Home namma chikmagalur chikamagalur ನಾರ್ವೆ ಶ್ರೀ ಚಂಡಿಕೇಶ್ವರಿ ದೇವಾಲಯದಲ್ಲಿನ ಶಾಸನದ ಮರು ಅಧ್ಯಯನ
chikamagalurHomeLatest Newsnamma chikmagalur

ನಾರ್ವೆ ಶ್ರೀ ಚಂಡಿಕೇಶ್ವರಿ ದೇವಾಲಯದಲ್ಲಿನ ಶಾಸನದ ಮರು ಅಧ್ಯಯನ

Share
Share

ಜಯಪುರ: ಕೊಪ್ಪ ತಾಲೂಕಿನ ನರಸೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ‘ಶ್ರೀ ಚಂಡಿಕೇಶ್ವರಿ’ ದೇವಾಲಯದ ಹೊರ ಆವರಣದಲ್ಲಿನ ಶಾಸನ ಸಹಿತ ಸ್ಮಾರಕಶಿಲೆಯನ್ನು ದೇವಾಲಯದ ಆಡಳಿತ ಮಂಡಳಿಯ ಮನವಿಯ ಮೇರೆಗೆ, ಕುವೆಂಪು ವಿಶ್ವವಿದ್ಯಾನಿಲಯ ವಸ್ತುಸಂಗ್ರಹಾಲಯದ ಕ್ಯುರೇಟರ್ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಮಾರ್ಗದರ್ಶನದಲ್ಲಿ ಇತಿಹಾಸ ಮತ್ತು ಪುರಾತತ್ತ್ವ ಸಂಶೋಧನಾರ್ಥಿ ನ. ಸುರೇಶ್ ಕಲ್ಕೆರೆ ಮರು ಅಧ್ಯಯನಕ್ಕೆ ಒಳಪಡಿಸಿರುತ್ತಾರೆ.

ಈ ಶಾಸನ ಸಹಿತ ಸ್ಮಾರಕ ಶಿಲೆಯ ಮಾಹಿತಿಯನ್ನು ಎಪಿಗ್ರಾಫಿಯ ಕರ್ನಾಟಿಕ, ಸಂಪುಟ-೧೨ರಲ್ಲಿ ಪ್ರಕಟ ಮಾಡಿದ್ದರು ಸಹ ಪ್ರಸ್ತುತ ಅಧ್ಯಯನದಿಂದ ಹೆಚ್ಚಿನ ಮಾಹಿತಿಗಳು ಬೆಳಕಿಗೆ ಬಂದಿದ್ದು, ಕೊಪ್ಪ ತಾಲೂಕಿನ ಇತಿಹಾಸಕ್ಕೆ ಹೊಸ ವಿಚಾರಗಳು ಸೇರ್ಪಡೆಗೊಂಡಿದೆ ಎಂದು ಸಂಶೋಧನಾರ್ಥಿಯು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೊದಲಿನ ಅಧ್ಯಯನದಲ್ಲಿ ಶಾಸನದಲ್ಲಿ ಗಂಗೆಮ್ಬ, ಭೀರವೂರ, ಕಲಿಮರ ಈ ಪದಗಳ ಉಲ್ಲೇಖವಿದ್ದು ಇದೊಂದು ರಕ್ತ ಶಿಲಾಶಾಸನ ಎಂದು ಹೇಳಲಾಗಿದ್ದು, ಆದರೆ ಮರು ಅಧ್ಯಯನದಿಂದ ಈ ಶಾಸನ ಸಹಿತ ಸ್ಮಾರಕಶಿಲೆಯು ‘ಸಿಡಿತಲೆ ಕಲ್ಲು’ ಎಂದು ಕಂಡುಬಂದಿದೆ. ಅಂದರೆ ಒಬ್ಬ ವೀರನು ರಾಜ/ರಾಜ್ಯಕ್ಕಾಗಿ ತನ್ನ ಸ್ವಇಚ್ಛೆಯಿಂದ ಶಿರವನ್ನು ಕಡಿದು ಪ್ರಾಣ ತ್ಯಾಗ ಮಾಡಿರುವುದು.

ಇದನ್ನು ಬೇರೆ ಬೇರೆ ರೂಪದಲ್ಲಿಯೂ ತೋರಿಸಿರುತ್ತಾರೆ. ಪ್ರಸ್ತುತ ಇಲ್ಲಿರುವ ಸಿಡಿತಲೆ ಸ್ಮಾರಕ ಶಿಲೆಯು ಸುಮಾರು ಮೂರುವರೆ ಅಡಿ ಎತ್ತರ ಹಾಗೂ ಎರಡು ಅಡಿ ಅಗಲವನ್ನು ಹೊಂದಿದ್ದು, ೮ನೇ ಶತಮಾನದ ಅಂದರೆ ರಾ?ಕೂಟ ಕಾಲದ ಕನ್ನಡ ಲಿಪಿಯ ಶಾಸನವನ್ನು ಒಳಗೊಂಡಿದೆ. ಹಾಗಾಗಿ ಈ ಪ್ರದೇಶದಲ್ಲಿ ರಾ?ಕೂಟರ ಸಮಕಾಲೀನ ರಾಜವಂಶ/ಸಾಮಂತ ಅರಸರು ಆಳ್ವಿಕೆ ಮಾಡಿರುವುದು ದೃಢಪಡುತ್ತದೆ.

ಈ ಸ್ಮಾರಕ ಶಿಲೆಯ ಮೇಲ್ಭಾಗದಲ್ಲಿನ ಪಟ್ಟಿಕೆಯಲ್ಲಿ ಶಿರವನ್ನು ಹರಕೆ ರೂಪದಲ್ಲಿ ಕೊಟ್ಟಂತ ವೀರನಾದ ಗಂಗನು ಇಹಲೋಕದಿಂದ ಪರಲೋಕಕ್ಕೆ ಸೇರಿದ ಎಂಬುದನ್ನು ಸಾಂಕೇತಿಕವಾಗಿ ಮಂಟಪದಲ್ಲಿ ಕುಳಿತಿರುವಂತೆ ತೋರಿಸಲಾಗಿದೆ. ದೇವಾಲಯದ ಹೊರ ಆವರಣದಲ್ಲಿ ಸ್ಥಳೀಯರು ‘ಸಿಡಿಕಟ್ಟೆ’ ಎಂದು ಕರೆಯುವ ಕಲ್ಲಿನಿಂದ ನಿರ್ಮಾಣ ಮಾಡಿದ ಒಂದು ವೃತ್ತಾಕಾರದ ಕಟ್ಟೆಯಿದ್ದು, ಇಲ್ಲಿ ವೀರನಾದ ಗಂಗನು ಶಿರವನ್ನು ಕೊಟ್ಟಿರಬಹುದೆಂದು ಅಥವಾ ಆತ ಶಿರವನ್ನು ಕೊಟ್ಟ ಜಾಗದಲ್ಲಿ ನಂತರದಲ್ಲಿ ಈ ಕಟ್ಟೆಯನ್ನು ಕಟ್ಟಿಸಿರಬಹುದೆಂದು ಊಹಿಸಲಾಗಿದೆ.

ಇಲ್ಲಿರುವ ಸ್ಮಾರಕ ಶಿಲೆಯನ್ನು ದೇವಾಲಯದ ಆಡಳಿತ ಮಂಡಳಿಯವರು/ಅರ್ಚಕರು/ ಸ್ಥಳೀಯರು ಗಂಧ-ಪು?, ಎಣ್ಣೆ-ಧೂಪದಿಗಳಿಂದ ಪೂಜಿಸಿ, ಸಂರಕ್ಷಿಸಿಕೊಂಡು ಬಂದಿರುವುದು ಶ್ಲಾಘನೀಯ ಕಾರ್ಯ. ಈ ಶಾಸನಸಹಿತ ಸ್ಮಾರಕಶಿಲೆಯ ಮರು ಅಧ್ಯಯನದಲ್ಲಿ ಕಿಶನ್ ಕುಮಾರ್, ಶ್ರೇಯಾ ಶ್ರುತೇಶ್ ಆಚಾರ್ಯ ಹಾಗೂ ಆಶ್ಲೇ? ಆಚಾರ್ಯ ಮೂಡುಬೆಳ್ಳೆ ಹಾಗೂ ದೇವಾಲಯದ ಆಡಳಿತ ಮಂಡಳಿ ಮತ್ತು ಸ್ಥಳೀಯರು ಸಹಕಾರ ನೀಡಿರುತ್ತಾರೆ.

Re-study of the inscription at the Sri Chandikeshwari Temple in Norway

 

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...