ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳದ ಮುಖಂಡ ಶ್ಯಾಮ್ ವಿ ಗೌಡ, ಮುಸ್ಲಿಂ ಸಮುದಾಯದ 10 ಮಂದಿ ಸೇರಿ ಜಿಲ್ಲೆಯ ಒಟ್ಟು 15 ಮಂದಿಯ ಗಡಿಪಾರಿಗೆ ಜಿಲ್ಲಾ ಪೊಲೀಸ್ ಇಲಾಖೆಯು ಚಿಕ್ಕಮಗಳೂರು ಉಪ ವಿಭಾಗಾಧಿಕಾರಿಗೆ ಶಿಫಾರಸ್ ಪತ್ರ ರವಾನೆಯಾಗಿದೆ.
15 ಮಂದಿಯ ಪೈಕಿ ಚಿಕ್ಕಮಗಳೂರು ನಗರದ 12 ಮಂದಿ ಇದ್ದಾರೆ, ಉಳಿದ ಮೂರು ಮಂದಿ ಚಿಕ್ಕಮಗಳೂರು ಗ್ರಾಮಾಂತರ ಭಾಗದವರಾಗಿದ್ದಾರೆ ಎಂದು ತಿಳಿದು ಬಂದಿದೆ. 10 ಮಂದಿ ಮುಸ್ಲಿಂ ಸಮುದಾಯದವರು, 5 ಮಂದಿ ಹಿಂದೂಗಳಾಗಿದ್ದಾರೆ. ಎಲ್ಲರಿಗೂ ನೋಟಿಸ್ ಜಾರಿ ಮಾಡಲಾಗಿದೆ.
ಗಡಿಪಾರಿಗೆ ಶಿಫಾರಸ್ಸು ಹೆಸರುಗಳು: ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ,ಹಾಸನ ವಿಭಾಗದ ಸಹ ಸಂಯೋಜಕ ಶ್ಯಾಮ್, ನೂರ್ ಅಹಮದ್
ಫಾರೂಕ್, ಇಬ್ರಾಹಿಂ (ಇಬ್ಬು), ಇಮ್ರಾನ್, ಚಾಂದ್ ಪಾಷಾ, ಜೋಹಾರ್ ಅಂಜುಮ್, ಮೊಹಮ್ಮದ್ ಇದ್ರಿಶ್,
ಫಾಜಿಲ್ ಅಹಮದ್, ಜಾವೀದ್ ಖುರೇಶಿ, ಮೊಹಮ್ಮದ್ ಫಾಜಿಲ್, ಮೂಡಿಗೆರೆಯ ಕೌಶಿಕ್, ಬಣಕಲ್ ರುದ್ರೇಶ್ ಹಾಗೂ ಗೋಣಿಬೀಡು ಪೊಲೀಸ್ ಠಾಣೆ ಸೇರಿದಂತೆ ಹಲವಾರು ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗಿದ್ದ ಕಾರ್ತಿಕ್ಗೆ ನೋಟಿಸ್ ಜಾರಿಗೆ ಎಂದು ಮೂಲಗಳು ತಿಳಿಸಿವೆ.
ಎಲ್ಲರಿಗೂ ಮಾ.25 ರಂದು ಎಸಿ ಕಚೇರಿಯಲ್ಲಿ ವಿಚಾರಣೆ ಹಾಜರಾಗುವಂತೆ ಸೂಚಿಸಲಾಗಿದೆ.
Recommendation letter for deportation of a total of 15 people from the district
Leave a comment