Home namma chikmagalur chikamagalur ರಾಜಕೀಯ ಸಮರವಾಗಿ ಮಾರ್ಪಟ್ಟ ರಸ್ತೆ ಕಾಮಗಾರಿ ವೀಕ್ಷಣೆ ಪ್ರಕರಣ
chikamagalurHomeLatest Newsnamma chikmagalur

ರಾಜಕೀಯ ಸಮರವಾಗಿ ಮಾರ್ಪಟ್ಟ ರಸ್ತೆ ಕಾಮಗಾರಿ ವೀಕ್ಷಣೆ ಪ್ರಕರಣ

Share
Share

ಚಿಕ್ಕಮಗಳೂರು: ರಸ್ತೆ ಕಾಮಗಾರಿ ವಿಚಾರವಾಗಿ ಆರಂಭವಾದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಬೀದಿ ಕಾಳಗವು ಇದೀಗ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ರಾಜಕೀಯ ಸಮರವಾಗಿ ಮಾರ್ಪಟ್ಟಿದೆ.

ನಗರ ಠಾಣೆಯಲ್ಲಿ ದೂರು-ಪ್ರತಿದೂರುಗಳ ಸ್ಪರ್ಧೆಯೇ ಏರ್ಪಟ್ಟಿದ್ದು, ಇದುವರೆಗೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ. ಈ ಘಟನೆಯು ನಗರ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಉಭಯ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳು ಮತ್ತಷ್ಟು ಉಗ್ರರೂಪ ಪಡೆದುಕೊಂಡಿವೆ.

ದಾಖಲಾಗಿರುವ ಪ್ರಕರಣಗಳ ಪೈಕಿ ಕಾಂಗ್ರೆಸ್, ಎಸ್‌ಡಿಪಿಐ ಹಾಗೂ ಮುಸ್ಲಿಂ ಸಂಘಟನೆಗಳಿಂದ 4 ದೂರುಗಳು ಸಲ್ಲಿಕೆಯಾಗಿದ್ದರೆ, ಬಿಜೆಪಿಯಿಂದ ಒಂದು ದೂರು ದಾಖಲಾಗಿದೆ. ಇದರೊಂದಿಗೆ ಪೊಲೀಸರು ಕೂಡ ಒಂದು ಸುಮೋಟೊ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಸದ್ಯಕ್ಕೆ ಪೊಲೀಸರ ಸುಮೋಟೊ ಪ್ರಕರಣ ಹಾಗೂ ಮುದಾಸಿರ್ ಪಾಷ ನೀಡಿದ ದೂರಿನ ಮೇರೆಗೆ ಮಾತ್ರ ಎಫ್‌ಐಆರ್ ದಾಖಲಿಸಲಾಗಿದೆ. ಧರ್ಮ ನಿಂದನೆ ಆರೋಪದ ಅಡಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್ ಕೋಟ್ಯಾನ್ ವಿರುದ್ಧ ಮುಸ್ಲಿಂ ಮುಖಂಡರು ನೀಡಿದ ದೂರಿನನ್ವಯ ಎಫ್‌ಐಆ‌ರ್ ದಾಖಲಿಸಲಾಗಿದೆ.

ಮತ್ತೊಂದೆಡೆ, ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಕೆ.ಪಿ. ವೆಂಕಟೇಶ್ ಅವರು ಕಾಂಗ್ರೆಸ್ ನಗರಸಭೆಯ ಸದಸ್ಯರಾದ ಪರಮೇಶ್ ರಾಜ್ ಅರಸ್, ಮುನೀರ್ ಹಾಗೂ ಮುಖಂಡರಾದ ಕಲಂದರ್ ಮತ್ತು ಜಾವಿದ್ ವಿರುದ್ಧ ಜಾತಿ ನಿಂದನೆ ದೂರು ನೀಡಿದ್ದಾರೆ.

ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್‌ನಿಂದಲೂ ಪ್ರತಿದೂರು ಸಲ್ಲಿಕೆಯಾಗಿದ್ದು, ಕುರವಂಗಿ ರಾಜೇಶ್ ಎಂಬುವವರು ಬಿಜೆಪಿ ಕಾರ್ಯಕರ್ತರ ವಿರುದ್ಧ ಜಾತಿ ನಿಂದನೆ ಆರೋಪ ಮಾಡಿದ್ದಾರೆ. ಇತ್ತೀಚೆಗೆ ನಗರದ ರಾಂಪುರ ರಸ್ತೆಯಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಕಾಮಗಾರಿ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಉಂಟಾದ ಗಲಾಟೆಯು, ಸದ್ಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಕಾನೂನು ಮತ್ತು ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ.

Road construction observation case turns into political battle

Share

Leave a comment

Leave a Reply

Your email address will not be published. Required fields are marked *

Don't Miss

ಬಾಲ್ಯ ವಿವಾಹ ತಡೆಯಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ

ಚಿಕ್ಕಮಗಳೂರು: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೇನಹಳ್ಳಿ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಬಾಲ್ಯ ವಿವಾಹ ತಡೆಯಲು ಹೋದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ...

ಅರಣ್ಯದಲ್ಲಿ ಅಪರಿಚಿತ ವೃದ್ಧನ ಶವ ಪತ್ತೆ 

ಕೊಟ್ಟಿಗೆಹಾರ : ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಅರಣ್ಯ ಪ್ರದೇಶದಲ್ಲಿ ಸುಮಾರು 65 ರಿಂದ 70 ವರ್ಷದೊಳಗಿನ ಅಪರಿಚಿತ ವೃದ್ಧನ ಶವ ಪತ್ತೆಯಾಗಿದೆ. ಕಳೆದ ಮೂರು–ನಾಲ್ಕು ದಿನಗಳಿಂದ ರಸ್ತೆ ಬದಿಯ...

Related Articles

ಬಿ.ಎಲ್.ಶಂಕರ್ ರ ರಾಜಕೀಯ ಹಪ ಹಪಿಗೆ ಮತ್ತೆ ಮತ್ತೆ ತಣ್ಣೀರು !

ಬಿ.ಎಲ್.ಶಂಕರ್ ಕಾಂಗ್ರೆಸ್ ನ ರಾಜ್ಯ ನಾಯಕರು ನಿಜ,ಆದರೆ ಇವರು ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ನಲ್ಲಿ ಕಡ್ಡಿ...

ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ ನಿಯಂತ್ರಣ ತಪ್ಪಿ ಪಲ್ಟಿ

ಚಿಕ್ಕಮಗಳೂರು: ಮಂಗಳೂರಿನಿಂದ ಹೊರನಾಡಿಗೆ ಆಗಮಿಸಿದ್ದ ಪ್ರವಾಸಿಗರ ಟೆಂಪೊ ಟ್ರ್ಯಾವೆಲರ್ (ಟಿಟಿ) ವಾಹನ ತಡರಾತ್ರಿ ಹೊರನಾಡು ಸಮೀಪದ ಭಾಮಿ...

ಭೈರಾಪುರ ಗ್ರಾಮದಲ್ಲಿ ಜಾತಿ ನಿಂದನೆ ಪ್ರಕರಣ ದಾಖಲು

ತರೀಕೆರೆ: ತಮ್ಮದೇ ಜಮೀನಿನಲ್ಲಿ ಬೇಸಾಯ ಮಾಡುತ್ತಿದ್ದ ಮಹಿಳೆಯೊಬ್ಬರ ಮೇಲೆ ಅಕ್ರಮವಾಗಿ ಮುನ್ನುಗ್ಗಿ ಜಾತಿ ನಿಂದನೆ ಮಾಡಿ,...

ಸೀತಾಳಯ್ಯನಗಿರಿಯಲ್ಲಿ ಜೀಪ್ ಚಾಲಕರ ಪರಸ್ಪರ ಹೊಡೆದಾಟ

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿಯ ಸಮೀಪದ ಸೀತಾಳಯ್ಯನಗಿರಿಯಲ್ಲಿ ಪ್ರವಾಸಿಗರನ್ನು ಕರೆದೊಯ್ಯುವ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ...