Home Latest News 37 ಲಕ್ಷ ಕಳೆದುಕೊಂಡ ನಿವೃತ್ತ ಸರ್ಕಾರಿ ನೌಕರ
Latest NewschikamagalurCrime NewsHomenamma chikmagalur

37 ಲಕ್ಷ ಕಳೆದುಕೊಂಡ ನಿವೃತ್ತ ಸರ್ಕಾರಿ ನೌಕರ

Share
Share

ಚಿಕ್ಕಮಗಳೂರು : ನಿವೃತ್ತ ಸರ್ಕಾರಿ ನೌಕರರೊಬ್ಬರು ಡಿಜಿಟಲ್ ಅರಸ್ ಗೆ ಒಳಗಾಗಿ ೩೭ ಲಕ್ಷ ಹಣ ಕಳೆದುಕೊಂಡಿರುವ ಘಟನೆ ಜಿಲ್ಲೆಯ ಶೃಂಗೇರಿಯಲ್ಲಿ ವರದಿಯಾಗಿದೆ.

ದೆಹಲಿಯಿಂದ ಸಿಬಿಐ ಅಧಿಕಾರಿ ಸುನಿಲ್ ಗೌತಮ್ ಎಂಬ ಹೆಸರಿನಲ್ಲಿ ೮೩೧೦೬೮೧೫೬೮ ಸಂಖ್ಯೆಯಿಂದ ವಾಟ್ಸಪ್ ವಿಡಿಯೋ ಕರೆ ಮಾಡಿ, ಯಾವುದೇ ಕಾರಣಕ್ಕೂ ಕಾಲ್ ಮಾಡದಂತೆ ಸಿಬಿಐ ಐಡಿ ಕಾರ್ಡ್ ತೋರಿಸಿ, ನಿಮ್ಮ ಹೆಸರಿನಲ್ಲಿರುವ ಆಧಾರ್ ಕಾರ್ಡನ್ನು ಬೇರೊಬ್ಬರು ಉಪಯೋಗಿಸಿ ಮನಿ ಲಾಂಡರಿಂಗ್ ಮಾಡುತ್ತಿದ್ದು ಆ ಆರೋಪಿಯನ್ನು ಬಂಧಿಸಲಾಗಿದೆ.

ಈ ಕೇಸ್ ಕೋರ್ಟ್‌ನಲ್ಲಿದೆ, ಹೀಗಾಗಿ ನಿಮ್ಮ ಖಾತೆಯಲ್ಲಿರುವ ಎಲ್ಲಾ ಹಣವನ್ನು ಆರ್.ಬಿ.ಐ ನಿಂದ ಪರಿಶೀಲನೆ ಮಾಡಿಸಿ ನಿಮ್ಮ ಹಣವನ್ನು ನಿಮಗೆ ಮರಳಿ ನೀಡುವುದಾಗಿ ಹೇಳಿದ್ದರಿಂದ ಸಿಬಿಐ ಅಧಿಕಾರಿ ಎಂದು ನಂಬಿ ನಿವೃತ್ತ ನೌಕರ ಹಂತ ಹಂತವಾಗಿ ತಮ್ಮ ಬ್ಯಾಂಕ್ ಖಾತೆಯಲ್ಲಿದ್ದ ಹಣದ ಜೊತೆಗೆ ತಮ್ಮ ಪತ್ನಿಯ ಖಾತೆಯಲ್ಲಿದ್ದ ಒಟ್ಟು ೩೭ ಲಕ್ಷ ಹಣವನ್ನು ವರ್ಗಾಯಿಸಿದ್ದಾರೆ.

ಅಲ್ಲದೇ ಈ ವಿಷಯವನ್ನು ಯಾರಿಗೂ ಹೇಳದೆ ಆರು ತಿಂಗಳು ಕಳೆದರೂ ಹಣ ವಾಪಾಸ್ ಬರದೆ ಇದ್ದುದರಿಂದ ವಂಚನೆಗೆ ಒಳಗಾಗಿರುವುದು ತಿಳಿದು ಶೃಂಗೇರಿ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದಾರೆ. ಇತ್ತೀಚೆಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಒಂದು ವೇಳೆ ಯಾರಾದರೂ ಸೈಬರ್ ಕ್ರೈಂಗೆ ಒಳಗಾದರೆ ಅಂತವರು ಸಹಾಯವಾಣಿ ೧೯೩೦ ಸಂಖ್ಯೆಗೆ ಕರೆ ಮಾಡಿ ದೂರು ನೀಡಬೇಕೆಂದು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ತಿಳಿಸಿದ್ದಾರೆ.

