Home namma chikmagalur ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಮೂವರು ಮಹಿಳೆಯರ ಸಾಧನೆಯ ಮೆಲುಕು
namma chikmagalur

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಮೂವರು ಮಹಿಳೆಯರ ಸಾಧನೆಯ ಮೆಲುಕು

Share
Share

ಚಿಕ್ಕಮಗಳೂರು : ಜಿಲ್ಲೆಗೆ ನಾಲ್ಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರಕಿರುವುದು ಜಿಲ್ಲೆಯ ಜನರಿಗೆ ಖುಷಿ ತಂದಿದೆ. ಜಾನಪದ ಕಲಾವಿದೆ ಮುಗಳಿ ಲಕ್ಷ್ಮೀದೇವಮ್ಮ ಮತ್ತು ಸಾಹಿತಿ, ಪತ್ರಕರ್ತರು ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಲಲಿತಾ ನಾಯಕ್ ಕಡೂರಿನ ತಂಗಲಿ ತಾಂಡ್ಯದವರು ಇವರುಗಳಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರೆತಿವೆ. ಸುವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಅಜ್ಜಂಪುರ ತಾಲ್ಲೂಕಿನ ಗಡಿಹಳ್ಳಿಯ ಭಾಗ್ಯಮ್ಮ ಮತ್ತು ಮೂಡಿಗೆರೆ ತಾಲೂಕಿನ ಮಡ್ಡಿಕೆರೆ ಗೋಪಾಲ್ ರವರಿಗೆ ದೊರೆತಿವೆ.

ಲಕ್ಷ್ಮೀದೇವಮ್ಮರ ಸೇವೆಯನ್ನು ಗುರುತಿಸಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ಕೊಡಲೆಬೇಕು ಎಂದು ನ್ಯೂಸ್ ಕಿಂಗ್ ನಲ್ಲಿ ಬರೆದು ಆಗ್ರಹಿಸಲಾಗಿತ್ತು. ಕಳೆದ ಐವತ್ತು ವರ್ಷಗಳಿಂದ ಎಡಬಿಡದೆ ಜನಪದ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಲಕ್ಷ್ಮಕ್ಕನಿಗೆ ಪ್ರಶಸ್ತಿ ನೀಡಿರುವುದು ಪ್ರಶಸ್ತಿ ಮೌಲ್ಯ ಹೆಚ್ಚಿದಂತಾಗಿದೆ.

ಬಿ.ಟಿ.ಲಲಿತಾ ನಾಯಕ್ ಕಡೂರು ತಾಲ್ಲೂಕಿನ ತಂಗಲಿ ತಾಂಡ್ಯದವರು. ವಿದ್ಯಾರ್ಥಿ ದಿಸೆಯಿಂದಲ್ಲೆ ಚುರುಕಾಗಿದ್ದ ಲಲಿತಾ ನಾಯಕ್ ಲಂಕೇಶ್ ಪತ್ರಿಕೆಯಲ್ಲಿ ಬರಹದ ಮೂಲಕ ಗುರುತಿಸಿಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿ ಕೊಂಡಿದ್ದವರನ್ನು ಗುರುತಿಸಿ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ವಿಧಾನ ಪರಿಷತ್ ಗೆ ನೇಮಕ ಮಾಡಿ ನಂತರ ದೇವದುರ್ಗ ಕ್ಷೇತ್ರದಿಂದ ವಿಧಾನ ಸಭೆಗೆ ಅಯ್ಕೆ ಆಗಿ ಇಂದು ಕೂಡ ಸಾಮಾಜಿಕ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿ ಸಕ್ರಿಯವಾಗಿದ್ದಾರೆ ಇವರಿಗೆ ಪ್ರಶಸ್ತಿ ದೊರಕಿರುವುದು ಸಹಾ ಪ್ರಶಸ್ತಿಯ ಗೌರವ ಹೆಚ್ಚಿದೆ.

ಇನ್ನು ಜಿಲ್ಲೆಯ ಗಡಿಹಳ್ಳಿ ಗ್ರಾಮದ ಭಾಗಮ್ಮ ಗೀ,ಗೀ ಪದ, ಜಾನಪದ ಮತ್ತು ಸೋಬಾನೆ ಹಾಡುಗಳನ್ನು ಲೀಲಾಜಾಲವಾಗಿ ಹಾಡುವ ಕಲೆಯನ್ನು ಕರತಲಾಮಲಕ ಮಾಡಿಕೊಂಡವರು ಇವರಿಗೆ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ನೀಡಲು ಗುರ್ತಿಸಿದ ಸರ್ಕಾರವನ್ನು ಅಭಿನಂದಿಸಬೇಕು.

ಮಡ್ಡಿಕೆರೆ ಗೋಪಾಲ್ ಮೈಸೂರಿನಲ್ಲಿ ವಕೀಲರಾಗಿ ಸಾಹಿತ್ಯ ಕ್ಷೇತ್ರದಲ್ಲೂ ಅಸಕ್ತಿ ಹೊಂದಿ ನಾಡ ನುಡಿಯ ಹೋರಾಟದಲ್ಲಿ ತೊಡಗಿಸಿಕೊಂಡಿರವ ಇವರು ಮೈಸೂರು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಎರಡನೇ ಬಾರಿ ಅಯ್ಕೆಯಾಗಿ ಜನಾನುರಾಗಿಯಾಗಿರುವ ಗೋಪಾಲ್ ಗೆ ಸುವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಅಯ್ಕೆಮಾಡಿದ ಸರ್ಕಾರ ಕ್ರಮವನ್ನು ಜಿಲ್ಲೆಯ ಜನ ಶ್ಲಾಘಿಸಿದ್ದಾರೆ. ಮೂವರು ಮಹಿಳೆಯರನ್ನು ಅಯ್ಕೆಮಾಡಿರುವುದು ದಾಖಲೆಯೂ ಆಗಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...