Home ರಂಭಾಪುರಿ ಪೀಠದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ಕೆ 25 ಲಕ್ಷ ರೂ ಅನುದಾನ
HomechikamagalurLatest Newsnamma chikmagalur

ರಂಭಾಪುರಿ ಪೀಠದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ಕೆ 25 ಲಕ್ಷ ರೂ ಅನುದಾನ

Share
Share

ಬಾಳೆಹೊನ್ನೂರು: ರಂಭಾಪುರಿ ಪೀಠದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದಿಂದ (ಕೆಆರ್‌ಇಡಿಎಲ್‍) ₹25 ಲಕ್ಷ ಅನುದಾನ ನೀಡಲಾಗಿದೆ ಎಂದು ಕೆಆರ್‌ಇಡಿಎಲ್ ಅಧ್ಯಕ್ಷ ಟಿ.ಡಿ. ರಾಜೇಗೌಡ ಹೇಳಿದರು.

ರಂಭಾಪುರಿ ಪೀಠದಲ್ಲಿ ವೀರಸೋಮೇಶ್ವರ ಸ್ವಾಮೀಜಿಗೆ ಚೆಕ್ ಹಸ್ತಾಂತರಿಸಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಂಭಾಪುರಿ ಪೀಠಕ್ಕೆ ದೇಶದ ವಿವಿಧೆಡೆಯಿಂದ ಯಾತ್ರಾರ್ಥಿಗಳು ಭೇಟಿ ನೀಡುತ್ತಿರುವುದರಿಂದ ಅಭಿವೃದ್ಧಿ ಕಾರ್ಯಗಳ ಅಗತ್ಯ ಹೆಚ್ಚಿದ್ದು, ಕಾಮಗಾರಿ ನಡೆಸಲು ಅನುಕೂಲವಾಗಲಿದೆ ಎಂದರು. ರಂಭಾ ಪುರಿ ಪೀಠಕ್ಕೆ ತೆರಳುವ ರಸ್ತೆ ಅಭಿವೃದ್ಧಿ, ರೇಣುಕಾಚಾರ್ಯರ 51 ಅಡಿ ಎತ್ತರದ ವಿಗ್ರಹ ನಿರ್ಮಾಣದ ಸ್ಥಳ ಅಭಿವೃದ್ಧಿ, ಸಮುದಾಯ ಭವನ ಅಭಿವೃದ್ಧಿ ಮಾಡಲಾಗುವುದು ಎಂದರು.

ಮುಂಗಾರು ಪೂರ್ವಸಿದ್ಧತೆ ಕುರಿತು ಪ್ರತಿಕ್ರಿಯಿಸಿದ ಅವರು, ನಾಲ್ಕೈದು ವರ್ಷಗಳಲ್ಲಿ ಈ ಭಾಗದಲ್ಲಿ ಮಳೆಯಿಂದ ಹಾನಿಯಾದ ಬಗ್ಗೆ ಗಮನದಲ್ಲಿದೆ.  ಕೇತ್ರದಲ್ಲಿ ಉಂಟಾದ ಭೂ ಕುಸಿತ, ಸೇತುವೆ, ರಸ್ತೆ, ಮನೆ, ಜೀವ ಹಾನಿ ಬಗ್ಗೆ ಮಾಹಿತಿ ಇದೆ. ಮಳೆಗಾಲದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಶೀಘ್ರದಲ್ಲೇ ನಡೆಸಲಾಗುವುದು ಎಂದರು.

ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಎಸ್. ಜಯಪ್ರಕಾಶ್, ಬಿ.ಕಣಬೂರು ಗಾಮ ಪಂಚಾಯಿತಿ ಅಧ್ಯಕ್ಷ ರವಿಚಂದ್ರ, ಸದಸ್ಯರಾದ ಎಂ.ಜೆ. ಮಹೇಶ್ ಆಚಾರ್ಯ, ಬಿ.ಸಿ. ಸಂತೋಷ್‍ ಕುಮಾರ್, ಇಬ್ರಾಹಿಂ ಶಾಫಿ, ಪಿಎಸಿಎಸ್ ನಿರ್ದೇಶಕ ಕೆ.ಕೆ. ಗೌತಮ್, ಕ್ರೀಡಾಪಟು ಒ.ಡಿ. ಸ್ಟೀಫನ್, ಶಿವಶಂಕರ್, ಕೆ.ಟಿ. ಗೋವಿಂದೇಗೌಡ, ಸುಧಾಕರ್, ಪ್ರಭಾಕರ್ ಶೆಟ್ಟಿ, ವಿನುತ್ ಭಾಗವಹಿಸಿದ್ದರು.

