Home namma chikmagalur 108 ದೌರ್ಜನ್ಯ ಪ್ರಕರಣಗಳಿಗೆ 1.44 ಕೋಟಿ ರೂ. ಪರಿಹಾರ
namma chikmagalurchikamagalurHomeLatest News

108 ದೌರ್ಜನ್ಯ ಪ್ರಕರಣಗಳಿಗೆ 1.44 ಕೋಟಿ ರೂ. ಪರಿಹಾರ

Share
Share

ಚಿಕ್ಕಮಗಳೂರು: ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯದ ೧೦೮ ಪ್ರಕರಣಗಳಿಗೆ ಸಂಬಂಧಿಸಿದಂತೆ ೨೦೨೨ ರಿಂದ ೨೦೨೫ರ ಸೆಪ್ಟಂಬರ್ ೧೭ ರವರೆಗೆ ೧ ಕೋಟಿ ೪೪ ಲಕ್ಷ ೬೩ ಸಾವಿರ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಹೇಳಿದರು.

ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪರಿಶಿಷ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಜಿಲ್ಲೆಯಲ್ಲಿ ಪರಿಶಿ? ಜಾತಿ ಮತ್ತು ಪರಿಶಿ? ವರ್ಗದವರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ತಾಲ್ಲೂಕು ಮಟ್ಟದಲ್ಲಿನ ಸಮಸ್ಯೆಗಳನ್ನು ತಾಲ್ಲೂಕು ಮಟ್ಟದ ಸಮಿತಿ ಸಭೆಯಲ್ಲಿ ಚರ್ಚಿಸಿ ಪರಿಹರಿಸಿಕೊಳ್ಳುವಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ತಾಲೂಕುಗಳಲ್ಲಿ ಸಭೆ ನಡೆಸುವುದರಿಂದ ಪ್ರಕರಣಗಳ ಮೇಲಿನ ನಿಗಾಕ್ಕೆ ಹಾಗೂ ನಿಯತ್ರಣಕ್ಕೆ ತುಂಬಾ ಅನುಕೂಲವಾಗಲಿದೆ.

ಪರಿಶಿಷ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ಎಸಗಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಹಾಗೂ ದೌರ್ಜನ್ಯ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿರುವ ಪ್ರದೇಶಗಳಿಗೆ ಪೊಲೀಸ್ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ಜಾಗೃತಿ ಹಾಗೂ ಕಾನೂನಿನ ಅರಿವು ಮೂಡಿಸಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಡಾ.ವಿಕ್ರಮ್ ಅಮಟೆ ಮಾತನಾಡಿ, ದೌರ್ಜನ್ಯ ಪ್ರಕರಣಕ್ಕೆ ಒಳಗದವರು ಬಡವರು, ಕೂಲಿ ಕಾರ್ಮಿಕರೂ ಆಗಿರುತ್ತಾರೆ. ಪ್ರಕರಣ ದಾಖಲಿಸಲು ಬರುವಾಗ ಗುರುತಿನ ಚೀಟಿ, ಆಧಾರ್ ಕಾರ್ಡ್‌ಗಳನ್ನು ತರುವಂತೆ ತಿಳಿಸಿದ ಅವರು, ಬಂದು ಹೋಗುವ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆ ಭರಿಸಲಿದೆ ಎಂದು ತಿಳಿಸಿದರು.

ಮುಖಂಡರುಗಳು ತಮ್ಮ ವ್ಯಾಪ್ತಿಗೆ ಬರುವ ಸಮುದಾಯದಲ್ಲಿ ಸಭೆಯನ್ನು ಕರೆದು ಅವರಿಗೆ ಕಾನೂನಿನ ಅರಿವು ಮೂಡಿಸುವಂತೆ ಸೂಚಿಸಿದರು.
ಇತ್ತೀಚಿನ ದಿನದಲ್ಲಿ ಪೋಕ್ಸೊ ಪ್ರಕರಣ ಹೆಚ್ಚಾಗಿದ್ದು, ೧೫, ೧೬, ೧೭, ೧೮ ವರ್ಷದ ಮಕ್ಕಳು ಹೆಚ್ಚಾಗಿ ಈ ಪ್ರಕರಣಕ್ಕೆ ತುತ್ತಾಗುತ್ತಿದ್ದಾರೆ ಎಂದ ಅವರು, ಕೆಲವೊಂದು ಸಮುದಾಯದಲ್ಲಿ ಈ ಪ್ರಕರಣಗಳು ತಲೆಯೆತ್ತುತ್ತಿವೆ. ಶಾಲೆ ಬಿಟ್ಟ ಹೆಣ್ಣು ಮಕ್ಕಳನ್ನು ಶಾಲೆಗೆ ಹೋಗಲು ಪ್ರೇರೇಪಿಸಬೇಕು. ಸ್ಥಳೀಯ ಮುಖಂಡರು ಇಂತಹ ಮಕ್ಕಳನ್ನು ಗುರುತಿಸಿ ಅಧಿಕಾರಿಗಳ ಗಮನಕ್ಕೆ ತಂದರೆ ಅಂತವರನ್ನು ಪುನಃ ಶಾಲೆಗೆ ಸೇರಿಸಿ ವಿದ್ಯಾಭ್ಯಾಸ ಮುಂದುವರಿಸಲು ಕ್ರಮ ವಹಿಸುವರು ಎಂದು ಹೇಳಿದರು.

ಸಭೆಯಲ್ಲಿ ಜಿ.ಪಂ.ಉಪ ಕಾರ್ಯದರ್ಶಿ ಶಂಕರ ಕೊರವರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ಮಾಲತಿ, ಸರ್ಕಾರಿ ಅಭಿಯೋಜಕರಾದ ಲೋಹಿತಾಚಾರ್ಯ, ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರುಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

೧೯ಸಿಕೆಎಂ೧: ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ಪರಿಶಿಷ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಿಲ್ಲಾ ಮಟ್ಟದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಜಿ.ಪಂ.ಉಪ ಕಾರ್ಯದರ್ಶಿ ಶಂಕರ ಕೊರವರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಬಿ.ಮಾಲತಿ, ಸರ್ಕಾರಿ ಅಭಿಯೋಜಕರಾದ ಲೋಹಿತಾಚಾರ್ಯ, ತಾಲ್ಲೂಕುಗಳ ತಹಸೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಸಮಿತಿಯ ಸದಸ್ಯರುಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Rs 1.44 crore compensation for 108 cases of atrocities against Scheduled Castes and Scheduled Tribes

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...