Home ಸಂಪೂರ್ಣ ವ್ಯವಸ್ಥೆಯುಳ್ಳ ಕಟ್ಟಡಕ್ಕೆ ವಸತಿ ಶಾಲೆ ಸ್ಥಳಾಂತರಿಸಲು ಮನವಿ
HomechikamagalurLatest Newsnamma chikmagalur

ಸಂಪೂರ್ಣ ವ್ಯವಸ್ಥೆಯುಳ್ಳ ಕಟ್ಟಡಕ್ಕೆ ವಸತಿ ಶಾಲೆ ಸ್ಥಳಾಂತರಿಸಲು ಮನವಿ

Share
Share

ಚಿಕ್ಕಮಗಳೂರು: ನಗರದ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯನ್ನು ಸಂಪೂರ್ಣ ವ್ಯವಸ್ಥೆಯುಳ್ಳ ಕಟ್ಟಡಕ್ಕೆ ಸ್ಥಳಾಂತರಿಸಬೇಕು ಎಂದು ಭೀಮ್ ಬ್ರಿಗೇಡ್ ಮುಖಂಡರುಗಳು ಮಂಗಳ ವಾರ ಉಪ ವಿಭಾಗಾಧಿಕಾರಿ ಬಿ.ಕೆ.ಸುದರ್ಶನ್ ಅವರಿಗೆ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಬ್ರಿಗೇಡ್ ಮುಖಂಡ ಹರೀಶ್‌ಮಿತ್ರ ಪ್ರಸ್ತುತ ಕಲ್ಯಾಣನಗರದಲ್ಲಿರುವ ಅಂ ಬೇಡ್ಕರ್ ವಸತಿ ಶಾಲೆಯು ಸಂಪೂರ್ಣ ಅವ್ಯವಸ್ಥೆ ಹಾಗೂ ಮೂಲಸೌಕರ್ಯಗಳಿಂದ ವಂಚಿತವಾಗಿರುವ ಹಿನ್ನೆಲೆಯಲ್ಲಿ ತ್ವರಿತವಾಗಿ ಬೇರೆಡೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.

ಮಳೆಗಾಲದಲ್ಲಿ ವಸತಿ ಶಾಲೆ ಕೆರೆಗಳಂತಾಗಲಿದೆ. ಅಕ್ಕಿಮೂಟೆ, ಕಂಪ್ಯೂಟರ್, ಶಾಲಾ ಹಾಗೂ ಪ್ರಿನ್ಸಿ ಪಾಲರ ಕೊಠಡಿಗಳು ಸಹ ನೀರಿನಿಂದ ತುಂಬಿರುತ್ತದೆ. ಬೇಸಿಗೆ ಕಾಲ ಬಂತೆಂದರೆ ಪಕ್ಕದಲ್ಲೇ ಸಿಮೆಂಟ್, ಇಟ್ಟಿಗೆಯ ಕಾರ್ಖಾನೆಯಿರುವ ಕಾರಣ ದೂಳುಮಯವಾಗಲಿದ್ದು ಇದರಿಂದ ಮಕ್ಕಳಿಗೆ ಕಾಯಿಲೆಗಳು ಎದು ರಾಗಲಿದೆ ಎಂದು ತಿಳಿಸಿದರು.

ಶಾಲೆಯು ಕಿಟಕಿ, ಬಾಗಿಲು ಎಲ್ಲವು ಮುರಿದು ಹಾಳಾಗಿರುವ ಕಾರಣ ಚಳಿಗಾಲದಲ್ಲಿ ಶೀತ, ಜ್ವರದ ಸಮಸ್ಯೆ ಕಾಡಲಿದೆ. ಪ್ರಮುಖವಾಗಿ ನೀರಿನ ಅವ್ಯವಸ್ಥೆಯಿಂದ ಕೂಡಿರುವುದರಿಂದ ತಿಂಗಳುಗಟ್ಟಲೇ ವಿದ್ಯಾ ರ್ಥಿಗಳು ಸ್ನಾನ ಮಾಡುತ್ತಿಲ್ಲ. ಅಲ್ಲದೇ ಬಾಡಿಗೆ ವಿಪರೀತವಾದರೂ ಕಟ್ಟಡದ ಮಾಲೀಕರು ಯಾವುದೇ ವ್ಯ ವಸ್ಥೆ ಮಾಡಿಕೊಟ್ಟಿಲ್ಲ. ಈ ಬಗ್ಗೆ ಹಲವಾರು ಬಾರಿ ಸಮಾಜ ಕಲ್ಯಾಣ ಇಲಾಖೆಗೆ ತಿಳಿಸಿದರೂ ಯಾವುದೇ ಕ್ರಮ ವಹಿಸಿಲ್ಲ ಎಂದು ದೂರಿದರು.

ಈ ವಸತಿ ಶಾಲೆಯಲ್ಲಿ ಅತಿಹೆಚ್ಚು ಪರಿಶಿಷ್ಟ ವರ್ಗದ ಬಾಲಕಿಯರಿದ್ದು, ಇದರಿಂದ ಮಕ್ಕಳ ಪಾಲಕರು ವಸತಿ ಶಾಲೆಯ ಮೇಲೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದು ಕೂಡಲೇ ಜಿಲ್ಲಾಡಳಿತ ಈ ಸಮಸ್ಯೆಗಳ ಬಗ್ಗೆ ಗಂ ಭೀರವಾಗಿ ಪರಿಗಣಿಸಿ ಗುಣಮಟ್ಟ ವ್ಯವಸ್ಥೆಯಿಂದ ಕೂಡಿರುವ ಕಟ್ಟಡಕ್ಕೆ ಶಾಲೆಯನ್ನು ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಚಾಲಕ ಬಾಲಕೃಷ್ಣ ಬಿಳೇಕಲ್ಲು, ಬ್ರಿಗೇಡ್‌ನ ಮುಖಂಡರುಗಳಾ ದ ಕಬ್ಬಿಕೆರೆ ಮೋಹನ್‌ಕುಮಾರ್, ಸತ್ಯನಾರಾಯಣ್, ಲಕ್ಷ್ಮಣಚಾರ್ ಹಾಜರಿದ್ದರು.

Request to relocate residential school to a fully equipped building

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಚಿಕ್ಕಮಗಳೂರು:  ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ ಒಳ್ಳೆಯದಾಗುತ್ತದೆ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ...

ಗುಡುಗು ಸಿಡಿಲಿನ ಆರ್ಭಟಕ್ಕೆ ಬಸ್ ತಂಗುದಾಣದನಲ್ಲಿದ್ದ ದಂಪತಿ ಗಾಯ

ಎನ್.ಆ‌ರ್.ಪುರ: ಕಾಫಿನಾಡಿನಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಗುಡುಗು ಸಿಡಿಲಿನ ಆರ್ಭಟಕ್ಕೆ ದಂಪತಿ ಗಾಯಗೊಂಡಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಸೀಗುವಾನಿ ಗ್ರಾಮದಲ್ಲಿ ಸಂಭವಿಸಿದೆ. ಮಂಜುನಾಥ ಮತ್ತು ಮಮತಾ ಎಂಬ ದಂಪತಿ ಎನ್.ಆರ್.ಪುರ...

Related Articles

ಧಾರಾಕಾರ ಮಳೆಗೆ ಕಾಫಿಸಿಟಿ ಫುಲ್ ಕೂಲ್

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು ಕಾಫಿ ಸಿಟಿ ಈಗ...

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ

ಕಳಸ: ಸರ್ಕಾರದ ಬೇಜವಾಬ್ದಾರಿತನ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶದ ತೊಡೆ ತಟ್ಟಿದ್ದಾರೆ. ಸ್ವಾತಂತ್ರ್ಯ...

ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ

ಚಿಕ್ಕಮಗಳೂರು: ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ...

ಅಜ್ಜಂಪುರದ ರಸ್ತೆ ಅಪಘಾತದಲ್ಲಿ ಚಾಲಕನ ಸಾವು

ಅಜ್ಜಂಪುರ: ಬುಕ್ಕಂಬುದಿಯಿಂದ ಅಜ್ಜಂಪುರ ರಸ್ತೆಯ ಸಿದ್ದಾಪುರ ತಿರುವಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಿದ್ದಾಪುರ...