Rs 25 lakh grant for various development works at Rambhapuri Peetha

Share

Leave a comment

Leave a Reply

Your email address will not be published. Required fields are marked *

Don't Miss

ಬಾಲ್ಯ ವಿವಾಹ ನಡೆದರೆ ಪೋಕ್ಸೋ ಪ್ರಕರಣ ದಾಖಲಿಸಲು ಸೂಚನೆ

ಚಿಕ್ಕಮಗಳೂರು: ಬಾಲ್ಯ ವಿವಾಹಕ್ಕೆ ನಿಷೇಧವಿದ್ದರೂ, ರಹಸ್ಯವಾಗಿ ಅಪ್ರಾಪ್ತರ ಮದುವೆ ನಡೆದರೆ ಪೋಕ್ಸೋ ಕಾಯಿದೆಯಡಿಯಲ್ಲೂ ಪ್ರಕರಣ ದಾಖಲಿಸುವಂತೆ ಚಿಕ್ಕಮಗಳೂರು ತಹಶೀಲ್ದಾರ್ ರೇಶ್ಮಾ ಸೂಚಿಸಿದ್ದಾರೆ. ಅವರು ಮಂಗಳವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು...

ಜೀವರಾಜ್ ವಿರುದ್ಧದ FIRಗೆ ಹೈಕೋರ್ಟ್ ತಡೆ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆ ದಾಖಲಾದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಬಿಜೆಪಿ ಶಾಸಕ ಡಿ.ಎನ್. ಜೀವರಾಜ್...

Related Articles

ಹೃದಯಾಘಾತದಿಂದ ಶೃಂಗೇರಿಯ ಪಿ.ಸಿ. ಸತೀಶ್ ನಿಧನ

ಚಿಕ್ಕಮಗಳೂರು: ಶೃಂಗೇರಿ ಇಆರ್‌ಎಸ್‌ಎಸ್ (ERSS) ರೆಸ್ಪಾಂಡರ್ ಪಿ.ಸಿ. 612 ಸತೀಶ್ ಅವರು ಇಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಹಾಜರಾಗಲು...

ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ನೂತನ ಕಾರ್ಯಕಾರಿಸಮಿತಿ ಸದಸ್ಯರ ಆಯ್ಕೆ

ಚಿಕ್ಕಮಗಳೂರು : ನಗರದ ರತ್ನಗಿರಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘಕ್ಕೆ ಕಾರ್ಯಕಾರಿಸಮಿತಿ ಸದಸ್ಯರ ಆಯ್ಕೆಗಾಗಿ ಭಾನುವಾರ...

ಜೀನವಸಂಧ್ಯಾದ ನವೀಕೃತ ಪಾಕಶಾಲೆ ಲೋಕಾರ್ಪಣೆ

ಚಿಕ್ಕಮಗಳೂರು: ಜೀನವಸಂಧ್ಯಾದಲ್ಲಿ ೩೫ಲಕ್ಷರೂ. ಅಂದಾಜುವೆಚ್ಚದ ನವೀಕೃತ ಪಾಕಶಾಲೆ ಮತ್ತು ಸಿಬ್ಬಂದಿ ವಸತಿಗೃಹವನ್ನು ರೋಟರಿಜಿಲ್ಲಾ ಮಾಜಿಗೌರ್‍ನರ್ ಎಂ.ಸಿ.ಶೇಖರ್...

ಮಲೆನಾಡು ಭಾಗದಲ್ಲಿ ವರುಣನ ಅಬ್ಬರ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಮುಂಗಾರು ಪೂರ್ವ ವರುಣನ ಅಬ್ಬರ ಜೋರಾಗಿದ್ದು ಜಿಲ್ಲೆಯ ಹಲವೆಡೆ ಧಾರಾಕಾರ...