Home namma chikmagalur chikamagalur ಗಾಯಗೊಂಡು ಚಿಕಿತ್ಸೆ ಫಲಿಸದೆ ನಿವೃತ್ತ ಸೈನಿಕ ನಿಧನ
chikamagalurCrime NewsHomeLatest Newsnamma chikmagalur

ಗಾಯಗೊಂಡು ಚಿಕಿತ್ಸೆ ಫಲಿಸದೆ ನಿವೃತ್ತ ಸೈನಿಕ ನಿಧನ

Share
Share

ಕಡೂರು: ತಂದೆಯ ನಿಧನದ ಸುದ್ದಿ ಕೇಳಿ ತವರಿಗೆ ಬರುತ್ತಿದ್ದ ನಿವೃತ್ತ ಸೈನಿಕರೊಬ್ಬರು ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಡೂರು ತಾಲ್ಲೂಕಿನ ಬಂಡಿಕೊಪ್ಪಲು ನಿವಾಸಿ, ನಿವೃತ್ತ ಸೈನಿಕ ನಟೇಶ್ (35) ಮೃತಪಟ್ಟ ದುರ್ದೈವಿ. ಕಂಚುಗಾರನಹಳ್ಳಿಯಲ್ಲಿದ್ದ ಇವರ ತಂದೆ ಚನ್ನಬಸಪ್ಪ ಅವರು ವಯೋಸಹಜ ಕಾಯಿಲೆಯಿಂದ ಮೇ 28 ರಂದು ನಿಧನರಾಗಿದ್ದರು.

ಈ ವಿಷಯ ತಿಳಿದ ನಟೇಶ್ ಅಂದು ಮಧ್ಯಾಹ್ನ ಬಂಡಿಕೊಪ್ಪಲಿನಿಂದ ತಮ್ಮ ಬೈಕ್ ನಲ್ಲಿ (KA 66 L-0910) ಜಿಗಣೇಹಳ್ಳಿ ಮಾರ್ಗವಾಗಿ ಬರುತ್ತಿದ್ದರು. ಈ ವೇಳೆ ನಾಗೇನಹಳ್ಳಿ ಸಮೀಪ ರಸ್ತೆಗೆ ಇದ್ದಕ್ಕಿದ್ದಂತೆ ನಾಯಿಯೊಂದು ಅಡ್ಡ ಬಂದಿದೆ.

ಅದನ್ನು ತಪ್ಪಿಸಲು ಹೋಗಿ ನಟೇಶ್ ಜೋರಾಗಿ ಬ್ರೇಕ್ ಹಾಕಿದಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ಅಪಘಾತದ ರಭಸಕ್ಕೆ ತಲೆ ಹಾಗೂ ಹೊಟ್ಟೆಯ ಭಾಗಕ್ಕೆ ತೀವ್ರ ಪೆಟ್ಟಾಗಿದ್ದ ಅವರನ್ನು ತಕ್ಷಣ ಚಿಕ್ಕಮಗಳೂರಿನ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೆನಪೋಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಮೇ 29 ರಂದು ರಾತ್ರಿ 10 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಮೃತರ ಸಹೋದರ ಉಮೇಶ್ ಕೆ.ಸಿ. ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Retired soldier dies after being injured and treatment fails

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...