Home ರಂಭಾಪುರಿ ಪೀಠದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ಕೆ 25 ಲಕ್ಷ ರೂ ಅನುದಾನ
HomechikamagalurLatest Newsnamma chikmagalur

ರಂಭಾಪುರಿ ಪೀಠದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ಕೆ 25 ಲಕ್ಷ ರೂ ಅನುದಾನ

Share
Share

ಬಾಳೆಹೊನ್ನೂರು: ರಂಭಾಪುರಿ ಪೀಠದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದಿಂದ (ಕೆಆರ್‌ಇಡಿಎಲ್‍) ₹25 ಲಕ್ಷ ಅನುದಾನ ನೀಡಲಾಗಿದೆ ಎಂದು ಕೆಆರ್‌ಇಡಿಎಲ್ ಅಧ್ಯಕ್ಷ ಟಿ.ಡಿ. ರಾಜೇಗೌಡ ಹೇಳಿದರು.

ರಂಭಾಪುರಿ ಪೀಠದಲ್ಲಿ ವೀರಸೋಮೇಶ್ವರ ಸ್ವಾಮೀಜಿಗೆ ಚೆಕ್ ಹಸ್ತಾಂತರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಂಭಾಪುರಿ ಪೀಠಕ್ಕೆ ದೇಶದ ವಿವಿಧೆಡೆಯಿಂದ ಯಾತ್ರಾರ್ಥಿಗಳು ಭೇಟಿ ನೀಡುತ್ತಿರುವುದರಿಂದ ಅಭಿವೃದ್ಧಿ ಕಾರ್ಯಗಳ ಅಗತ್ಯ ಹೆಚ್ಚಿದ್ದು, ಕಾಮಗಾರಿ ನಡೆಸಲು ಅನುಕೂಲವಾಗಲಿದೆ ಎಂದರು. ರಂಭಾ ಪುರಿ ಪೀಠಕ್ಕೆ ತೆರಳುವ ರಸ್ತೆ ಅಭಿವೃದ್ಧಿ, ರೇಣುಕಾಚಾರ್ಯರ 51 ಅಡಿ ಎತ್ತರದ ವಿಗ್ರಹ ನಿರ್ಮಾಣದ ಸ್ಥಳ ಅಭಿವೃದ್ಧಿ, ಸಮುದಾಯ ಭವನ ಅಭಿವೃದ್ಧಿ ಮಾಡಲಾಗುವುದು ಎಂದರು.

ಮುಂಗಾರು ಪೂರ್ವಸಿದ್ಧತೆ ಕುರಿತು ಪ್ರತಿಕ್ರಿಯಿಸಿದ ಅವರು, ನಾಲ್ಕೈದು ವರ್ಷಗಳಲ್ಲಿ ಈ ಭಾಗದಲ್ಲಿ ಮಳೆಯಿಂದ ಹಾನಿಯಾದ ಬಗ್ಗೆ ಗಮನದಲ್ಲಿದೆ.  ಕೇತ್ರದಲ್ಲಿ ಉಂಟಾದ ಭೂ ಕುಸಿತ, ಸೇತುವೆ, ರಸ್ತೆ, ಮನೆ, ಜೀವ ಹಾನಿ ಬಗ್ಗೆ ಮಾಹಿತಿ ಇದೆ. ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಶೀಘ್ರದಲ್ಲೇ ನಡೆಸಲಾಗುವುದು ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎಸ್. ಜಯಪ್ರಕಾಶ್, ಬಿ.ಕಣಬೂರು ಗಾಮ ಪಂಚಾಯಿತಿ ಅಧ್ಯಕ್ಷ ರವಿಚಂದ್ರ, ಸದಸ್ಯರಾದ ಎಂ.ಜೆ. ಮಹೇಶ್ ಆಚಾರ್ಯ, ಬಿ.ಸಿ. ಸಂತೋಷ್‍ ಕುಮಾರ್, ಇಬ್ರಾಹಿಂ ಶಾಫಿ, ಪಿಎಸಿಎಸ್ ನಿರ್ದೇಶಕ ಕೆ.ಕೆ. ಗೌತಮ್, ಕ್ರೀಡಾಪಟು ಒ.ಡಿ. ಸ್ಟೀಫನ್, ಶಿವಶಂಕರ್, ಕೆ.ಟಿ. ಗೋವಿಂದೇಗೌಡ, ಸುಧಾಕರ್, ಪ್ರಭಾಕರ್ ಶೆಟ್ಟಿ, ವಿನುತ್ ಭಾಗವಹಿಸಿದ್ದರು.