Retired government employee loses Rs 37 lakh

Share

Leave a comment

Leave a Reply

Your email address will not be published. Required fields are marked *

Don't Miss

ಕೊಪ್ಪ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ಜಿ.ಎಸ್‌. ಬಾಲಕೃಷ್ಣ ಕರ್ತವ್ಯದಿಂದ ವಜಾ

ಚಿಕ್ಕಮಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದಂತ ಮಗುವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಂತ ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ಬಾಲಕೃಷ್ಣ ಅವರನ್ನು ಸರ್ಕಾರಿ ಸೇವೆಯಿಂದ ವಜಾಗೊಳಿಸುವಂತ ನಿರ್ಧಾರವನ್ನು...

ರೈತನಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಸಾವು – ಹೊತ್ತಿ ಉರಿದ ಬೈಕ್!

ಚಿಕ್ಕಮಗಳೂರು: ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿ ರೈತರೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು-ಕಡೂರು ರಸ್ತೆಯ ಎಐಟಿ ಸರ್ಕಲ್ ಬಳಿ ನಡೆದಿದೆ....

Related Articles

ಒಂದು ವರ್ಷದ ಅಭಿನಯ – ರಂಗ ತರಬೇತಿ ಡಿಪ್ಲೋಮಾಗೆ ಆಹ್ವಾನ

ಚಿಕ್ಕಮಗಳೂರು: ಮಂಡ್ಯ ರಮೇಶ್ ನೇತೃತ್ವದ ನಟನ ರಂಗಶಾಲೆಯ ರಂಗಭೂಮಿ ಡಿಪ್ಲೊಮಾ ೨೦೨೫-೨೬ (ಒಂದು ವರ್ಷದ ಅಭಿನಯ ಮತ್ತು...

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಒದಗಿಸಿ ನ್ಯಾಯ ದೊರಕಿಸಲು ಸಮೀಕ್ಷೆ

ತರೀಕೆರೆ: ‘ಪರಿಶಿಷ್ಟ ಜಾತಿಯಲ್ಲಿ ರುವ 101 ಜಾತಿಗಳಿಗೂ ಅವರ ಜನಸಂಖ್ಯೆಗೆ ಅನುಗುಣವಾಗಿ ಒಳ ಮೀಸಲಾತಿ ಒದಗಿಸಿ...

ಮೂಡಿಗೆರೆಯಲ್ಲಿ 9 ಜೋಡಿಗಳ ಸಾಮೂಹಿಕ ವಿವಾಹ

ಮೂಡಿಗೆರೆ: ‘ಸತ್ಯದ ಹಾದಿ ಯಲ್ಲಿ ಸಾಗುವ ಮೂಲಕ ದಂಪತಿ ಸಂಬಂಧವನ್ನು ಗಟ್ಟಿ ಮಾಡಿಕೊ ಳ್ಳಬೇಕು’ ಎಂದು...

ಕಮ್ಮರಗೋಡು ಗ್ರಾಮದ ಕೃಷಿಹೊಂಡದಲ್ಲಿ ಕಾಡಾನೆ ನೀರಾಟ

ಮೂಡಿಗೆರೆ: ಗೋಣಿಬೀಡು ಹೋಬಳಿಯ ಕಮ್ಮರಗೋಡು ಗ್ರಾಮಕ್ಕೆ ಭಾನುವಾರ ಬೆಳಿಗ್ಗೆ ಬಂದಿದ್ದ ಕಾಡಾನೆಯೊಂದು ಕೃಷಿಹೊಂಡಕ್ಕೆ ಇಳಿದು ಅರ್ಧ...