀಟ್ ರಸ್ತೆ, ಚರಂಡಿ ಮುಂತಾದ ಅಭಿವೃದ್ಧಿ ಕೆಲಸ ಕೈಗೊಳ್ಳಲಾಗಿದೆ ಎಂದು ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ.ತಮ್ಮಯ್ಯ ತಿಳಿಸಿದರು.

ಚಿಕ್ಕಮಗಳೂರು ತಾಲ್ಲೂಕು ಬಸವನಕೋಡಿ ಸರ್ಕಾರಿ ಶಾಲೆಯಲ್ಲಿ ಇಂದು ನಡೆದ ಈಶ್ವರಹಳ್ಳಿ ಕಳಸಾಪುರ ಮತ್ತು ಸಿಂದಿಗೆರೆ ಗ್ರಾಮ ಪಂಚಾಯಿತಿಗಳ ಜನ ಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಅಭಿವೃದ್ಧಿ ಕಾರ್ಯಗಳ ಜೊತೆಗೆ ಬಡವರ ಪರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವುದರಲ್ಲಿ ಸರ್ಕಾರ ಹಿಂದೆ ಬೀಳುವುದಿಲ್ಲ. ಈ ಭಾಗದ ಸುಮಾರು ಒಂದು ಸಾವಿರ ಜನರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಬರುತ್ತಿಲ್ಲ ಎನ್ನುವ ಮಾಹಿತಿ ಇದೆ. ಇದಕ್ಕೆ ಬೇರೆ ಬೇರೆ ಕಾರಣಗಳಿರಬಹುದು. ಅಂಥ ಪ್ರಕರಣಗಳು ಇದ್ದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಮೂಲಕ ಸಮಸ್ಯೆ ಬಗೆಹರಿಸಿ ಈ ಯೋಜನೆಯ ಹಣ ಒದಗಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಜನರ ಸಮಸ್ಯೆ ಪರಿಹರಿಸುವಲ್ಲಿ ಜನಸಂಪರ್ಕ ಸಭೆ ಸಹಕಾರಿಯಾಗಲಿದೆ. ಜನಸಾಮಾನ್ಯರಿಗೆ ಜನಸಂಪರ್ಕ ಸಭೆಯ ಸದುಪಯೋಗ ಆಗಬೇಕು ಎಂದರೆ ಸರ್ಕಾರ ಬಡವರು, ದೀನದಲಿತರು, ಹಾಗೂ ಮಹಿಳೆಯರನ್ನು ಮುನ್ನೆಲೆಗೆ ತರುವ ಸಲುವಾಗಿ ಕೈಗೊಂಡಿರುವ ಯೋಜನೆಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.

ನಮ್ಮ ವ್ಯವಸ್ಥೆಯಲ್ಲಿರುವ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಅದರಲ್ಲೂ ಶಾಸಕಾಂಗ ಮತ್ತು ಕಾರ್ಯಾಂಗ ಹೊಂದಾಣಿಕೆಯಿಂದ ಕೆಲಸ ಮಾಡಿದರೆ ಮಾತ್ರ ಸರ್ಕಾರದ ಆಶಯಗಳು, ಯೋಜನೆಗಳು ಜನರಿಗೆ ಸಮರ್ಪಕವಾಗಿ ತಲುಪುತ್ತವೆ. ತಾಲ್ಲೂಕು ಮಟ್ಟದ ಅಧಿಕಾರಿಗಳು ಜನರ ಸಮೀಪವೇ ಹೋಗಿ ಅವರ ಸಮಸ್ಯೆ ಆಲಿಸಿ ಅದಕ್ಕೆ ಪರಿಹಾರ ನೀಡಬೇಕೆನ್ನುವ ಕಾರಣಕ್ಕಾಗಿಯೇ ಆರಂಭವಾದ ಪರಿಕಲ್ಪನೆ ಜನಸಂಪರ್ಕ ಸಭೆ ಎಂದರು.

ಜನರಿಗೆ ಸಂಧ್ಯಾ ಸುರಕ್ಷಾ ಯೋಜನೆ, ಅಂಗವಿಕಲರ ಕಲ್ಯಾಣ ಯೋಜನೆ, ತಾಲ್ಲೂಕು ಕಚೇರಿಯಲ್ಲಿ ರೈತರಿಗೆ ಖಾತೆ ಮಾಡಿಸುವುದು, ಬಿ.ಪಿ.ಎಲ್. ಕಾರ್ಡ್ ವಿತರಣೆ ಇನ್ನು ಮುಂತಾದ ಸಮಸ್ಯೆಗಳನ್ನು ಆಲಿಸಿ ಆಯಾ ಅಧಿಕಾರಿಗಳಿಂದ ಆ ಸಮಸ್ಯೆಗೆ ಪರಿಹಾರ ಒದಗಿಸುವ ಕೆಲಸ ಈ ಸಭೆಗಳ ಮುಖಾಂತರ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಕಳಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಧಾ, ಈಶ್ವರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜಮ್ಮ, ಸಿಂದಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ನಟೇಶ್ ಬಗರ್ ಹುಕುಂ ಸದಸ್ಯ ಕೆಂಗೇಗೌಡ ತಹಸೀಲ್‌ದಾರ್ ರೇಷ್ಮಾ ತಾಲಕ್, ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಜಯಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Public relations meeting held today at Basavanakodi Government School

Share

Leave a comment

Leave a Reply

Your email address will not be published. Required fields are marked *

Don't Miss

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್ ಯೋಜನೆಯಡಿ ಬೋರ್‌ವೆಲ್ ಕಾಮಗಾರಿ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯೊಂದಿಗೆ ಮಾಡಿಕೊಂಡಿದ್ದ...

ಅಕ್ರಮ ಮದ್ಯ ಮಾರಾಟ-ಐವರು ಆರೋಪಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಮದ್ಯ ಮಾರಾಟ ಹಾಗೂ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಅಡ್ಡೆಗಳ ಮೇಲೆ ಪೊಲೀಸರು ಬಿರುಗಾಳಿ ದಾಳಿ ನಡೆಸಿದ್ದು, ಮಹಿಳೆ ಸೇರಿ ಐವರು ಆರೋಪಿಗಳನ್ನು...

Related Articles

ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಲೋಕಾರ್ಪಣೆ

ಚಿಕ್ಕಮಗಳೂರು: 105 ವರ್ಷ ಹಳೆಯ ವಿಶ್ವವಿದ್ಯಾಲಯ ವಿದ್ಯಾ ಶಾಲೆಯ ನವೀಕೃತ ಕಟ್ಟಡ ಹಾಗೂ ಆಟದ ಮೈದಾನ...

ಎರಡು ದೇವಸ್ಥಾನಗಳ ಬೀಗ ಒಡೆದು ಚಿನ್ನಾಭರಣ ಕಳವು

ಚಿಕ್ಕಮಗಳೂರು: ಒಂದೇ ದಿನ ಎರಡು ದೇವಸ್ಥಾನಗಳ ಬೀಗ ಒಡೆದು ನಗದು ಹಾಗೂ ಚಿನ್ನಾಭರಣಗಳನ್ನು ದೋಚಿರುವ ಘಟನೆ...

ನಗರದಲ್ಲಿ ಗ್ಯಾಂಗ್ ವಾರ್ ಸ್ವಯಂಪ್ರೇರಿತ ಪ್ರಕರಣ ದಾಖಲು

ಚಿಕ್ಕಮಗಳೂರು: ನಗರದ ಐ.ಜಿ ರಸ್ತೆಯಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವಂತೆ ಯುವಕರ ಗುಂಪೊಂದು ಭೀಕರವಾಗಿ ಬಡಿದಾಡಿಕೊಂಡಿರುವ...

ಸತ್ತಿಹಳ್ಳಿ ಗ್ರಾಮದಲ್ಲಿ ಪತಿಯಿಂದ ಪತ್ನಿಯ ಮೇಲೆ ಹಲ್ಲೆ

ಚಿಕ್ಕಮಗಳೂರು: ಕುಡಿತದ ದಾಸನಾಗಿ, ಹೆಂಡತಿಯ ನಡತೆಯ ಮೇಲೆ ಇಲ್ಲಸಲ್ಲದ ಅನುಮಾನ ಪಟ್ಟು ಸೌದೆ ಬಡಿಗೆ ಹಾಗೂ...