Rs 25 lakh grant for various development works at Rambhapuri Peetha

Share

Leave a comment

Leave a Reply

Your email address will not be published. Required fields are marked *

Don't Miss

ನೀರಿಗಾಗಿ ರೈತರು ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲಿ

ಕಡೂರು: ಜಿಲ್ಲೆಯ ಪ್ರಮುಖ ಕೆರೆಯಾದ ಅಯ್ಯನಕೆರೆ ತುಂಬಿ ಹರಿಯುವ ನೀರನ್ನು ಕೆರೆಗಳಿಗೆ ಹರಿಸುವುದರಿಂದ ಅಂತರ್ ಜಲ ಹೆಚ್ಚಿಸಿ ಕೊಳ್ಳಲು ಯೋಜನೆ ರೂಪಿಸಲಾಗುತ್ತಿದೆ ಎಂದು ರೈತರು ಹೇಳುತ್ತಾರೆ. ಭದ್ರ ಉಪ ಕಣಿವೆ ಯೋಜನೆಯ...

ಮಕ್ಕಳಪ್ರತಿಭೆ ರಾಷ್ಟ್ರಮಟ್ಟದಲ್ಲಿ ಬೆಳಗಿಸಿದ ಕ್ರೀಡಾ ಶಿಕ್ಷಕ

ತರೀಕೆರೆ: ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯಗಳ ಜೊತೆಗೆ ದೈಹಿಕ ಶಿಕ್ಷಣವು ಬಹು ಮುಖ್ಯ. ಮಕ್ಕಳ ಆಸಕ್ತಿ ಗಮನಿಸಿ ಪ್ರೋತ್ಸಾಹ ನೀಡುವುದರ ಜೊತೆಗೆ ತರಭೇತಿ ನೀಡಿದರೆ ತಾಲ್ಲೂಕು, ಜಿಲ್ಲೆ,ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕೀರ್ತಿ ಗಳಿಸಲು...

Related Articles

ಅಮೃತಮಹಲ್ ಕಾವಲ್ ಪ್ರದೇಶದ ಒತ್ತುವರಿ ತೆರವಿಗೆ ಸೂಚನೆ

ಚಿಕ್ಕಮಗಳೂರು: ಜಿಲ್ಲೆಯ ಅಮೃತಮಹಲ್ ಕಾವಲ್‌ನ ಒತ್ತುವರಿ ಪ್ರದೇಶದವನ್ನು ಕೂಡಲೇ ತೆರವುಗೊಳಿಸುವಂತೆ ಸರ್ಕಾರದ ಕಂದಾಯ ಇಲಾಖೆಯ ಪ್ರಧಾನ...

ಫೋಟೋ-ವಿಡಿಯೋಗ್ರಫಿ ಕೆನಾನ್ ಕ್ಯಾಮಾರಗಳು ಶ್ರೇಷ್ಠ

ಚಿಕ್ಕಮಗಳೂರು:  ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ಕ್ಷೇತ್ರದಲ್ಲಿ ಹೊಸ ಆಯಾಮ ವನ್ನು ಸೃಷ್ಟಿಸುವ ಕೆನಾನ್ ಕ್ಯಾಮರಾಗಳು ಛಾಯಾಗ್ರಾಹಕರ...

ಕೊಳಮಗೆ ಬಳಿಯ ಭದ್ರಾ ನದಿಗೆ ಬಿದ್ದ ಪಿಕ್‌ಅಪ್: ಯುವಕ ಸಾವಿನ ಶಂಕೆ

ಕಳಸ: ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್‌ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ...

ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ

ಕೊಪ್ಪ : ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು...