Home namma chikmagalur chikamagalur ಡ್ರೋನ್ ಕ್ಯಾಮರಾದಲ್ಲಿ ಮರಿಗಳ ಜೊತೆ ಆನೆಗಳ ಸಂಚಾರದ ಅಪರೂಪದ ದೃಶ್ಯ
chikamagalurHomeLatest Newsnamma chikmagalur

ಡ್ರೋನ್ ಕ್ಯಾಮರಾದಲ್ಲಿ ಮರಿಗಳ ಜೊತೆ ಆನೆಗಳ ಸಂಚಾರದ ಅಪರೂಪದ ದೃಶ್ಯ

Share
Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೆಲ ದಿನಗಳಿಂದ ಕಾಡಾನೆಗಳ ಹಾವಳಿ ಜೋರಾಗಿದ್ದು, ಜನ ಮನೆಯಿಂದ ಹೊರಬಂದು ರಸ್ತೆ ನಡೆಯುವುದಕ್ಕೆ ಭಯ ಪಡುತ್ತಿದ್ದಾರೆ. ಹಲವು ಕಡೆಗಳಲ್ಲಿ ಕಾಡಾನೆಗಳು ದಾಂಧಲೆ ನಡೆಸುತ್ತಿರು ಘಟನೆಗಳು ವರದಿಯಾಗಿವೆ. ಇದರ ನಡುವೆ ಈಗ ಅಪರೂಪದ ದೃಶ್ಯವೊಂದು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಹೌದು ಆನೆಗಳು ತಮ್ಮ ಮರಿಗಳನ್ನು ಬಹಳ ಕಾಳಜಿಯಿಂದ ಕರೆದುಕೊಂಡು ಜೊತೆಯಾಗಿ ಸಾಗುತ್ತಿರುವ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಮೂಡಿಗೆರೆ ತಾಲೂಕಿನ ಜಿ.ಹೊಸಳ್ಳಿ-ಕಸ್ಕೆಬೈಲು ಗ್ರಾಮದಲ್ಲಿ ಆನೆಗಳು ಮರಿಗಳ ಜೊತೆ ಬಹಳ ಜಾಗರೂಕತೆಯಿಂದ ಸಂಚರಿಸುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಅನೇಕರು ತಮ್ಮ ಮರಿಗಳ ಬಗ್ಗೆ ಬಹಳ ಕಾಳಜಿಯಿಂದ ಇರುತ್ತವೆ. ತಮ್ಮ ಮರಿಗಳ ಸುರಕ್ಷತೆ ಅವುಗಳ ಪ್ರಮುಖ ಆದ್ಯತೆಯಾಗಿದ್ದು, ಅದನ್ನು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾದ ವೀಡಿಯೋದಲ್ಲಿ ಕಾಣಬಹುದಾಗಿದೆ.
ಇತ್ತ ಚಿಕ್ಕಮಗಳೂರಿನ ಹಲವು ಭಾಗಗಳಲ್ಲಿ ಕಾಡಾನೆ ಹಾವಳಿ ಜೋರಾಗಿದ್ದು, ಒಂದೆರಡು ವರ್ಷದ ಅಡಿಕೆ ತೋಟದಲ್ಲಿ ಕಾಡಾನೆಗಳ ಸಂಚಾರದಿಂದ ಅಡಿಕೆ ಗಿಡಗಳು ಧ್ವಂಸಗೊಂಡಿವೆ. ಕಾಡಾನೆಗಳ ನಿರಂತರ ಹಾವಳಿಯಿಂದ ಗ್ರಾಮಸ್ಥರು ಕಂಗೆಟ್ಟಿದ್ದು, ತೋಟಗಳಲ್ಲಿ ಕೂಲಿ ಕೆಲಸಕ್ಕೂ ಹೋಗುವುದಕ್ಕೆ ಭಯಪಟ್ಟು ಮನೆಯಲ್ಲಿ ಕಳೆಯುವಂತಾಗಿದೆ.
ಕೂಡಲೇ ಆನೆ ಹಾವಳಿಗೆ ಶಾಶ್ವತ ಬ್ರೇಕ್ ಹಾಕುವಂತೆ ಜನರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ. ನಿನ್ನೆಯಷ್ಟೇ ಮೂಡಿಗೆರೆಯಲ್ಲಿ 70ಕ್ಕೂ ಹೆಚ್ಚು ಕಾಡಾನೆಗಳು ಬೀಡು ಬಿಟ್ಟಿದ್ದವು. ಸ್ಥಳೀಯವಾಗಿ ಬೀಟಮ್ಮ, ಭೀಮ ಎಂಬ ಹೆಸರಿನ ಗುಂಪಿನ ಕಾಡಾನೆಗಳು ಕಾಫಿ ತೋಟ, ಭತ್ತದ ಗದ್ದೆಗಳಿಗೆ ನುಗ್ಗಿ ಹಾನಿ ಮಾಡಿದ್ದವು. ಇವುಗಳ ಹಾವಳಿಯಿಂದ ರೈತರು ಕೃಷಿ ಜಮೀನಿನಲ್ಲಿ ಓಡಾಡುವುದಕ್ಕೆ ಭಯಪಡುವಂತಾಗಿದೆ.
ಒಂದೇ ತಾಲೂಕಿನಲ್ಲಿ ಹಲವು ಗುಂಪುಗಳಾಗಿ ಕಾಡಾನೆಗಳು ಸಂಚರಿಸುತ್ತಿದ್ದು, ಕಸ್ಕೆಬೈಲು, ಜಿ.ಹೊಸಳ್ಳಿ ಸೇರಿ ಅನೇಕ ಗ್ರಾಮಗಳಲ್ಲಿ ಕಾಡಾನೆಗಳು ಕೃಷಿಕರಿಗೆ ತೊಂದರೆ ಮಾಡಿದ್ದು, ಕಾಡಾನೆಗಳ ಹಾವಳಿಯಿಂದ ವಿದ್ಯಾರ್ಥಿಗಳು ಪರೀಕ್ಷೆಗ ಹೋಗುವುದಕ್ಕೂ ಭಯಪಡುವಂತಾಗಿದೆ. ಕಾಡಾನೆಗಳ ಹಾವಳಿಯಿಂದ ಕೃಷಿ ಕಾರ್ಮಿಕರಿಗೆ ಕೆಲಸ ಇಲ್ಲದಂತಾಗಿದ್ದು, ಕಾಡಾನೆ ದಾಳಿಯಿಂದ ಈಗಾಗಲೇ ಹಲವು ಸಾವು ನೋವುಗಳು ಸಂಭವಿಸಿವೆ.
ಅರಣ್ಯ ಇಲಾಖೆ, ಎಲಿಫೆಂಟ್ ಟಾಸ್ಕ್ ಫೋರ್ಸ್ ಕಾರ್ಯಾಚರಣೆ ಆನೆಗಳನ್ನು ನಾಡಿನಿಂದ ದೂರ ಅಟ್ಟುವುದಕ್ಕೆ ಪ್ರಯತ್ನ ಮಾಡುತ್ತಿದ್ದು, ಆನೆಗಳ ಹಾವಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಸ್ಕೆಬೈಲು, ಜಿ ಹೊಸಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Rare footage of elephants traveling with their calves captured on drone camera
Share

Leave a comment

Leave a Reply

Your email address will not be published. Required fields are marked *

Don't Miss

ಹಿರಿಯ ನಾಗರಿಕರಿಗೆ 3.12 ಲಕ್ಷ ರೂ ವಂಚನೆ

ಚಿಕ್ಕಮಗಳೂರು: ಸೈಬರ್ ಕ್ರಿಮಿನಲ್‌ಗಳ ಜಾಲಕ್ಕೆ ಸಿಲುಕಿ ಹಿರಿಯ ನಾಗರಿಕರೊಬ್ಬರು ಬರೋಬ್ಬರಿ 3.12 ಲಕ್ಷ ಕಳೆದುಕೊಂಡಿದ್ದಾರೆ. ನಗರದಲ್ಲಿ ವಾಸವಾಗಿರುವ 62 ವರ್ಷದ ವೆಂಕಟೇಶ್ ಇತ್ತೀಚೆಗೆ ಅವರ ಮೊಬೈಲ್‌ಗೆ ಬಂದಿದ್ದ ಒಂದು ಅಪರಿಚಿತ ಎಪಿಕೆ...

ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಶಿಫಾರಸ್ ಪತ್ರ

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳದ ಮುಖಂಡ ಶ್ಯಾಮ್ ವಿ ಗೌಡ, ಮುಸ್ಲಿಂ ಸಮುದಾಯದ 10 ಮಂದಿ ಸೇರಿ ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಜಿಲ್ಲಾ...

Related Articles

ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ

ಕಡೂರು: ತಾಲ್ಲೂಕಿನ ಸಖರಾಯಪಟ್ಟಣ ಹೋಬಳಿ ಎಸ್.ಬಿದರೆಯ ಬೆಂಕಿ ಲಕ್ಷ್ಮೀ ರಂಗನಾಥಸ್ವಾಮಿ ಬ್ರಹ್ಮ ರಥೋತ್ಸವವು ಮಂಗಳವಾರ ಶ್ರದ್ಧಾ...

ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿದ್ದ ಇಂದಿರಾ ಕ್ಯಾಂಟೀನ್ ಸ್ಥಳಾಂತರ

ಚಿಕ್ಕಮಗಳೂರು : ನಗರದ ಐ.ಜಿ. ರಸ್ತೆಯ ಬಸ್ ನಿಲ್ದಾಣದ ಸಮೀಪವಿರುವ ಇಂದಿರಾ ಕ್ಯಾಂಟೀನ್ ಅನ್ನು ಸ್ಥಳಾಂತರ...

ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳು ಮನೆ ಬಾಗಿಲಿಗೆ

ಚಿಕ್ಕಮಗಳೂರು: ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ...

ಶಾಸಕ ಜಿ.ಹೆಚ್. ಶ್ರೀನಿವಾಸ್ ವಿರುದ್ಧ ಪ್ರತಿಭಟನೆ

ಅಜ್ಜಂಪುರ : ಶಾಸಕ ಜಿ.ಹೆಚ್. ಶ್ರೀನಿವಾಸ್ ದಲಿತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು...