Home namma chikmagalur chikamagalur ಗಾಯಗೊಂಡು ಚಿಕಿತ್ಸೆ ಫಲಿಸದೆ ನಿವೃತ್ತ ಸೈನಿಕ ನಿಧನ
chikamagalurCrime NewsHomeLatest Newsnamma chikmagalur

ಗಾಯಗೊಂಡು ಚಿಕಿತ್ಸೆ ಫಲಿಸದೆ ನಿವೃತ್ತ ಸೈನಿಕ ನಿಧನ

Share
Share

ಕಡೂರು: ತಂದೆಯ ನಿಧನದ ಸುದ್ದಿ ಕೇಳಿ ತವರಿಗೆ ಬರುತ್ತಿದ್ದ ನಿವೃತ್ತ ಸೈನಿಕರೊಬ್ಬರು ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಡೂರು ತಾಲ್ಲೂಕಿನ ಬಂಡಿಕೊಪ್ಪಲು ನಿವಾಸಿ, ನಿವೃತ್ತ ಸೈನಿಕ ನಟೇಶ್ (35) ಮೃತಪಟ್ಟ ದುರ್ದೈವಿ. ಕಂಚುಗಾರನಹಳ್ಳಿಯಲ್ಲಿದ್ದ ಇವರ ತಂದೆ ಚನ್ನಬಸಪ್ಪ ಅವರು ವಯೋಸಹಜ ಕಾಯಿಲೆಯಿಂದ ಮೇ 28 ರಂದು ನಿಧನರಾಗಿದ್ದರು.

ಈ ವಿಷಯ ತಿಳಿದ ನಟೇಶ್ ಅಂದು ಮಧ್ಯಾಹ್ನ ಬಂಡಿಕೊಪ್ಪಲಿನಿಂದ ತಮ್ಮ ಬೈಕ್ ನಲ್ಲಿ (KA 66 L-0910) ಜಿಗಣೇಹಳ್ಳಿ ಮಾರ್ಗವಾಗಿ ಬರುತ್ತಿದ್ದರು. ಈ ವೇಳೆ ನಾಗೇನಹಳ್ಳಿ ಸಮೀಪ ರಸ್ತೆಗೆ ಇದ್ದಕ್ಕಿದ್ದಂತೆ ನಾಯಿಯೊಂದು ಅಡ್ಡ ಬಂದಿದೆ.

ಅದನ್ನು ತಪ್ಪಿಸಲು ಹೋಗಿ ನಟೇಶ್ ಜೋರಾಗಿ ಬ್ರೇಕ್ ಹಾಕಿದಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದಾರೆ. ಅಪಘಾತದ ರಭಸಕ್ಕೆ ತಲೆ ಹಾಗೂ ಹೊಟ್ಟೆಯ ಭಾಗಕ್ಕೆ ತೀವ್ರ ಪೆಟ್ಟಾಗಿದ್ದ ಅವರನ್ನು ತಕ್ಷಣ ಚಿಕ್ಕಮಗಳೂರಿನ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೆನಪೋಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಮೇ 29 ರಂದು ರಾತ್ರಿ 10 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಮೃತರ ಸಹೋದರ ಉಮೇಶ್ ಕೆ.ಸಿ. ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Retired soldier dies after being injured and treatment fails

Share

Leave a comment

Leave a Reply

Your email address will not be published. Required fields are marked *

Don't Miss

ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ ನಿಯಂತ್ರಣ ತಪ್ಪಿ ಪಲ್ಟಿ

ಚಿಕ್ಕಮಗಳೂರು: ಮಂಗಳೂರಿನಿಂದ ಹೊರನಾಡಿಗೆ ಆಗಮಿಸಿದ್ದ ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ (ಟಿಟಿ) ವಾಹನ ತಡರಾತ್ರಿ ಹೊರನಾಡು ಸಮೀಪದ ಭಾಮಿ ಅಂಗಡಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ವಾಹನದಲ್ಲಿದ್ದ ಮೂವರು ಮಕ್ಕಳು ಸೇರಿದಂತೆ...

ಭೈರಾಪುರ ಗ್ರಾಮದಲ್ಲಿ ಜಾತಿ ನಿಂದನೆ ಪ್ರಕರಣ ದಾಖಲು

ತರೀಕೆರೆ: ತಮ್ಮದೇ ಜಮೀನಿನಲ್ಲಿ ಬೇಸಾಯ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಅಕ್ರಮವಾಗಿ ಮುನ್ನುಗ್ಗಿ ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿರುವ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗ್ರಾಮದಲ್ಲಿ ಬೆಳಕಿಗೆ...

Related Articles

ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ

ಬೀರೂರು: ‘ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲದೆ ಮುಂದಿನ ಪೀಳಿಗೆಗೆ ಕೊಡುಗೆಯಾಗುವಂಥ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ’ ಎಂದು...

ಅಜ್ಜಂಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಚಿಕ್ಕಮಗಳೂರು:  ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ...

ಗುಡುಗು ಸಿಡಿಲಿನ ಆರ್ಭಟಕ್ಕೆ ಬಸ್ ತಂಗುದಾಣದನಲ್ಲಿದ್ದ ದಂಪತಿ ಗಾಯ

ಎನ್.ಆ‌ರ್.ಪುರ: ಕಾಫಿನಾಡಿನಲ್ಲಿ ಮುಂಗಾರುಪೂರ್ವ ಮಳೆಯ ಅಬ್ಬರ ಜೋರಾಗಿದ್ದು, ಗುಡುಗು ಸಿಡಿಲಿನ ಆರ್ಭಟಕ್ಕೆ ದಂಪತಿ ಗಾಯಗೊಂಡಿರುವ ಘಟನೆ...

ದಂಪತಿಯಿಂದ 70 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಖದೀಮ

ಅಜ್ಜಂಪುರ: ಅರಣ್ಯ ಇಲಾಖೆಯ ಅಧಿಕಾರಿಯಂತೆ ನಟಿಸಿ ದಂಪತಿಯನ್ನು ನಂಬಿಸಿ, ಅವರಿಂದ ಸುಮಾರು 70 ಸಾವಿರ ರೂಪಾಯಿ...