Home namma chikmagalur ಜಿಲ್ಲೆಯಲ್ಲಿ ಜೂನ್‌ 13 ಮತ್ತು 14ರಂದು ‘ರೆಡ್‌ ಅಲರ್ಟ್‌‘
namma chikmagalurchikamagalurHomeLatest News

ಜಿಲ್ಲೆಯಲ್ಲಿ ಜೂನ್‌ 13 ಮತ್ತು 14ರಂದು ‘ರೆಡ್‌ ಅಲರ್ಟ್‌‘

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಜೂನ್‌ 12ರಂದು ‘ಯೆಲ್ಲೊ ಅಲರ್ಟ್’, ಜೂನ್‌ 13 ಮತ್ತು 14ರಂದು ‘ರೆಡ್‌ ಅಲರ್ಟ್‌’ ಘೋಷಣೆ ಮಾಡಲಾಗಿದೆ.

ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಬುಧವಾರ ಚಿಕ್ಕಮಗಳೂರಿನ ವಿವಿಧೆಡೆ ಧಾರಾಕಾರವಾಗಿ ಸುರಿಯಿತು. ಮಳೆ ಮುನ್ಸೂಚನೆ ಅರಿಯದೆ ಬಂದಿದ್ದ ಪಾದಚಾರಿಗಳು, ಬೀದಿ ಬದಿ ತಳ್ಳುಗಾಡಿ ವ್ಯಾಪಾರಿಗಳು ಮಳೆಯಿಂದ ತೊಯ್ದು ತೊಪ್ಪೆಯಾದರು. ರಸ್ತೆ ಮತ್ತು ಚರಂಡಿಗಳಲ್ಲಿ ನೀರು ತುಂಬಿ ಹರಿಯಿತು.

ಮಳೆ ಹೆಚ್ಚಳವಾಗುವ ಸಾಧ್ಯ‌ತೆ ಇರುವುದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ನದಿ, ತಗ್ಗು ಪ್ರದೇಶಗಳಿಗೆ ತೆರಳಬಾರದು.  ಹಳ್ಳ, ಕೆರೆ ಕಟ್ಟೆಗಳಿಗೆ ತೆರಳಬಾರದು. ಮಳೆಯಿಂದ ಧರೆ, ಗುಡ್ಡ ಕುಸಿತ ಉಂಟಾಗುವ ಸಂಭವ ಇರುವುದರಿಂದ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದ್ದಾರೆ.

ಮೂಡಿಗೆರೆಯಲ್ಲಿ ಮಳೆ ಚುರುಕು: ತಾಲ್ಲೂಕಿನಾದ್ಯಂತ ಬುಧವಾರ ಮಳೆ ಚುರುಕಾಗಿತ್ತು.

ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನದ ಬಳಿಕ ಜಿಟಿ ಜಿಟಿ ಮಳೆ ಪ್ರಾರಂಭವಾಗಿ ಸಂಜೆಯ ಬಳಿಕ ಧಾರಾಕಾರವಾಗಿ ಸುರಿಯಿತು.

ಬಾಳೂರು, ಚಾರ್ಮಾಡಿ ಘಾಟಿ ಸೇರಿದಂತೆ ವಿವಿಧೆಡೆಗಳಲ್ಲಿ ಮಳೆಯೊಂದಿಗೆ ದಟ್ಟವಾದ ಮಂಜು ಕವಿದಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು.

Red Alert in the district on June 13 and

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...